ಶ್ರೇಯಸ್ ಅಯ್ಯರ್ 
ಕ್ರಿಕೆಟ್

IPL 2025: 'ಇದನ್ನೂ ಚೇಸ್ ಮಾಡ್ತಾರೆ ಅನ್ಕೊಂಡಿರ್ಲಿಲ್ಲಾ..'; SRH ವಿರುದ್ಧ ಸೋಲಿನ ಬಳಿಕ PBKS ನಾಯಕ Shreyas Iyer 'ನಗು'!

ನಿಜವಾಗಿಯೂ ಹೇಳಬೇಕೆಂದರೆ, ಇದು ಅತ್ಯುತ್ತಮ ಮೊತ್ತವಾಗಿತ್ತು. ಆದರೆ ಸನ್​ರೈಸರ್ಸ್ ಹೈದರಾಬಾದ್ ತಂಡವು 2 ಓವರ್​ಗಳು ಬಾಕಿ ಇರುವಾಗಲೇ ಚೇಸ್ ಮಾಡಿರುವುದು ನೋಡಿದ್ರೆ ನಿಜಕ್ಕೂ ನನಗೆ ನಗು ಬರುತ್ತಿದೆ...

ಹೈದರಾಬಾದ್: ಐಪಿಎಲ್ ಟೂರ್ನಿಯಲ್ಲಿ ಮತ್ತೊಂದು ದಾಖಲೆಯ ಚೇಸಿಂಗ್ ನಡೆದಿದ್ದು, ಪಂಜಾಬ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ತಂಡ ಬೃಹತ್ ಮೊತ್ತವನ್ನು ಯಶಸ್ವಿಯಾಗಿ ಗುರಿ ಮುಟ್ಟಿ ದಾಖಲೆ ಬರೆದಿದೆ.

ನಿನ್ನೆ ಹೈದರಾಬಾದ್ ನ ರಾಜೀವ್ ಗಾಂಧಿ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ನೀಡಿದ 246 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಸನ್ ರೈಸರ್ಸ್ ಹೈದರಾಬಾದ್ ತಂಡ 18.3 ಓವರ್ ನಲ್ಲಿ ಕೇವಲ 2 ವಿಕೆಟ್ ಕಳೆದುಕೊಂಡು 247 ರನ್ ಗಳಿಸಿ ಗುರಿ ಮುಟ್ಟಿತು. ಈ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನದ ಹೊರತಾಗಿಯೂ ಪಂಜಾಬ್ ತಂಡ ನಿರಾಶೆ ಅನುಭವಿಸಿತು.

ಈ ಕಠಿಣ ಗುರಿಯನ್ನು ಬೆನ್ನತ್ತಿದ ಸನ್​ರೈಸರ್ಸ್ ಹೈದರಾಬಾದ್ ತಂಡದ ಪರ ಟ್ರಾವಿಸ್ ಹೆಡ್ (66) ಹಾಗೂ ಅಭಿಷೇಕ್ ಶರ್ಮಾ (141) ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಪರಿಣಾಮ 18.3 ಓವರ್​ಗಳಲ್ಲಿ 2 ವಿಕೆಟ್ ಕಳೆದುಕೊಂಡು ಸನ್​ರೈಸರ್ಸ್ ಹೈದರಾಬಾದ್ ತಂಡವು 247 ರನ್ ಬಾರಿಸಿ 8 ವಿಕೆಟ್​ಗಳ ವಿಜಯ ಸಾಧಿಸಿತು.

ಇದನ್ನೂ ಚೇಸ್ ಮಾಡ್ತಾರೆ ಅನ್ಕೊಂಡಿರ್ಲಿಲ್ಲಾ

ಇನ್ನು ಪಂದ್ಯ ಮುಕ್ತಾಯದ ಬಳಿಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದ ಪಂಜಾಬ್ ತಂಡದ ನಾಯಕ ಸನ್ ರೈಸರ್ಸ್ ಹೈದರಾಬಾದ್ ತಂಡದ ಬ್ಯಾಟಿಂಗ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. 'ನಿಜವಾಗಿಯೂ ಹೇಳಬೇಕೆಂದರೆ, ಇದು ಅತ್ಯುತ್ತಮ ಮೊತ್ತವಾಗಿತ್ತು. ಆದರೆ ಸನ್​ರೈಸರ್ಸ್ ಹೈದರಾಬಾದ್ ತಂಡವು 2 ಓವರ್​ಗಳು ಬಾಕಿ ಇರುವಾಗಲೇ ಚೇಸ್ ಮಾಡಿರುವುದು ನೋಡಿದ್ರೆ ನಿಜಕ್ಕೂ ನನಗೆ ನಗು ಬರುತ್ತಿದೆ ಎಂದರು.

ನಾವು ಬೃಹತ್ ಮೊತ್ತ ಪೇರಿಸಿದಾಗ, 230 ರನ್​ಗಳು ಉತ್ತಮ ಟಾರ್ಗೆಟ್ ಎಂದು ಭಾವಿಸಿದ್ದೆವು. ಆದರೆ ಸನ್​ರೈಸರ್ಸ್ ಹೈದರಾಬಾದ್ ಆರಂಭಿಕರು ಬ್ಯಾಟಿಂಗ್ ಮಾಡಿದ ರೀತಿ ಅದ್ಭುತವಾಗಿತ್ತು. ಅದರಲ್ಲೂ ಅಭಿಷೇಕ್ ಶರ್ಮಾ ಇನಿಂಗ್ಸ್ ನಾನು ನೋಡಿದ ಅತ್ಯುತ್ತಮ ಇನ್ನಿಂಗ್ಸ್‌ಗಳಲ್ಲಿ ಒಂದಾಗಿದೆ ಎಂದರು.

ಅಭಿಷೇಕ್ ಶರ್ಮಾ ಬಗ್ಗೆ ಮೆಚ್ಚುಗೆ

ಅಂತೆಯೇ ಶತಕ ವೀರ ಅಭಿಷೇಕ್ ಶರ್ಮಾ ಬಗ್ಗೆ ಮಾತನಾಡಿದ ಅಯ್ಯರ್, 'ಒಂದು ವೇಳೆ ನಾವು ಕೆಲ ಕ್ಯಾಚ್​ಗಳನ್ನು ಹಿಡಿದಿದ್ದರೆ ಪಂದ್ಯದಲ್ಲಿ ಕಂಬ್ಯಾಕ್ ಮಾಡಬಹುದಿತ್ತು. ಆದರೆ ಅಭಿಷೇಕ್ ಶರ್ಮಾ ಅದೃಷ್ಟವಂತ. ಹೀಗೆ ಸಿಕ್ಕ ಜೀವದಾನಗಳನ್ನು ಬಳಸಿಕೊಂಡ ಅಭಿಷೇಕ್ ಅತ್ಯುತ್ತಮ ಇನಿಂಗ್ಸ್ ಆಡಿದರು. ಅಭಿಷೇಕ್ ಮತ್ತು ಹೆಡ್ ನಡುವಿನ ಆರಂಭಿಕ ಪಾಲುದಾರಿಕೆ ಅದ್ಭುತವಾಗಿತ್ತು ಎಂದರು.

ಸಾಕಷ್ಟು ತಪ್ಪುಗಳಿವೆ

ನಾವು ನಿರೀಕ್ಷೆಗಳಿಗೆ ತಕ್ಕಂತೆ ಬೌಲಿಂಗ್ ಮಾಡಲಿಲ್ಲ ಎಂಬುದೇ ಸತ್ಯ. ನಾವು ಡ್ರಾಯಿಂಗ್ ಬೋರ್ಡ್‌ಗೆ ಹೋಗಿ ತಪ್ಪುಗಳನ್ನು ಸರಿಪಡಿಸಿಕೊಳ್ಳಬೇಕಾಗಿತ್ತು. ಸನ್​ರೈಸರ್ಸ್ ಹೈದರಾಬಾದ್ ಓಪನರ್​ಗಳು ನಮಗೆ ಹೆಚ್ಚಿನ ಅವಕಾಶವನ್ನೇ ನೀಡಲಿಲ್ಲ. ಇದರ ನಡುವೆ ಲಾಕಿ ಫರ್ಗುಸನ್ ಗಾಯಗೊಂಡು ಹೊರನಡೆದಿದ್ದು ಕೂಡ ನಮ್ಮ ಪಾಲಿಗೆ ಮುಳುವಾಯಿತು. ಒಂದು ವೇಳೆ ಅವರಿದ್ದಿದ್ದರೆ ಒಂದೆರಡು ವಿಕೆಟ್​ಗಳು ಲಭಿಸುತ್ತಿದ್ದವು. ಇದೀಗ ನಾವು ಸೋತಿದ್ದೇವೆ. ಈ ಸೋಲಿನೊಂದಿಗೆ ಪಾಠ ಕಲಿತಿದ್ದೇವೆ. ಹೀಗಾಗಿ ಮುಂದಿನ ಪಂದ್ಯದಲ್ಲಿ ಕಂಬ್ಯಾಕ್ ಮಾಡುವ ವಿಶ್ವಾಸವಿದೆ ಎಂದು ಶ್ರೇಯಸ್ ಅಯ್ಯರ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT