ಸಂಜೀವ್ ಗೋಯೆಂಕಾ ಜೊತೆ ಎಂಎಸ್ ಧೋನಿ ಮಾತುಕತೆ 
ಕ್ರಿಕೆಟ್

IPL 2025: CSK ಗೆಲುವಿನ ನಂತರ LSG ಮಾಲೀಕ ಸಂಜೀವ್ ಗೋಯೆಂಕಾ ಜೊತೆ ಎಂಎಸ್ ಧೋನಿ ಮಾತುಕತೆ

ಗೋಯೆಂಕಾ, ಈಗ ಸ್ಥಗಿತಗೊಂಡಿರುವ ರೈಸಿಂಗ್ ಪುಣೆ ಸೂಪರ್ ಜೈಂಟ್ ಐಪಿಎಲ್ ಫ್ರಾಂಚೈಸಿಯ ಮಾಲೀಕರಾಗಿದ್ದರು. ಆ ತಂಡದಲ್ಲಿ ಧೋನಿ ಎರಡು ವರ್ಷ ಆಡಿದ್ದರು.

ಸೋಮವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಐದು ವಿಕೆಟ್‌ಗಳ ಜಯ ಸಾಧಿಸಿದೆ. ನಾಯಕ ಎಂಎಸ್ ಧೋನಿ ಅವರ ಬ್ಯಾಟಿಂಗ್ ವೈಖರಿಯಿಂದ ತಂಡದ ಗೆಲುವಿನ ಹಾದಿ ಸುಗಮವಾಯಿತು. ಚೆನ್ನೈ ಈವರೆಗೆ 7 ಪಂದ್ಯಗಳನ್ನು ಆಡಿದ್ದು, ಸತತ ಐದು ಪಂದ್ಯಗಳಲ್ಲಿ ಸೋಲು ಕಂಡಿತ್ತು. ಇದೀಗ ಈ ಗೆಲುವಿನ ಮೂಲಕ ಎರಡನೇ ಗೆಲುವು ದಾಖಲಿಸಿದೆ. ಧೋನಿ 11 ಎಸೆತಗಳಲ್ಲಿ ನಾಲ್ಕು ಬೌಂಡರಿ ಮತ್ತು ಒಂದು ಸಿಕ್ಸರ್‌ ನೆರವಿನೊಂದಿಗೆ 26 ರನ್ ಗಳಿಸಿ ಅಜೇಯರಾಗಿ ಉಳಿದರು. ಶಿವಂ ದುಬೆ ಔಟಾಗದೆ 37 ಎಸೆತಗಳಲ್ಲಿ 43 ರನ್ ಗಳಿಸಿದರು. ಇನ್ನೂ ಮೂರು ಎಸೆತಗಳು ಬಾಕಿ ಇರುವಾಗಲೇ ಸಿಎಸ್‌ಕೆ ಜಯಗಳಿಸಿತು.

ಪಂದ್ಯದ ನಂತರ, ಧೋನಿ LSG ಮಾಲೀಕ ಸಂಜೀವ್ ಗೋಯೆಂಕಾ ಅವರೊಂದಿಗೆ ಮಾತುಕತೆ ನಡೆಸುತ್ತಿದ್ದದ್ದು ಕಂಡುಬಂತು. ಗೋಯೆಂಕಾ, ಈಗ ಸ್ಥಗಿತಗೊಂಡಿರುವ ರೈಸಿಂಗ್ ಪುಣೆ ಸೂಪರ್ ಜೈಂಟ್ ಐಪಿಎಲ್ ಫ್ರಾಂಚೈಸಿಯ ಮಾಲೀಕರಾಗಿದ್ದರು. ಆ ತಂಡದಲ್ಲಿ ಧೋನಿ ಎರಡು ವರ್ಷ ಆಡಿದ್ದರು.

ಟಾಸ್ ಗೆದ್ದ ಚೆನ್ನೈ ತಂಡ ಬೌಲಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 166 ರನ್ ಗಳಿಸಿದರು. ನಾಯಕ ರಿಷಬ್ ಪಂತ್ 49 ಎಸೆತಗಳಲ್ಲಿ 63 ರನ್ ಗಳಿಸುವ ಮೂಲಕ ತಂಡಕ್ಕೆ ಆಸರೆಯಾದರು. ನಿಕೋಲಸ್ ಪೂರನ್ ಅವರು ಔಟ್ ಆದ ಬಳಿಕ ಎಲ್ಎಸ್‌ಜಿ ಸಂಕಷ್ಟಕ್ಕೆ ಸಿಲುಕಿತ್ತು. ಆದರೆ, ಪಂತ್ ಅವರ ಸಮಯೋಚಿತ ಆಟದಿಂದಾಗಿ 166 ರನ್ ಗಳಿಸುವಲ್ಲಿ ಶಕ್ತವಾಯಿತು.

ಇತ್ತ ಸಿಎಸ್‌ಕೆ ಪರ ಖಲೀಲ್ ಅಹ್ಮದ್ ಮತ್ತು ಅನ್ಶುಲ್ ಕಾಂಬೋಜ್ ತಲಾ 1 ವಿಕೆಟ್ ಪಡೆದರೆ, ರವೀಂದ್ರ ಜಡೇಜಾ ಮತ್ತು ಮತೀಷ ಪತಿರಾಣ ಎರಡು ವಿಕೆಟ್ ಪಡೆದು ಮಿಂಚಿದರು.

ಲಕ್ನೋ ತಂಡ ನೀಡಿದ 167 ರನ್ ಗುರಿ ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಶೇಖ್ ರಶೀದ್ ಮತ್ತು ರಚಿನ್ ರವೀಂದ್ರ ಅವರ ಜೊತೆಯಾಟದೊಂದಿಗೆ ಉತ್ತಮ ಆರಂಭ ನೀಡಿದರು. ಅವರು ಔಟಾದ ಬಳಿಕ ಸಿಎಸ್‌ಕೆ ಮಧ್ಯಮ ಕ್ರಮಾಂಕವು ಎಲ್‌ಎಸ್‌ಜಿಯ ಬೌಲಿಂಗ್ ದಾಳಿಗೆ ತತ್ತರಿಸಿತು. ನಂತರ ಕ್ರೀಸ್‌ಗೆ ಬಂದ ಧೋನಿ 16ನೇ ಓವರ್‌ನ ಕೊನೆಯ ಎರಡು ಎಸೆತಗಳಲ್ಲಿ ಸತತ ಬೌಂಡರಿ ಗಳಿಸಿದರು. 17ನೇ ಓವರ್‌ನ ಕೊನೆಯ ಎಸೆತದಲ್ಲಿ, ಸಿಕ್ಸ್ ಬಾರಿಸಿದರು. ಈ ಮೂಲಕ ರನ್ ಅಂತರ ಕಡಿಮೆ ಮಾಡಿದರು.

12 ಎಸೆತಗಳಲ್ಲಿ 24 ರನ್ ಅಗತ್ಯವಿದ್ದಾಗ, ಶಿವಂ ದುಬೆ ಕೊನೆಯ ಓವರ್‌ನಲ್ಲಿ ನಿರಂತರ ದಾಳಿ ನಡೆಸಿದರು. ಅಂತಿಮವಾಗಿ ಸಿಎಸ್‌ಕೆ 5 ವಿಕೆಟ್ ನಷ್ಟಕ್ಕೆ 168 ರನ್ ಗಳಿಸುವ ಮೂಲಕ ಎಲ್ಎಸ್‌ಜಿ ವಿರುದ್ಧ ಐದು ವಿಕೆಟ್‌ಗಳ ಜಯ ಸಾಧಿಸಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT