ಚೆನ್ನೈ ತಂಡಕ್ಕೆ ಮತ್ತೆ ಸೋಲು 
ಕ್ರಿಕೆಟ್

IPL 2025: 'ಮಾಹಿ' ಪಡೆಗೆ ತವರಿನಲ್ಲಿ ಮತ್ತೊಂದು ಮುಖಭಂಗ, DC ವಿರುದ್ಧ CSK ಗೆ ಹೀನಾಯ ಸೋಲು!

ರಾಹುಲ್ ಗೆ ಅಭಿಷೇಕ್ ಪೊರಲ್ ಉತ್ತಮ ಸಾಥ್ ನೀಡಿದರು. ಅಭಿಷೇಕ್ ಕೂಡ ಕೇವಲ 20 ಎಸೆತಗಳಲ್ಲಿ 1 ಸಿಕ್ಸರ್ ಮತ್ತು 4 ಬೌಂಡರಿ ಸಹಿತ 33 ಕಲೆಹಾಕಿ ಜಡೇಜಾ ಬೌಲಿಂಗ್ ನಲ್ಲಿ ಔಟಾದರು.

ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಆರ್ ಸಿಬಿ ವಿರುದ್ಧ ತವರಿನಲ್ಲೇ ಸೋತಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮತ್ತೆ ತವರಿನಲ್ಲಿ ತೀವ್ರ ಮುಖಭಂಗ ಅನುಭವಿಸಿದ್ದು, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧವೂ ಸೋತು ಸುಣ್ಣವಾಗಿದೆ.

ಹೌದು.. ಇಂದು ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 25 ರನ್ ಗಳ ಅಂತರದಲ್ಲಿ ಹೀನಾಯ ಸೋಲು ಕಂಡಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ನಿಗಧಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 183 ರನ್ ಕಲೆ ಹಾಕಿತು.

ಡೆಲ್ಲಿ ಪರ ಕನ್ನಡಿಗ ಕೆಎಲ್ ರಾಹುಲ್ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಕೇವಲ 51 ಎಸೆತಗಳನ್ನು ಎದುರಿಸಿದ ರಾಹುಲ್ 3 ಸಿಕ್ಸರ್ ಮತ್ತು 6 ಬೌಂಡರಿಗಳ ಸಹಿತ 77 ರನ್ ಪೇರಿಸಿದರು. ರಾಹುಲ್ ಗೆ ಅಭಿಷೇಕ್ ಪೊರಲ್ ಉತ್ತಮ ಸಾಥ್ ನೀಡಿದರು. ಅಭಿಷೇಕ್ ಕೂಡ ಕೇವಲ 20 ಎಸೆತಗಳಲ್ಲಿ 1 ಸಿಕ್ಸರ್ ಮತ್ತು 4 ಬೌಂಡರಿ ಸಹಿತ 33 ಕಲೆಹಾಕಿ ಜಡೇಜಾ ಬೌಲಿಂಗ್ ನಲ್ಲಿ ಔಟಾದರು.

ಮಧ್ಯಮ ಕ್ರಮಾಂಕದಲ್ಲಿ ನಾಯಕ ಅಕ್ಸರ್ ಪಟೇಲ್ 21 ರನ್, ಸಮೀರ್ ರಿಜ್ವಿ 20 ರನ್, ಸ್ಚಬ್ಸ್ ಅಜೇಯ 24 ರನ್ ಗಳಿಸಿ ತಂಡದ ಮೊತ್ತ 180ರ ಗಡಿ ದಾಟುವಂತೆ ನೋಡಿಕೊಂಡರು. ಆದರೆ ಆರಂಭಿಕ ಆಟಗಾರ ಜೇಕ್ ಫ್ರೇಸರ್ ಮೆಕ್ ಗ್ರಕ್ ಡಕೌಟ್ ಆಗಿದ್ದು, ಆಶುತೋಷ್ ಶರ್ಮಾ 1 ರನ್ ಗಳಿಸಿ ರನೌಟ್ ಗೆ ಬಲಿಯಾದರು. ಚೆನ್ನೈ ಪರ ಖಲೀಲ್ ಅಹ್ಮದ್ 2 ವಿಕೆಟ್ ಪಡೆದರೆ, ಜಡೇಜಾ, ನೂರ್ ಅಹ್ಮದ್ ಮತ್ತು ಮತೀಶ್ ಪತಿರಾಣಾ ತಲಾ 1 ವಿಕೆಟ್ ಪಡೆದರು.

ಚೇಸಿಂಗ್ ನಲ್ಲಿ ಚೆನ್ನೈಗೆ ಮತ್ತೆ ಹಿನ್ನಡೆ

ಇನ್ನು ತವರು ಕ್ರೀಡಾಂಗಣದಲ್ಲಿ ಚೇಸಿಂಗ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತೆ ಹಿನ್ನಡೆ ಅನುಭವಿಸಿದೆ. ಡೆಲ್ಲಿ ನೀಡಿದ 184 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಚೆನ್ನೈ 20 ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 158ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು.

ಚೆನ್ನೈ ಪರ ವಿಜಯ್ ಶಂಕರ್ ಅಜೇಯ 69 ರನ್ ಮತ್ತು ಮಹೇಂದ್ರ ಸಿಂಗ್ ಧೋನಿ ಅಜೇಯ 30 ರನ್ ಗಳಿಸಿ ಅಂತಿಮ ಎಸೆತದವರೆಗೂ ಕ್ರೀಸ್ ನಲ್ಲಿದ್ದರಾದರೂ ತಂಡವನ್ನು ಗೆಲುವಿನ ದಡ ಸೇರಿಸಲಾಗಲಿಲ್ಲ. ರಚಿನ್ ರವೀಂದ್ರ (3 ರನ್), ನಾಯಕ ರುತುರಾಜ್ ಗಾಯಕ್ವಾಡ್ (5 ರನ್) ಮತ್ತು ರವೀಂದ್ರ ಜಡೇಜಾ (2 ರನ್) ಒಂದಂಕಿ ಮೊತ್ತಕ್ಕೇ ಔಟಾಗಿದ್ದು ಚೆನ್ನೈಗೆ ದುಬಾರಿಯಾಗಿ ಪರಿಣಮಿಸಿತು. ಸ್ಫೋಟಕ ಬ್ಯಾಟರ್ ಶಿವಂ ದುಬೆ ಕೂಡ 18ರನ್ ಗೇ ವಿಕೆಟ್ ಒಪ್ಪಿಸಿದರು.

ಒಟ್ಟಾರೆ ಚೇಸಿಂಗ್ ನಲ್ಲಿ ಮತ್ತೆ ಚೆನ್ನೈ ಎಡವಿದ್ದು, ಮತ್ತೆ ತವರಿನಲ್ಲೇ ಸೋತಿರುವುದು ಅಭಿಮಾನಿಗಳಿಗೆ ನಿರಾಶೆ ಉಂಟುಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಅಲ್ಲಿ ಪ್ರತಿ ಮತದಾರನಿಗೂ photo ID’ಯಿದೆ: ಭಾರತದ ಚುನಾವಣಾ ವ್ಯವಸ್ಥೆ ಕೊಂಡಾಡಿದ ಟ್ರಂಪ್, ಅಮೆರಿಕಾ ಮತದಾನ ವ್ಯವಸ್ಥೆ ಬದಲಾವಣೆಗೆ ಪಟ್ಟು, SAVE America Act ಜಾರಿಗೆ ಆಗ್ರಹ..!

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸಭೆಯಲ್ಲಿ ಪ್ರತಿಭಟನೆ, ಗದ್ದಲ, ಕಲಾಪಕ್ಕೆ ಅಡ್ಡಿ!

'ಸ್ವಲ್ಪ ತಾಳ್ಮೆಯಿಂದ ಕಾಯಿರಿ' ಪಾಕಿಸ್ತಾನ, ಬಾಂಗ್ಲಾದೇಶ, ಅಪ್ಘಾನಿಸ್ತಾನ ಮತ್ತೆ ಭಾರತಕ್ಕೆ ಸೇರಿಕೊಳ್ಳುವ ದಿನ ಬರುತ್ತದೆ- ಬಾಬಾ ರಾಮದೇವ್!

ಆಪ್ ಕಿ ಅದಾಲತ್‌ನಲ್ಲಿ 'ಗಡ್ಡದ ಹಿಂದಿನ ಕಥೆ ಬಿಚ್ಚಿಟ್ಟ ಸೂಪರ್ ಸ್ಟಾರ್ ಯಶ್! Video