ಬಾಂಗ್ಲಾ ಅಭಿಮಾನಿ Tiger Roby ಮೇಲೆ ಹಲ್ಲೆ 
ಕ್ರಿಕೆಟ್

India vs Bangladesh: 2ನೇ ಟೆಸ್ಟ್ ಪಂದ್ಯದ ವೇಳೆ ಬಾಂಗ್ಲಾ ಅಭಿಮಾನಿಗೆ ಪುಂಡರಿಂದ ಥಳಿತ, ಆಸ್ಪತ್ರೆಗೆ ದಾಖಲು!

ಕಾನ್ಪುರದ ಗ್ರೀನ್ ಪಾರ್ಕ್ ಕ್ರಿಕೆಟ್ ಮೈದಾನದಲ್ಲಿ ಇಂದು ಭಾರತ ಮತ್ತು ಬಾಂಗ್ಲಾದೇಶ ನಡುವಿನ 2ನೇ ಟೆಸ್ಟ್ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ಭಾರತ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಕಾನ್ಪುರ: ಭಾರತ ಮತ್ತು ಬಾಂಗ್ಲಾದೇಶ ನಡುವಿನ 2ನೇ ಟೆಸ್ಟ್ ಪಂದ್ಯದ ವೇಳೆ ಬಾಂಗ್ಲಾದೇಶ ಅಭಿಮಾನಿಗೆ ಮೈದಾನದಲ್ಲೇ ಪುಂಡರ ಗ್ಯಾಂಗ್ ವೊಂದು ಮನಸೋ ಇಚ್ಛೆ ಥಳಿಸಿರುವ ಘಟನೆ ವರದಿಯಾಗಿದೆ.

ಕಾನ್ಪುರದ ಗ್ರೀನ್ ಪಾರ್ಕ್ ಕ್ರಿಕೆಟ್ ಮೈದಾನದಲ್ಲಿ ಇಂದು ಭಾರತ ಮತ್ತು ಬಾಂಗ್ಲಾದೇಶ ನಡುವಿನ 2ನೇ ಟೆಸ್ಟ್ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ಭಾರತ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಬಾಂಗ್ಲಾದೇಶ ಮೊದಲು ಬ್ಯಾಟಿಂಗ್ ಮಾಡುತ್ತಿದ್ದು, 3 ವಿಕೆಟ್ ನಷ್ಟಕ್ಕೆ 107 ರನ್ ಗಳಿಸಿದೆ. ಈ ನಡುವೆ ಗ್ರೀನ್ ಪಾರ್ಕ್ ಕ್ರೀಡಾಂಗಣದಲ್ಲಿ ಅಭಿಮಾನಿಗಳ ಘರ್ಷಣೆ ಪ್ರಕರಣ ವರದಿಯಾಗಿದ್ದು, ಪಂದ್ಯ ವೀಕ್ಷಿಸಲು ಬಂದಿದ್ದ ಬಾಂಗ್ಲಾದೇಶ ಕ್ರಿಕೆಟ್ ತಂಡದ ಅಭಿಮಾನಿಗೆ ಪುಂಡರ ಗ್ಯಾಂಗ್ ವೊಂದು ಥಳಿಸಿದೆ.

ಪಂದ್ಯ ನಡೆಯುತ್ತಿದ್ದಾಗ ಮೈದಾನದ ಆವರಣದಲ್ಲೇ ಬಾಂಗ್ಲಾದೇಶ ಕ್ರಿಕೆಟ್ ತಂಡದ ಸೂಪರ್ ಫ್ಯಾನ್ 'ಟೈಗರ್ ರಾಬಿ' (super fan' Tiger Roby)ಯನ್ನು ಪುಂಡರ ಗ್ಯಾಂಗ್ ಥಳಿಸಿದೆ. ಈ ವೇಳೆ ಥಳಿತಕ್ಕೊಳಗಾದ ರಾಬಿಯನ್ನು ಭಧ್ರತಾ ಸಿಬ್ಬಂದಿ ರಕ್ಷಿಸಿದ್ದು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪ್ರಸ್ತುತ ಹಲ್ಲೆ ಪ್ರಕರಣ ದಾಖಲಿಸಿಕೊಂಡಿರುವ ಕಾನ್ಪುರ ಪೊಲೀಸರು ಹಲ್ಲೆ ಮಾಡಿದವರ ವಿರುದ್ಧ ತನಿಖೆ ನಡೆಸಿದ್ದಾರೆ.

ಸಿರಾಜ್ ವಿರುದ್ಧ ಹೇಳಿಕೆ ಆರೋಪ

ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಮಾಹಿತಿ ಪ್ರಕಾರ ಈತ, ಭಾರತದ ವೇಗಿ ಮೊಹಮ್ಮದ್ ಸಿರಾಜ್ ಅವರನ್ನು ನಿಂದಿಸುತ್ತಿದ್ದ ಎಂದು ಹೇಳಲಾಗಿದ್ದು, ಇದರಿಂದ ಜನರು ಆಕ್ರೋಶಗೊಂಡಿದ್ದಾರೆ. ಅಲ್ಲದೆ ಈತ ಚೆನ್ನೈನಲ್ಲೂ ಟೀಂ ಇಂಡಿಯಾ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದ ಎಂಬ ಆರೋಪವೂ ಇದೆ. ಇದೇ ಕಾರಣಕ್ಕೆ ಅಭಿಮಾನಿಗಳು ಆತನನ್ನು ಥಳಿಸಿದ್ದಾರೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT