ಬ್ರಾವೋ ಮತ್ತು ಧೋನಿ 
ಕ್ರಿಕೆಟ್

IPL 2025: ಚೆನ್ನೈ ತಂಡಕ್ಕೆ Dwayne Bravo ಗುಡ್ ಬೈ, KKR ತಂಡದಲ್ಲಿ ಗಂಭೀರ್ ಸ್ಥಾನಕ್ಕೆ ಆಯ್ಕೆ!

ಕೋಲ್ಕತಾ ತಂಡದಲ್ಲಿ ಮೆಂಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಗೌತಮ್ ಗಂಭೀರ್ ಇದೀಗ ಟೀಂ ಇಂಡಿಯಾದ ಪ್ರಧಾನ ಕೋಚ್ ಆಗಿ ಆಯ್ಕೆಯಾಗಿದ್ದು, ಅವರ ಮೆಂಟರ್ ಸ್ಥಾನಕ್ಕೆ ಬ್ರಾವೋ ಆಯ್ಕೆಯಾಗಿದ್ದಾರೆ.

ನವದೆಹಲಿ: 2025ರ ಐಪಿಎಲ್ ಕ್ರಿಕೆಟ್ ಟೂರ್ನಿಯ ಸಿದ್ಧತೆಗಳು ಆರಂಭಗೊಂಡಿದ್ದು, ಚೆನ್ನೈ ಮತ್ತು ಕೋಲ್ಕತಾ ತಂಡಗಳಲ್ಲಿ ಮಹತ್ತರ ಬದಲಾವಣೆಗಳು ಆರಂಭವಾಗಿವೆ.

ಹೌದು.. ಇಷ್ಟು ದಿನ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿದ್ದ ವೆಸ್ಟ್ ಇಂಡೀಸ್ ತಂಡದ ಮಾಜಿ ವೇಗಿ ಡ್ವೇಯ್ನ್ ಬ್ರಾವೋ ಇದೀಗ ಚೆನ್ನೈ ತಂಡ ತೊರೆದಿದ್ದು, ಕೋಲ್ಕತಾ ನೈಟ್ ರೈಡರ್ಸ್ ತಂಡ ಸೇರಿಕೊಂಡಿದ್ದಾರೆ.

ಕೋಲ್ಕತಾ ತಂಡದಲ್ಲಿ ಮೆಂಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಗೌತಮ್ ಗಂಭೀರ್ ಇದೀಗ ಟೀಂ ಇಂಡಿಯಾದ ಪ್ರಧಾನ ಕೋಚ್ ಆಗಿ ಆಯ್ಕೆಯಾಗಿದ್ದು, ಅವರ ಮೆಂಟರ್ ಸ್ಥಾನಕ್ಕೆ ಬ್ರಾವೋ ಆಯ್ಕೆಯಾಗಿದ್ದಾರೆ.

ಕೋಲ್ಕತಾ ತಂಡದ ಮೆಂಟರ್ ಆಗಿದ್ದ ಗೌತಮ್ ಗಂಭೀರ್ ಅವರ ಸ್ಥಾನಕ್ಕೆ ಅನುಭವಿ ಕ್ರಿಕೆಟಿಗ ಡ್ವೇನ್ ಬ್ರಾವೋ ಅವರನ್ನು ನೇಮಕ ಮಾಡಲಾಗಿದೆ ಎಂದು ಕೆಕೆಆರ್ ಫ್ರಾಂಚೈಸಿ ತಿಳಿಸಿದೆ.

ಇತ್ತೀಚೆಗಷ್ಟೇ ಎಲ್ಲಾ ರೀತಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದ ಡ್ವೇನ್ ಬ್ರಾವೋ ಇದೀಗ ಐಪಿಎಲ್‌ನಲ್ಲಿ ಹೊಸ ತಂಡದೊಂದಿಗೆ ಕಾಣಿಸಿಕೊಳ್ಳಲಿದ್ದಾರೆ.

ಪ್ರಸ್ತುತ ವೆಸ್ಟ್ ಇಂಡೀಸ್​ನಲ್ಲಿ ನಡೆಯುತ್ತಿರುವ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಆಡುತ್ತಿದ್ದ ಬ್ರಾವೋ, ಗಾಯದ ಕಾರಣದಿಂದಾಗಿ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಈ ಮೂಲಕ ಬಹಳ ವರ್ಷಗಳಿಂದ ಸಿಎಸ್​ಕೆ ತಂಡದೊಂದಿಗಿನ ಬಂಧವನ್ನು ಬ್ರಾವೋ ಮುರಿದುಕೊಂಡಿದ್ದಾರೆ.

ಕಳೆದ ಆವೃತ್ತಿಯವರೆಗೂ ಸಿಎಸ್​ಕೆ ತಂಡದ ಬೌಲಿಂಗ್ ಕೋಚ್​ ಆಗಿ ಸೇವೆ ಸಲ್ಲಿಸುತ್ತಿದ್ದ ಬ್ರಾವೋ, ಇದೀಗ ಕೆಕೆಆರ್ ತಂಡದಲ್ಲಿ ಹೊಸ ಇನ್ನಿಂಗ್ಸ್ ಆರಂಭಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ