ಗುಜರಾತ್ ಟೈಟನ್ಸ್ ಗೆ ಜಯ 
ಕ್ರಿಕೆಟ್

IPL 2025: RR ವಿರುದ್ಧ GT ಭರ್ಜರಿ ಜಯ, ಕನ್ನಡಿಗ Prasidh Krishna 3 ವಿಕೆಟ್!

ಗುಜರಾತ್ ನೀಡಿದ ಬೃಹತ್ ಮೊತ್ತವನ್ನು ಬೆನ್ನು ಹತ್ತಿದ ರಾಜಸ್ತಾನ ತಂಡ 19.2 ಓವರ್ ನಲ್ಲಿ 159ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು ಆ ಮೂಲಕ 58 ರನ್ ಗಳ ಅಂತರದಲ್ಲಿ ಹೀನಾಯ ಸೋಲು ದಾಖಲಿಸಿತು.

ಅಹ್ಮದಾಬಾದ್: ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ರಾಜಸ್ತಾನ ರಾಯಲ್ಸ್ ವಿರುದ್ಧ ಗುಜರಾತ್ ಟೈಟನ್ಸ್ ತಂಡ ಭರ್ಜರಿ ಜಯ ದಾಖಲಿಸಿದೆ.

ಇಂದು ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ನೀಡಿದ 218ರನ್ ಗಳ ಬೃಹತ್ ಗುರಿ ಬೆನ್ನು ಹತ್ತಿದ ರಾಜಸ್ತಾನ ತಂಡ 19.2 ಓವರ್ ನಲ್ಲಿ 159ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು ಆ ಮೂಲಕ 58 ರನ್ ಗಳ ಅಂತರದಲ್ಲಿ ಹೀನಾಯ ಸೋಲು ದಾಖಲಿಸಿತು.

ಗುಜರಾತ್ ಬೃಹತ್ ಮೊತ್ತ

ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ತಾನ ರಾಯಲ್ಸ್ ತಂಡವು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಆದರಂತೆ ಗುಜರಾತ್ ತಂಡ ಮೊದಲು ಬ್ಯಾಟಿಂಗ್ ಮಾಡಿ ಸಾಯಿ ಸುದರ್ಶನ್ (82) ಜಾಸ್ ಬಟ್ಲರ್ (36) ಮತ್ತು ಶಾರುಖ್ ಖಾನ್ (36)ರ ಅಮೋಘ ಬ್ಯಾಟಿಂಗ್ ನೆರವಿನಿಂದ ನಿಗಧಿತ 20 ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 217ರನ್ ಕಲೆಹಾಕಿತು. ಆ ಮೂಲಕ ರಾಜಸ್ತಾನಕ್ಕೆ ಗೆಲ್ಲಲು 218ರನ್ ಗಳ ಬೃಹತ್ ಗುರಿ ನೀಡಿತು.

ಗುಜರಾತ್ ನೀಡಿದ ಬೃಹತ್ ಮೊತ್ತವನ್ನು ಬೆನ್ನು ಹತ್ತಿದ ರಾಜಸ್ತಾನ ತಂಡ 19.2 ಓವರ್ ನಲ್ಲಿ 159ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು ಆ ಮೂಲಕ 58 ರನ್ ಗಳ ಅಂತರದಲ್ಲಿ ಹೀನಾಯ ಸೋಲು ದಾಖಲಿಸಿತು. ರಾಜಸ್ತಾನ ಪರ ಶಿಮ್ರಾನ್ ಹೇಟ್ಮಯರ್ (52 ರನ್) ಅರ್ಧಶತಕ ಮತ್ತು ನಾಯಕ ಸಂಜು ಸ್ಯಾಮ್ಸನ್ (41 ರನ್) ತೀವ್ರ ಹೋರಾಟ ನೀಡಿದರಾದರೂ ಉಳಿದ ಆಟಗಾರರಿಂದ ಉತ್ತಮ ಸಾಥ್ ದೊರೆಯಲಿಲ್ಲ.

ಕನ್ನಡಿಗ ಪ್ರಸಿದ್ಧ ಕೃಷ್ಣಗೆ 3 ವಿಕೆಟ್

ಇನ್ನು ಗುಜರಾತ್ ಪರ ಕನ್ನಡಿಗ ಪ್ರಸಿದ್ಧ ಕೃಷ್ಣ 3 ವಿಕೆಟ್ ಕಬಳಿಸಿದರೆ, ರಶೀದ್ ಖಾನ್ ಮತ್ತು ಸಾಯಿ ಕಿಶೋರ್ ತಲಾ 2 ವಿಕೆಟ್ ಪಡೆದರು. ಉಳಿದಂತೆ ಸಿರಾಜ್, ಅರ್ಶದ್ ಖಾನ್, ಕುಲ್ವಂತ್ ಖೆಜ್ರೋಲಿಯಾ ತಲಾ 1 ವಿಕೆಟ್ ಪಡೆದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಹಾರಾಷ್ಟ್ರ DCM ಅಜಿತ್ ಪವಾರ್ ಪಂಚಭೂತಗಳಲ್ಲಿ ಲೀನ: ಅಮಿತ್ ಶಾ, ದೇವೆಂದ್ರ ಫಡ್ನವೀಸ್‌ ಭಾಗಿ, ಸಕಲ ಗೌರವದೊಂದಿಗೆ ಭಾವಪೂರ್ಣ ಅಂತಿಮ ವಿದಾಯ

ಆತ್ಮವಿಶ್ವಾಸದ ಭಾರತ ಇಂದು ಜಗತ್ತಿಗೆ ಭರವಸೆಯ ದಾರಿದೀಪವಾಗಿದೆ, ಸುಗಮ ಬಜೆಟ್ ಅಧಿವೇಶನಕ್ಕೆ ಎಲ್ಲರೂ ಸಹಕರಿಸಿ: ಪ್ರಧಾನಿ ಮೋದಿ ಮನವಿ-Video

Ajit Pawar Plane Crash: ವಿಮಾನ ದುರಂತ ಸ್ಥಳದಲ್ಲಿ Black Box ಪತ್ತೆ..!

'ಅಂಬರೀಷ್ ನ ಕಾಂಗ್ರೆಸ್‌ಗೆ ಕರ್ಕೊಂಡು ಬಂದೆ, ಅವನು ತೊಳೆದುಬಿಟ್ಟು ಹೋದ: ಲೋಕಸಭೆ ಚುನಾವಣೆಯಲ್ಲಿ 36 ಕೋಟಿ ಖರ್ಚು ಮಾಡಿಸಿ HDK ಮೋಸ ಮಾಡಿದ'

ತಮಿಳು ನಾಡು ಚುನಾವಣೆ: ದೆಹಲಿಯಲ್ಲಿ ಕನಿಮೋಳಿ-ರಾಹುಲ್ ಗಾಂಧಿ ಭೇಟಿ, ಒಪ್ಪಂದಕ್ಕೆ ಬಾರದ ಮಾತುಕತೆ, ಕಾಂಗ್ರೆಸ್ ಗೆ ಸಿಗುತ್ತಾ ಹೆಚ್ಚಿನ ಸ್ಥಾನ?

SCROLL FOR NEXT