ಮಳೆಕಾಟಕ್ಕೆ 2ನೇ ದಿನದಾಟ ರದ್ದು 
ಕ್ರಿಕೆಟ್

India vs Bangladesh, 2nd Test: ಮಳೆಕಾಟ, ಒಂದೂ ಎಸೆತ ಕಾಣದೇ 2ನೇ ದಿನದಾಟ ರದ್ದು!

ಕಾನ್ಪುರದ ಗ್ರೀನ್ ಪಾರ್ಕ್ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದ 2ನೇ ದಿನದಾಟ ಮಳೆಯಿಂದಾಗಿ ರದ್ದಾಗಿದೆ.

ಕಾನ್ಪುರ: ಭಾರತ ಮತ್ತು ಬಾಂಗ್ಲಾದೇಶ ನಡುವಿನ 2ನೇ ಟೆಸ್ಟ್ ಪಂದ್ಯದ 2ನೇ ದಿನದಾಟ ಒಂದೂ ಎಸೆತ ಕಾಣದೇ ರದ್ದಾಗಿದೆ.

ಕಾನ್ಪುರದ ಗ್ರೀನ್ ಪಾರ್ಕ್ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದ 2ನೇ ದಿನದಾಟ ಮಳೆಕಾಟದಿಂದ ರದ್ದಾಗಿದೆ.

ಶುಕ್ರವಾರ ರಾತ್ರಿಯಿಂದ ಶುರುವಾದ ಮಳೆಯು ಶನಿವಾರ ಮಧ್ಯಾಹ್ನದವರೆಗೂ ಮುಂದುವರೆದಿದ್ದು, ದರಿಂದ ಮೈದಾನವು ಸಂಪೂರ್ಣ ತೇವಾಂಶದಿಂದ ಕೂಡಿದ್ದು, ಹೀಗಾಗಿ 2ನೇ ದಿನದಾಟವನ್ನು ರದ್ದುಗೊಳಿಸಲು ನಿರ್ಧರಿಸಲಾಯಿತು.

ಇದಕ್ಕೂ ಮುನ್ನ ಮೊದಲ ದಿನದಾಟ ಕೂಡ ಮಳೆಯ ಕಾರಣ ತಡವಾಗಿ ಶುರುವಾಗಿತ್ತು. ಈ ವೇಳೆ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಬಾಂಗ್ಲಾದೇಶ್ ತಂಡವು 35 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 107 ರನ್ ಕಲೆಹಾಕಿತು. ಈ ವೇಳೆ ಕಾರ್ಮೋಡ ಆವರಿಸಿದ್ದರಿಂದ ಪಂದ್ಯವನ್ನು ಸ್ಥಗಿತಗೊಳಿಸಲಾಗಿತ್ತು.

ಇದೀಗ 2ನೇ ದಿನದಾಟ ಕೂಡ ಒಂದೂ ಎಸೆತ ಕಾಣದೇ ರದ್ದಾಗಿದ್ದು, ಇನ್ನುಳಿದಿರುವುದು ಕೇವಲ ಮೂರು ದಿನದಾಟಗಳು ಮಾತ್ರ. ಆದರೆ ಹವಾಮಾನ ಇಲಾಖೆಯ ವರದಿಯ ಪ್ರಕಾರ ಭಾನುವಾರ ಕೂಡ ಮಳೆ ಮುಂದವರೆಯಲಿದ್ದು, ಹೀಗಾಗಿ 3ನೇ ದಿನದಾಟ ಕೂಡ ಸಂಪೂರ್ಣವಾಗಿ ನಡೆಯುವುದು ಅನುಮಾನ ಎನ್ನಲಾಗಿದೆ.

ನಿನ್ನೆ ಮಳೆಯಿಂದಾಗಿ ಆಟ ನಿಂತಾಗ ಬಾಂಗ್ಲಾದೇಶ ತಂಡ 3 ವಿಕೆಟ್ ನಷ್ಟಕ್ಕೆ 107ರನ್ ಗಳಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT