ರೋಹಿತ್ ಶರ್ಮಾ ಮತ್ತಿತರರು 
ಕ್ರಿಕೆಟ್

IPL 2025, DC vs MI: ರಾಹುಲ್, ಅಕ್ಷರ್ ಪಟೇಲ್ ಬ್ಯಾಟಿಂಗ್ ವೈಫಲ್ಯ; ಮುಂಬೈ ಇಂಡಿಯನ್ಸ್ 12 ರನ್ ಗೆಲುವು!

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 205 ರನ್ ಗಳಿಸಿತು. ಮತ್ತೆ ವೈಫಲ್ಯಕ್ಕೊಳಗಾದ ಆರಂಭಿಕ ಆಟಗಾರ ರೋಹಿತ್ ಶರ್ಮಾ 18 ರನ್ ಗಳಿಸಿದಾಗ ಎಲ್ ಬಿಡಬ್ಲ್ಯೂಗೆ ಬಲಿಯಾದರು.

ನವದೆಹಲಿ: ರಾಷ್ಟ್ರ ರಾಜಧಾನಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2025 ರ 29 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 12 ರನ್ ಗಳಿಂದ ಮುಂಬೈ ಇಂಡಿಯನ್ಸ್ ಗೆಲುವು ಸಾಧಿಸಿತು

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 205 ರನ್ ಗಳಿಸಿತು. ಮತ್ತೆ ವೈಫಲ್ಯಕ್ಕೊಳಗಾದ ಆರಂಭಿಕ ಆಟಗಾರ ರೋಹಿತ್ ಶರ್ಮಾ 18 ರನ್ ಗಳಿಸಿದಾಗ ಎಲ್ ಬಿಡಬ್ಲ್ಯೂಗೆ ಬಲಿಯಾದರು. ರಿಯಾನ್ ರಿಕಲ್ಟನ್ 41 ರನ್ ಗಳಿಸಿ ಕುಲದೀಪ್ ಯಾದವ್ ಬೌಲಿಂಗ್ ನಲ್ಲಿ ಬೌಲ್ಡ್ ಆದರು. ನಂತರ ಬಂದ ಸೂರ್ಯ ಕುಮಾರ್ ಯಾದರ್ 40, ತಿಲಕ್ ವರ್ಮಾ 59 ರನ್ ಗಳಿಸುವ ಮೂಲಕ ತಂಡದ ಮೊತ್ತವನ್ನು ಸ್ವಲ್ಪ ಹಿಗ್ಗಿಸಿದರು.

ನಮನ್ ಧಿರ್ 38 ರನ್ ಗಳಿಸುವುದರೊಂದಿಗೆ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್ ಗಳಲ್ಲಿ 205 ರನ್ ಕಲೆಹಾಕಿತು. ಇನ್ನೂ ಡೆಲ್ಲಿ ಕ್ಯಾಪಿಟಲ್ಸ್ ಪರ ವಿಪ್ರಾಜ್ ನಿಗಮ್ ಹಾಗೂ ಕುಲದೀಪ್ ಯಾದವ್ ತಲಾ 2 ವಿಕೆಟ್ ಪಡೆದರೆ, ಮುಕೇಶ್ ಕುಮಾರ್ 1 ವಿಕೆಟ್ ಪಡೆದರು.

ಮುಂಬೈ ಇಂಡಿಯನ್ಸ್ ನೀಡಿದ 206 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕ ಜೇಕ್ ಫ್ರೇಸರ್ ಎಂಸಿ ಗುರ್ಕ್, ಚಹಾರ್ ಬೌಲಿಂಗ್ ನಲ್ಲಿ ಕ್ಯಾಚ್ ನೀಡಿ, ಯಾವುದೇ ರನ್ ಗಳಿಸಿದೆ ಶೂನ್ಯಕ್ಕೆ ಔಟಾದರು. ಬಳಿಕ ಅಭಿಷೇಕ್ ಪೊರೆಲ್ 33, ಕರುಣ್ ನಾಯರ್ 89 ರನ್ ಗಳಿಸಿದರೆ, ಕೆಎಲ್ ರಾಹುಲ್ ಕೇವಲ 15 ರನ್ ಗಳಿಸಿ ಕ್ಯಾಚ್ ನೀಡಿ ನಿರ್ಗಮಿಸಿದರು.

ಅಕ್ಷರ್ ಪಟೇಲ್ 9 ರನ್ ಗಳಿಸಿ ಬೂಮ್ರಾ ಬೌಲಿಂಗ್ ನಲ್ಲಿ ಔಟಾದರು. ಅಶುಷೋಶ್ ಶರ್ಮಾ 17,ವಿಪ್ರಾಜ್ ನಿಗಮ್ 14 ರನ್ ಗಳಿಸಿ ಔಟಾದರೆ ಮಿಚೆಲ್ ಸ್ಟಾರ್ಕ್ ಕೇವಲ 1 ರನ್ ಗಳಿಸಿ ಫೆವಿಲಿಯನ್ ಗೆ ನಿರ್ಗಮಿಸಿದರು. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ 19 ಓವರ್ ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 193 ರನ್ ಗಳಿಸಲಷ್ಟೇ ಶಕ್ತವಾಯಿತು. ಮುಂಬೈ ಇಂಡಿಯನ್ಸ್ 12 ರನ್ ಗಳಿಂದ ಗೆಲುವಿನ ನಗೆ ಬೀರಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT