ರೋಹಿತ್ ಶರ್ಮಾ ಮತ್ತಿತರರು 
ಕ್ರಿಕೆಟ್

IPL 2025, DC vs MI: ರಾಹುಲ್, ಅಕ್ಷರ್ ಪಟೇಲ್ ಬ್ಯಾಟಿಂಗ್ ವೈಫಲ್ಯ; ಮುಂಬೈ ಇಂಡಿಯನ್ಸ್ 12 ರನ್ ಗೆಲುವು!

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 205 ರನ್ ಗಳಿಸಿತು. ಮತ್ತೆ ವೈಫಲ್ಯಕ್ಕೊಳಗಾದ ಆರಂಭಿಕ ಆಟಗಾರ ರೋಹಿತ್ ಶರ್ಮಾ 18 ರನ್ ಗಳಿಸಿದಾಗ ಎಲ್ ಬಿಡಬ್ಲ್ಯೂಗೆ ಬಲಿಯಾದರು.

ನವದೆಹಲಿ: ರಾಷ್ಟ್ರ ರಾಜಧಾನಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2025 ರ 29 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 12 ರನ್ ಗಳಿಂದ ಮುಂಬೈ ಇಂಡಿಯನ್ಸ್ ಗೆಲುವು ಸಾಧಿಸಿತು

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 205 ರನ್ ಗಳಿಸಿತು. ಮತ್ತೆ ವೈಫಲ್ಯಕ್ಕೊಳಗಾದ ಆರಂಭಿಕ ಆಟಗಾರ ರೋಹಿತ್ ಶರ್ಮಾ 18 ರನ್ ಗಳಿಸಿದಾಗ ಎಲ್ ಬಿಡಬ್ಲ್ಯೂಗೆ ಬಲಿಯಾದರು. ರಿಯಾನ್ ರಿಕಲ್ಟನ್ 41 ರನ್ ಗಳಿಸಿ ಕುಲದೀಪ್ ಯಾದವ್ ಬೌಲಿಂಗ್ ನಲ್ಲಿ ಬೌಲ್ಡ್ ಆದರು. ನಂತರ ಬಂದ ಸೂರ್ಯ ಕುಮಾರ್ ಯಾದರ್ 40, ತಿಲಕ್ ವರ್ಮಾ 59 ರನ್ ಗಳಿಸುವ ಮೂಲಕ ತಂಡದ ಮೊತ್ತವನ್ನು ಸ್ವಲ್ಪ ಹಿಗ್ಗಿಸಿದರು.

ನಮನ್ ಧಿರ್ 38 ರನ್ ಗಳಿಸುವುದರೊಂದಿಗೆ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್ ಗಳಲ್ಲಿ 205 ರನ್ ಕಲೆಹಾಕಿತು. ಇನ್ನೂ ಡೆಲ್ಲಿ ಕ್ಯಾಪಿಟಲ್ಸ್ ಪರ ವಿಪ್ರಾಜ್ ನಿಗಮ್ ಹಾಗೂ ಕುಲದೀಪ್ ಯಾದವ್ ತಲಾ 2 ವಿಕೆಟ್ ಪಡೆದರೆ, ಮುಕೇಶ್ ಕುಮಾರ್ 1 ವಿಕೆಟ್ ಪಡೆದರು.

ಮುಂಬೈ ಇಂಡಿಯನ್ಸ್ ನೀಡಿದ 206 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕ ಜೇಕ್ ಫ್ರೇಸರ್ ಎಂಸಿ ಗುರ್ಕ್, ಚಹಾರ್ ಬೌಲಿಂಗ್ ನಲ್ಲಿ ಕ್ಯಾಚ್ ನೀಡಿ, ಯಾವುದೇ ರನ್ ಗಳಿಸಿದೆ ಶೂನ್ಯಕ್ಕೆ ಔಟಾದರು. ಬಳಿಕ ಅಭಿಷೇಕ್ ಪೊರೆಲ್ 33, ಕರುಣ್ ನಾಯರ್ 89 ರನ್ ಗಳಿಸಿದರೆ, ಕೆಎಲ್ ರಾಹುಲ್ ಕೇವಲ 15 ರನ್ ಗಳಿಸಿ ಕ್ಯಾಚ್ ನೀಡಿ ನಿರ್ಗಮಿಸಿದರು.

ಅಕ್ಷರ್ ಪಟೇಲ್ 9 ರನ್ ಗಳಿಸಿ ಬೂಮ್ರಾ ಬೌಲಿಂಗ್ ನಲ್ಲಿ ಔಟಾದರು. ಅಶುಷೋಶ್ ಶರ್ಮಾ 17,ವಿಪ್ರಾಜ್ ನಿಗಮ್ 14 ರನ್ ಗಳಿಸಿ ಔಟಾದರೆ ಮಿಚೆಲ್ ಸ್ಟಾರ್ಕ್ ಕೇವಲ 1 ರನ್ ಗಳಿಸಿ ಫೆವಿಲಿಯನ್ ಗೆ ನಿರ್ಗಮಿಸಿದರು. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ 19 ಓವರ್ ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 193 ರನ್ ಗಳಿಸಲಷ್ಟೇ ಶಕ್ತವಾಯಿತು. ಮುಂಬೈ ಇಂಡಿಯನ್ಸ್ 12 ರನ್ ಗಳಿಂದ ಗೆಲುವಿನ ನಗೆ ಬೀರಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT