ಚೆಂಡಿಗಾಗಿ ತಡಕಾಡಿದ ಇಶಾನ್ ಕಿಶನ್ 
ಕ್ರಿಕೆಟ್

IPL 2025: 'ಈಗ ತಾನೆ ಬಾಲ್ ಹಿಡಿದ್ನಲ್ಲಾ ಗುರು.. ಎಲ್ಲೋಯ್ತು...'; ಚೆಂಡಿಗಾಗಿ ತಡಕಾಡಿದ Ishan Kishan; ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು! Video

ಪಂಜಾಬ್ ಕಿಂಗ್ಸ್ ಇನಿಂಗ್ಸ್ ವೇಳೆ ಆರಂಭಿಕ ಆಟಗಾರ ಪ್ರಭ್​ಸಿಮ್ರಾನ್ ಮೊಹಮ್ಮದ್ ಶಮಿ ಎಸೆದ ಎಸೆತವನ್ನು ಬಾರಿಸಿದ ಸ್ಟ್ರೈಟ್ ಹಿಟ್ ಅನ್ನು ಇಶಾನ್ ಕಿಶನ್ ಓಡಿ ಹೋಗಿ ತಡೆದಿದ್ದರು.

ಹೈದರಾಬಾದ್: ನಿನ್ನೆ ಹೈದರಾಬಾದ್ ನಲ್ಲಿ ನಡೆದ ಪಂಜಾಬ್ ಮತ್ತು ಹೈದರಾಬಾದ್ ನಡುವಿನ ಪಂದ್ಯ ಬಿಗ್ ಸ್ಕೋರ್ ನ ಹೊರತಾಗಿಯೂ ಕೆಲ ಹಾಸ್ಯಮಯ ಸನ್ನಿವೇಶಕ್ಕೂ ವೇದಿಕೆಯಾಗಿತ್ತು.

ನಿನ್ನೆ ಹೈದರಾಬಾದ್ ನ ರಾಜೀವ್ ಗಾಂಧಿ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ನೀಡಿದ 246 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಸನ್ ರೈಸರ್ಸ್ ಹೈದರಾಬಾದ್ ತಂಡ 18.3 ಓವರ್ ನಲ್ಲಿ ಕೇವಲ 2 ವಿಕೆಟ್ ಕಳೆದುಕೊಂಡು 247 ರನ್ ಗಳಿಸಿ ಗುರಿ ಮುಟ್ಟಿತು. ಈ ಪಂದ್ಯದಲ್ಲಿ ಅಸಾಧ್ಯವಾಗಿದ್ದ ಗುರಿಯನ್ನು ಹೈದರಾಬಾದ್ ಯಶಸ್ವಿಯಾಗಿ ಮುಟ್ಟಿತ್ತು.

ಹೈದಾರಾಬಾದ್ ಗೆಲುವಿನಲ್ಲಿ ಆರಂಭಿಕರಾದ ಟ್ರಾವಿಸ್ ಹೆಡ್ ಮತ್ತು ಅಭಿಷೇಕ್ ಶರ್ಮಾ ಪ್ರಮುಖ ಪಾತ್ರ ವಹಿಸಿದ್ದರು. ಟ್ರಾವಿಸ್ ಹೆಡ್ 37 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 9 ಬೌಂಡರಿ ನೆರವಿನಿಂದ 66 ರನ್ ಸಿಡಿಸಿದರೆ, ಮತ್ತೊಂದು ಬದಿಯಲ್ಲಿದ್ದ ಅಭಿಷೇಕ್ ಶರ್ಮಾ ಕೇವಲ 55 ಎಸೆತಗಳಲ್ಲಿ 10 ಸಿಕ್ಸರ್ ಮತ್ತು 14 ಬೌಂಡರಿಗಳ ಸಹಿತ 141 ರನ್ ಚಚ್ಚಿದರು.

ಫೀಲ್ಡಿಂಗ್ ವೇಳೆ ಚೆಂಡಿಗಾಗಿ ತಡಕಾಡಿದ ಇಶಾನ್ ಕಿಶನ್

ಇನ್ನು ಪಂಜಾಬ್ ಕಿಂಗ್ಸ್ ಇನಿಂಗ್ಸ್ ವೇಳೆ ಆರಂಭಿಕ ಆಟಗಾರ ಪ್ರಭ್​ಸಿಮ್ರಾನ್ ಮೊಹಮ್ಮದ್ ಶಮಿ ಎಸೆದ ಎಸೆತವನ್ನು ಬಾರಿಸಿದ ಸ್ಟ್ರೈಟ್ ಹಿಟ್ ಅನ್ನು ಇಶಾನ್ ಕಿಶನ್ ಓಡಿ ಹೋಗಿ ತಡೆದಿದ್ದರು. ಆದರೆ ಚೆಂಡು ತಡೆದ ಬಳಿಕ ಅವರು ಬಾಲ್​ಗಾಗಿ ಹುಡುಕಾಡಿದ್ದು ವಿಶೇಷವಾಗಿತ್ತು. ಚೆಂಡು ಜಾಹೀರಾತು ಬರಹಗಳ ಮೇಲೆ ನಿಂತಿದ್ದರಿಂದ ಇಶಾನ್ ಕಿಶನ್​ಗೆ ವೈಟ್ ಬಾಲ್ ಗೋಚರಿಸಲಿಲ್ಲ. ಈ ವೇಳೆ ಚೆಂಡು ಎಲ್ಲಿಗೆ ಹೋಯಿತು ಎಂದು ಇಶಾನ್ ಕಿಶನ್ ತಡಕಾಡಿದರು. ಆದರೆ ಇದನ್ನು ಗಮನಿಸಿದ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಓಡಿ ಬಂದು ಚೆಂಡು ತೆಗೆದು ಕೊಂಡು ಎಸೆದರು. ಆ ಮೂಲಕ ಹೆಚ್ಚುವರಿ ರನ್ ಗಳ ತಡೆದರು.

ಆದರೆ ಪಕ್ಕದಲ್ಲೇ ಇದ್ದ ಚೆಂಡನ್ನು ಗುರುತಿಸದ ಇಶಾನ್ ಕಿಶನ್ ಆ ಸಂದರ್ಭದಲ್ಲಿ ಎಲ್ಲರ ನಗುವಿನ ಆಹಾರವಾಗಿದ್ದರು. ಅತ್ತ ಇಶಾನ್ ಕಿಶನ್ ಚೆಂಡಿಗಾಗಿ ತಡಕಾಡುತ್ತಿದ್ದರೆ ಪ್ರೇಕ್ಷಕರು ಮಾತ್ರ ನಗುವಿನ ಅಲೆಯಲ್ಲಿ ತೇಲುತ್ತಿದ್ದರು. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT