ಚೆನ್ನೈ, ಕೆಕೆಆರ್ ತಂಡದ ಆಟಗಾರರು 
ಕ್ರಿಕೆಟ್

IPL 2025: ಸೋಲಿನ ಸುಳಿಯಿಂದ ಹೊರಬಾರದ CSK; KKR ಗೆ 8 ವಿಕೆಟ್ ಭರ್ಜರಿ ಜಯ

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ಕೆಕೆಆರ್ ಮಾರಕ ಬೌಲಿಂಗ್ ನಿಂದ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ ಅತಿ ಕಡಿಮೆ 103 ರನ್ ಗಳಿಸಲಷ್ಟೇ ಶಕ್ತವಾಯಿತು.

ಚೆನ್ನೈ: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಶುಕ್ರವಾರ ರಾತ್ರಿ ನಡೆದ ಐಪಿಎಲ್ 2025 ಟೂರ್ನಿಯ 25 ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಕೆಕೆಆರ್ 8 ವಿಕೆಟ್ ಗಳಿಂದ ಮಣಿಸಿದೆ. ಈ ಮೂಲಕ ಸೋಲಿನ ಸುಳಿಯಿಂದ ಹೊರಬಾರದ CKS ತವರಿನಲ್ಲೇ ಮತ್ತೊಮ್ಮೆ ಮುಖಭಂಗ ಅನುಭವಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ಕೆಕೆಆರ್ ಮಾರಕ ಬೌಲಿಂಗ್ ನಿಂದ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ ಅತಿ ಕಡಿಮೆ 103 ರನ್ ಗಳಿಸಲಷ್ಟೇ ಶಕ್ತವಾಯಿತು.

ಆರಂಭಿಕ ಆಟಗಾರರಾದ ರಚಿನ್ ರವೀಂದ್ರ ಕೇವಲ 4 ರನ್ ಗಳಿಸಿ ಹರ್ಷಿತ್ ರಾಣಾ ಬೌಲಿಂಗ್ ನಲ್ಲಿ ರಹಾನೆಗೆ ಕ್ಯಾಚ್ ನೀಡಿ ನಿರ್ಗಮಿಸಿದರೆ, ಡೆವೋನ್ ಕಾನ್ವೆ 12 ರನ್ ಗಳಿಸಿ ಎಲ್ ಬಿಡಬ್ಲೂಗೆ ಬಲಿಯಾದರು. ಬಳಿಕ ಜೊತೆಯಾದ ರಾಹುಲ್ ತ್ರಿಪಾಠಿ 16, ವಿಜಯ್ ಶಂಕರ್ 29, ಶಿವಂದುಬೆ 31 ರನ್ ಗಳಿಸಿದ್ದು ಹೊರತುಪಡಿಸಿದರೆ ಉಳಿದ ಯಾವುದೇ ಆಟಗಾರರು 5ಕ್ಕಿಂತ ಹೆಚ್ಚು ರನ್ ಗಳಿಸುವಲ್ಲಿ ವಿಫಲರಾದರು.

ಮಹೇಂದ್ರ ಸಿಂಗ್ ಧೋನಿ ಕೇವಲ 1 ರನ್ ಗಳಿಸಿ ಎಲ್ ಬಿಡಬ್ಲೂಗೆ ಔಟಾದರು. ಕೆಕೆಆರ್ ಪರ ಅತ್ಯುತ್ತಮ ಬೌಲಿಂಗ್ ಪ್ರದರ್ಶಿಸಿದ ಸುನೀಲ್ ನರೈನ್ 3 ವಿಕೆಟ್ ಕಬಳಿಸಿದರೆ, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ ತಲಾ 2 ವಿಕೆಟ್, ಮೊಯಿನ್ ಆಲಿ, ವೈಭವ್ ಅರೋರಾ ತಲಾ ಒಂದೊಂದು ವಿಕೆಟ್ ಪಡೆದರು.

ಚೆನ್ನೈ ಸೂಪರ್ ಕಿಂಗ್ಸ್ ನೀಡಿದ ಕೇವಲ 104 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ಕೆಕೆಆರ್ ಪರ ಆರಂಭಿಕ ಆಟಗಾರ ಕ್ವಿಂಟನ್ ಡಿ ಕಾರ್ 23, ಸುನಿಲ್ ನರೈನ್ 44, ನಾಯಕ ಅಜಿಂಕ್ಯಾ ರಹಾನೆ 20, ರಿಂಕ್ ಸಿಂಗ್ 15 ರನ್ ಗಳಿಸುವ ಮೂಲಕ 10.1 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 107 ರನ್ ಗಳಿಸುವುದರೊಂದಿಗೆ ಕೆಕೆಆರ್ ಗೆಲುವಿನ ನಗೆ ಬೀರಿತು. ಸುನೀಲ್ ನರೈನ್ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

SCROLL FOR NEXT