ಇಶಾನ್ ಕಿಶನ್ ಮತ್ತು ಶ್ರೇಯಸ್ ಅಯ್ಯರ್ 
ಕ್ರಿಕೆಟ್

BCCI ಸೆಂಟ್ರಲ್ ಕಾಂಟ್ರಾಕ್ಟ್: ಶತಕ ಸಿಡಿಸಿದ್ದ Ishan Kishanಗೆ ಶಾಕ್, Shreyas Iyerಗೆ ಬಂಪರ್ ಸಾಧ್ಯತೆ!

ಬಿಸಿಸಿಐ ಮೂಲಕಗಳ ಪ್ರಕಾರ ಈ ಬಾರಿ ಬಿಸಿಸಿಐ ಸೆಂಟ್ರಲ್ ಕಾಂಟ್ರಾಕ್ಟ್ ನಲ್ಲಿ ಶ್ರೇಯಸ್ ಅಯ್ಯರ್ ಗೆ ಬಂಪರ್ ಸಿಗುವ ಸಾಧ್ಯತೆ ಇದೆ ಎಂದು ಹೇಳಾಗಿದೆ.

ಮುಂಬೈ: ತೀವ್ರ ಕುತೂಹಲ ಕೆರಳಿಸಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಸೆಂಟ್ರಲ್ ಕಾಂಟ್ರಾಕ್ಟ್ ಪರಿಷ್ಕರಣೆಗೆ ಕ್ಷಣಗಣನೆ ಆರಂಭವಾಗಿದ್ದು, ಚಾಂಪಿಯನ್ಸ್ ಟ್ರೋಫಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಶ್ರೇಯಸ್ ಅಯ್ಯರ್ (Shreyas Iyer) ಗೆ ಈ ಬಾರಿ ಬಂಪರ್ ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಹೌದು.. BCCI ಸೆಂಟ್ರಲ್ ಕಾಂಟ್ರಾಕ್ಟ್ ಘೋಷಣೆಗೆ ಕ್ಷಣಗಣನೆ ಆರಂಭವಾಗಿದ್ದು, ಈಗಾಗಲೇ ಬಿಸಿಸಿಐ ಪದಾಧಿಕಾರಿಗಳು ಆಟಗಾರರ ಪರಿಷ್ಕೃತ ಒಪ್ಪಂದಗಳನ್ನು ಸಿದ್ಧಪಡಿಸಿದ್ದಾರೆ ಎಂದು ಹೇಳಲಾಗಿದೆ.

ಬಿಸಿಸಿಐ ಮೂಲಕಗಳ ಪ್ರಕಾರ ಈ ಬಾರಿ ಬಿಸಿಸಿಐ ಸೆಂಟ್ರಲ್ ಕಾಂಟ್ರಾಕ್ಟ್ ನಲ್ಲಿ ಶ್ರೇಯಸ್ ಅಯ್ಯರ್ ಗೆ ಬಂಪರ್ ಸಿಗುವ ಸಾಧ್ಯತೆ ಇದೆ ಎಂದು ಹೇಳಾಗಿದೆ. ಅಂತೆಯೇ ಐಪಿಎಲ್ ಟ್ರೋಫಿಯಲ್ಲಿ ಚೊಚ್ಚಲ ಪಂದ್ಯದಲ್ಲೇ ಶತಕ ಸಿಡಿಸಿ ಆಯ್ಕೆ ಸಮಿತಿಗೆ ಖಡರ್ ಸಂದೇಶ ರವಾನಿಸಿದ್ದ ಇಶಾನ್ ಕಿಶನ್ ಗೆ ಮಾತ್ರ ಶಾಕ್ ಕಾದಿದೆ ಎಂದು ಹೇಳಲಾಗಿದೆ.

ಎ+ ನಲ್ಲಿ ಕೊಹ್ಲಿ, ರೋಹಿತ್

ಇನ್ನು ಭಾರತದ ಬ್ಯಾಟಿಂಗ್ ದಿಗ್ಗಜರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ತಮ್ಮ ಎ+ ದರ್ಜೆಯಲ್ಲಿ ಮುಂದುವರೆದಿದ್ದು, ಇವರು ಬಿಸಿಸಿಐನ ವಾರ್ಷಿಕ ಆಟಗಾರರ ಒಪ್ಪಂದದಲ್ಲಿ ರೂ. 7 ಕೋಟಿ ರೂ ವೇತನ ಪಡೆಯಲಿದ್ದಾರೆ. ಟಿ20 ಸ್ವರೂಪದಿಂದ ನಿವೃತ್ತರಾದ ನಂತರವೂ, ರೋಹಿತ್ ಮತ್ತು ಕೊಹ್ಲಿ ಎ+ ವಿಭಾಗದಲ್ಲಿ ಮುಂದುವರಿಯಲಿದ್ದಾರೆ.

ಅಯ್ಯರ್ ಬಂಪರ್

ಇನ್ನು ಇತ್ತೀಚಿನ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಶ್ರೇಯಸ್ ಅಯ್ಯರ್ ಬಿಸಿಸಿಐ ಸೆಂಟ್ರಲ್ ಒಪ್ಪಂದ ಪಟ್ಟಿಯಲ್ಲಿ ಮತ್ತೆ ಸ್ಥಾನ ಪಡೆಯಲು ಸಜ್ಜಾಗಿದ್ದು, ಅವರಿಗೆ ಎ ಅಥವಾ ಬಿ ದರ್ಜೆಯಲ್ಲಿ ಸೇರಿಸುವ ಅವಕಾಶವಿದೆ ಎಂದು ಹೇಳಲಾಗಿದೆ.

ಇಶಾನ್ ಕಿಶನ್ ಗೆ ಶಾಕ್

ಇನ್ನು ಕಳೆದ ವರ್ಷ ಶ್ರೇಯಸ್ ಅಯ್ಯರ್ ಜೊತೆಯಲ್ಲೇ ಅವರೊಂದಿಗೆ ಬಿಸಿಸಿಐ ಸೆಂಟ್ರಲ್ ಕಾಂಟ್ರಾಕ್ಟ್ ನಿಂದ ಹೊರಗುಳಿದಿದ್ದ ವಿಕೆಟ್ ಕೀಪರ್-ಬ್ಯಾಟರ್ ಇಶಾನ್ ಕಿಶನ್ ಗೆ ಈ ಬಾರಿಯೂ ನಿರಾಶೆ ಎದುರಾಗುವ ಸಾಧ್ಯತೆ ಇದ್ದು, ಕೇಂದ್ರೀಯ ಒಪ್ಪಂದ ಪಡೆಯಲು ಇಶಾನ್ ಕಿಶನ್ ಮತ್ತೊಂದು ವರ್ಷ ಕಾಯಬೇಕಾಗುತ್ತದೆ ಎಂದು ಹೇಳಲಾಗಿದೆ.

ಉಳಿದಂತೆ ಟಿ 20 ವಿಶ್ವಕಪ್ ಮತ್ತು ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತದ ಅಜೇಯ ರನ್‌ಗಳಲ್ಲಿ ಪ್ರಮುಖ ಪಾತ್ರ ವಹಿಸಿದ ಆಲ್ ರೌಂಡರ್ ಅಕ್ಷರ್ ಪಟೇಲ್ ಕೂಡ ಬಡ್ತಿ ಪಡೆಯಲು ಉತ್ತಮ ಅವಕಾಶವನ್ನು ಹೊಂದಿದ್ದಾರೆ.

ಅಲ್ಲದೆ ಕಳೆದ 12 ತಿಂಗಳುಗಳಲ್ಲಿ ವಿವಿಧ ಸ್ವರೂಪಗಳಲ್ಲಿ ಭಾರತಕ್ಕಾಗಿ ಅದ್ಭುತ ಪ್ರದರ್ಶನ ನೀಡುತ್ತಿರುವ ವರುಣ್ ಚಕ್ರವರ್ತಿ, ನಿತೀಶ್ ಕುಮಾರ್ ರೆಡ್ಡಿ ಮತ್ತು ಅಭಿಷೇಕ್ ಶರ್ಮಾ ಕೂಡ ತಮ್ಮ ವೃತ್ತಿ ಜೀವನದ ಮೊದಲ ಕೇಂದ್ರ ಒಪ್ಪಂದವನ್ನು ಗಳಿಸಲು ಉತ್ತಮ ಅವಕಾಶವನ್ನು ಹೊಂದಿದ್ದಾರೆ. ಕಳೆದ ವಾರ, ಬಿಸಿಸಿಐ 2024-25 ಚಕ್ರಕ್ಕಾಗಿ ಭಾರತ ಹಿರಿಯ ಮಹಿಳಾ ತಂಡಕ್ಕೆ ವಾರ್ಷಿಕ ಉಳಿಸಿಕೊಳ್ಳುವವರನ್ನು ಘೋಷಿಸಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT