ಚೆನ್ನೈ, ಕೆಕೆಆರ್ ತಂಡದ ಆಟಗಾರರು 
ಕ್ರಿಕೆಟ್

IPL 2025: ಸೋಲಿನ ಸುಳಿಯಿಂದ ಹೊರಬಾರದ CSK; KKR ಗೆ 8 ವಿಕೆಟ್ ಭರ್ಜರಿ ಜಯ

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ಕೆಕೆಆರ್ ಮಾರಕ ಬೌಲಿಂಗ್ ನಿಂದ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ ಅತಿ ಕಡಿಮೆ 103 ರನ್ ಗಳಿಸಲಷ್ಟೇ ಶಕ್ತವಾಯಿತು.

ಚೆನ್ನೈ: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಶುಕ್ರವಾರ ರಾತ್ರಿ ನಡೆದ ಐಪಿಎಲ್ 2025 ಟೂರ್ನಿಯ 25 ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಕೆಕೆಆರ್ 8 ವಿಕೆಟ್ ಗಳಿಂದ ಮಣಿಸಿದೆ. ಈ ಮೂಲಕ ಸೋಲಿನ ಸುಳಿಯಿಂದ ಹೊರಬಾರದ CKS ತವರಿನಲ್ಲೇ ಮತ್ತೊಮ್ಮೆ ಮುಖಭಂಗ ಅನುಭವಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ಕೆಕೆಆರ್ ಮಾರಕ ಬೌಲಿಂಗ್ ನಿಂದ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ ಅತಿ ಕಡಿಮೆ 103 ರನ್ ಗಳಿಸಲಷ್ಟೇ ಶಕ್ತವಾಯಿತು.

ಆರಂಭಿಕ ಆಟಗಾರರಾದ ರಚಿನ್ ರವೀಂದ್ರ ಕೇವಲ 4 ರನ್ ಗಳಿಸಿ ಹರ್ಷಿತ್ ರಾಣಾ ಬೌಲಿಂಗ್ ನಲ್ಲಿ ರಹಾನೆಗೆ ಕ್ಯಾಚ್ ನೀಡಿ ನಿರ್ಗಮಿಸಿದರೆ, ಡೆವೋನ್ ಕಾನ್ವೆ 12 ರನ್ ಗಳಿಸಿ ಎಲ್ ಬಿಡಬ್ಲೂಗೆ ಬಲಿಯಾದರು. ಬಳಿಕ ಜೊತೆಯಾದ ರಾಹುಲ್ ತ್ರಿಪಾಠಿ 16, ವಿಜಯ್ ಶಂಕರ್ 29, ಶಿವಂದುಬೆ 31 ರನ್ ಗಳಿಸಿದ್ದು ಹೊರತುಪಡಿಸಿದರೆ ಉಳಿದ ಯಾವುದೇ ಆಟಗಾರರು 5ಕ್ಕಿಂತ ಹೆಚ್ಚು ರನ್ ಗಳಿಸುವಲ್ಲಿ ವಿಫಲರಾದರು.

ಮಹೇಂದ್ರ ಸಿಂಗ್ ಧೋನಿ ಕೇವಲ 1 ರನ್ ಗಳಿಸಿ ಎಲ್ ಬಿಡಬ್ಲೂಗೆ ಔಟಾದರು. ಕೆಕೆಆರ್ ಪರ ಅತ್ಯುತ್ತಮ ಬೌಲಿಂಗ್ ಪ್ರದರ್ಶಿಸಿದ ಸುನೀಲ್ ನರೈನ್ 3 ವಿಕೆಟ್ ಕಬಳಿಸಿದರೆ, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ ತಲಾ 2 ವಿಕೆಟ್, ಮೊಯಿನ್ ಆಲಿ, ವೈಭವ್ ಅರೋರಾ ತಲಾ ಒಂದೊಂದು ವಿಕೆಟ್ ಪಡೆದರು.

ಚೆನ್ನೈ ಸೂಪರ್ ಕಿಂಗ್ಸ್ ನೀಡಿದ ಕೇವಲ 104 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ಕೆಕೆಆರ್ ಪರ ಆರಂಭಿಕ ಆಟಗಾರ ಕ್ವಿಂಟನ್ ಡಿ ಕಾರ್ 23, ಸುನಿಲ್ ನರೈನ್ 44, ನಾಯಕ ಅಜಿಂಕ್ಯಾ ರಹಾನೆ 20, ರಿಂಕ್ ಸಿಂಗ್ 15 ರನ್ ಗಳಿಸುವ ಮೂಲಕ 10.1 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 107 ರನ್ ಗಳಿಸುವುದರೊಂದಿಗೆ ಕೆಕೆಆರ್ ಗೆಲುವಿನ ನಗೆ ಬೀರಿತು. ಸುನೀಲ್ ನರೈನ್ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ರದ್ದತಿಗೆ ಈಶ್ವರ್ ಖಂಡ್ರೆ ಪಟ್ಟು; UPSC ಮಾದರಿ ತನ್ನಿ ಎಂದು ಸಿಎಂಗೆ ಗ್ರಾಮೀಣಾಭಿವೃದ್ಧಿ ಸಚಿವ ಮನವಿ

'ಹಾಸ್ಯಾಸ್ಪದ, ನಾಚಿಕೆಗೇಡು': ಬ್ರಿಕ್ಸ್ ಭೋಜನಕೂಟದ ಮೆನು ಕುರಿತ ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ ಆಕ್ರೋಶ

ಜೈಲಿನಲ್ಲಿ ಮಾಜಿ ಪ್ರಧಾನಿ: 52ನೇ ವಯಸ್ಸಿನಲ್ಲಿ ಎರಡನೇ ಮದುವೆಯಾದ ಇಮ್ರಾನ್ ಖಾನ್ ಮಾಜಿ ಪತ್ನಿ!

BBK 13: ಬಿಗ್‌ಬಾಸ್ ಮನೆಯಿಂದ ದಿಢೀರ್ ಹೊರಬಂದ ಓಂ ಪ್ರಕಾಶ್ ರಾವ್, ಆಸ್ಪತ್ರೆಗೆ ದಾಖಲು..!

ಪಾಕ್‌ನ ಹೊಸ ನವರಂಗಿ ಆಟ: FATF ಸಭೆಯ ಮುನ್ನ ಉಗ್ರ ಮಸೂದ್ ಅಜರ್ ಮೇಲಿನ ಬಹುಮಾನದ ಮೊತ್ತ 70 ಲಕ್ಷಕ್ಕೆ ಏರಿಕೆ!