ರೋಹಿತ್ ಶರ್ಮಾ 
ಕ್ರಿಕೆಟ್

IPL 2025: ಸತತ ವೈಫಲ್ಯ; ರೋಹಿತ್ ಶರ್ಮಾ, ಧೋನಿ ಕುರಿತು ವ್ಯಾಪಕ ಟೀಕೆ!

3 ಪಂದ್ಯಗಳನ್ನಾಡಿರುವ ರೋಹಿತ್ ಶರ್ಮಾ ಗಳಿಸಿರುವುದು ಕೇವಲ 21 ರನ್. ಹೀಗಾಗಿ ಸದ್ಯ ನಡೆಯುತ್ತಿರುವ ಐಪಿಎಲ್ ನಲ್ಲಿ ರೋಹಿತ್ ಶರ್ಮಾ ಅವರ ಕಳಪೆ ಫಾರ್ಮ್ ಬಗ್ಗೆ ಅಭಿಮಾನಿಗಳು ಹಾಗೂ ಪರಿಣಿತರು ತೀವ್ರವಾಗಿ ಟೀಕಿಸುತ್ತಿದ್ದಾರೆ.

ಮುಂಬೈ: ಸೋಮವಾರ ರಾತ್ರಿ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಮುಂಬೈ ಇಂಡಿಯನ್ಸ್- ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಐಪಿಎಲ್ 2025 ಪಂದ್ಯದಲ್ಲಿ ರೋಹಿತ್ ಶರ್ಮಾ 13 ರನ್ ಗಳಿಸಿ ಔಟಾಗುವ ಮೂಲಕ ಅಭಿಮಾನಿಗಳಿಗೆ ತೀವ್ರ ನಿರಾಸೆ ಮೂಡಿಸಿದರು.

3 ಪಂದ್ಯಗಳನ್ನಾಡಿರುವ ರೋಹಿತ್ ಶರ್ಮಾ ಗಳಿಸಿರುವುದು ಕೇವಲ 21 ರನ್. ಹೀಗಾಗಿ ಸದ್ಯ ನಡೆಯುತ್ತಿರುವ ಐಪಿಎಲ್ ನಲ್ಲಿ ರೋಹಿತ್ ಶರ್ಮಾ ಅವರ ಕಳಪೆ ಫಾರ್ಮ್ ಬಗ್ಗೆ ಅಭಿಮಾನಿಗಳು ಹಾಗೂ ಪರಿಣಿತರು ತೀವ್ರವಾಗಿ ಟೀಕಿಸುತ್ತಿದ್ದಾರೆ.

ಅವರು ಕ್ರೀಸ್‌ನಲ್ಲಿದ್ದ ಅಲ್ಪಾವಧಿಯಲ್ಲಿ ಒಂದು ಸಿಕ್ಸರ್ ಹೊಡೆದರು. ಆದರೆ ಅಂತಿಮವಾಗಿ ಆಂಡ್ರೆ ರಸೆಲ್ ಓವರ್ ನಲ್ಲಿ ಔಟಾದರು. ಅವರ ಫಾರ್ಮ್‌ ಬಗ್ಗೆ ಸಾಮಾಜಿಕ ಜಾಲತಾಣ ಬಳಕೆದಾರರು ತೀವ್ರವಾಗಿ ನಿರಾಸೆಗೊಂಡಿದ್ದು, MS ಧೋನಿಯೊಂದಿಗೆ ವ್ಯಾಪಕವಾಗಿ ಟೀಕಾ ಪ್ರಹಾರ ನಡೆಸುತ್ತಿದ್ದಾರೆ.

ಚೊಚ್ಚಲ ಐಪಿಎಲ್ ಪಂದ್ಯದಲ್ಲೇ ಅಶ್ವನಿ ಕುಮಾರ್ ದಾಖಲೆಯ ನಾಲ್ಕು ವಿಕೆಟ್ ಮತ್ತು ರಿಯಾನ್ ರಿಕಲ್ಟನ್ ಅವರ ಅಜೇಯ 62 ರನ್ ಗಳಿಂದ ಮುಂಬೈ ಇಂಡಿಯನ್ಸ್ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಎಂಟು ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು. ಪಂಜಾಬ್‌ನ ಝಂಜೇರಿಯ 23 ವರ್ಷದ ಅಶ್ವನಿ ಐಪಿಎಲ್ ಚೊಚ್ಚಲ ಪಂದ್ಯದಲ್ಲಿ ನಾಲ್ಕು ವಿಕೆಟ್ ಪಡೆದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ದೀಪಕ್ ಚಹರ್ 2, ಟ್ರೆಂಟ್ ಬೌಲ್ಟ್ 1 ಮತ್ತು ಹಾರ್ದಿಕ್ ಪಾಂಡ್ಯ 1 ವಿಕೆಟ್ ಪಡೆಯುವುದರೊಂದಿಗೆ ಕೆಕೆಆರ್ ತಂಡವನ್ನು 16.2 ಓವರ್ ಗಳಲ್ಲಿ ಕೇವಲ 116 ರನ್ ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾದರು. ರೋಹಿತ್ ಶರ್ಮಾ (13) ರನ್ ಗಳಿಗೆ ಔಟಾದ ಬಳಿಕ ರಿಯಾನ್ ರಿಕೆಲ್ಟನ್ (41 ಎಸೆತಗಳಲ್ಲಿ ಅಜೇಯ 62), ಸೂರ್ಯ ಕುಮಾರ್ ಯಾದವ್ 9 ಎಸೆತಗಳಲ್ಲಿ ಅಜೇಯ 27 ರನ್ ಗಳಿಸುವುದರೊಂದಿಗೆ ಮುಂಬೈ ಇಂಡಿಯನ್ಸ್ ತಂಡ ಕೆಕೆಆರ್ ವಿರುದ್ಧ ಸುಲಭ ಗೆಲುವು ದಾಖಲಿಸಿತು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪೆಟ್ರೋಲಿಯಂ ಉತ್ಪನ್ನಗಳ ಮಿತಬಳಕೆ "ಈಗಿನ ಅಗತ್ಯ"-ಪ್ರಧಾನಿ ಮೋದಿ: ಮುಂದೆ ಕಾದಿದೆಯಾ ಸಂಕಷ್ಟದ ದಿನಗಳು?

IPL 2026: ಕೊನೆಯ ಎಸೆತದಲ್ಲಿ RCBಗೆ ರೋಚಕ ಜಯ; MI ವಿರುದ್ಧದ ಪಂದ್ಯ ಗೆಲ್ಲಿಸಿದ ಕೃನಾಲ್, ಭುವಿ; ಅಗ್ರಸ್ಥಾನಕ್ಕೇರಿದ ಆರ್‌ಸಿಬಿ!

1 ಮತದಿಂದ DMK ಅಭ್ಯರ್ಥಿ ಪೆರಿಯಕರುಪ್ಪನ್ ಸೋಲು; ಅಂಚೆ ಮತ ಗೊಂದಲದ ಬಗ್ಗೆ ECI ವಿರುದ್ಧ ಮದ್ರಾಸ್ ಹೈಕೋರ್ಟ್ ಕಿಡಿ!

S Keerthana: ವಿಜಯ್ ಕ್ಯಾಬಿನೆಟ್ ನಲ್ಲಿ ಪಂಚಭಾಷಾ ಪಾರಂಗತೆ; ಅತಿ ಕಿರಿಯ ಶಾಸಕಿ!

Pak ನಲ್ಲಿ ರಕ್ತದೋಕುಳಿ: ಹೊಸ ಉಗ್ರ ಸಂಘಟನೆ ನಡೆಸಿದ ದಾಳಿಯಲ್ಲಿ 21 ಸೈನಿಕರು ಬಲಿ; ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ!

SCROLL FOR NEXT