ಸುನೀಲ್ ಗವಾಸ್ಕರ್ - ವಿನೋದ್ ಕಾಂಬ್ಳಿ 
ಕ್ರಿಕೆಟ್

ತೀವ್ರ ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿಗೆ ಸುನೀಲ್ ಗವಾಸ್ಕರ್ ನೆರವು!

2024ರ ಡಿಸೆಂಬರ್‌ನಲ್ಲಿ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ನಡೆದ ದಂತಕಥೆ ಕೋಚ್ ರಮಾಕಾಂತ್ ಅಚ್ರೇಕರ್ ಅವರ ಸ್ಮಾರಕ ಉದ್ಘಾಟನೆಯ ಸಂದರ್ಭದಲ್ಲಿ ಗವಾಸ್ಕರ್ ಅವರು ಕಾಂಬ್ಳಿ ಅವರಿಗೆ ಸಹಾಯ ಮಾಡುವುದಾಗಿ ಹೇಳಿದ್ದರು.

ಟೀಂ ಇಂಡಿಯಾದ ಮಾಜಿ ಬ್ಯಾಟ್ಸ್‌ಮನ್ ವಿನೋದ್ ಕಾಂಬ್ಳಿ ಇತ್ತೀಚೆಗೆ ತಮ್ಮ ಅನಾರೋಗ್ಯ ಮತ್ತು ಆರ್ಥಿಕ ಸಂಕಷ್ಟದಿಂದಾಗಿ ಸುದ್ದಿಯಾಗಿದ್ದರು. ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರ ಬಾಲ್ಯದ ಗೆಳೆಯ ಮತ್ತು ಭಾರತಕ್ಕಾಗಿ 104 ಏಕದಿನ ಪಂದ್ಯಗಳು ಮತ್ತು 17 ಟೆಸ್ಟ್ ಪಂದ್ಯಗಳನ್ನು ಆಡಿರುವ ಕಾಂಬ್ಳಿ ಇದೀಗ ಹಲವಾರು ಕಾಯಿಲೆಗಳಿಂದ ಬಳಲುತ್ತಿದ್ದಾರೆ. 2024ರ ಡಿಸೆಂಬರ್ 21 ರಂದು ಮೂತ್ರನಾಳ ಸೋಂಕಿನಿಂದಾಗಿ ಅವರನ್ನು ಥಾಣೆಯ ಅಕೃತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ಸಮಸ್ಯೆಯೊಂದಿಗೆ ಕಾಂಬ್ಳಿ ಅವರು ಗಂಭೀರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಟೀಂ ಇಂಡಿಯಾದ ಮಾಜಿ ಬ್ಯಾಟ್ಸ್‌ಮನ್ ಮತ್ತು ಖ್ಯಾತ ಕಮೆಂಟೇಟರ್ ಸುನಿಲ್ ಗವಾಸ್ಕರ್ ಸಹಾಯ ಹಸ್ತ ಚಾಚಿದ್ದಾರೆ.

2024ರ ಡಿಸೆಂಬರ್‌ನಲ್ಲಿ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ನಡೆದ ದಂತಕಥೆ ಕೋಚ್ ರಮಾಕಾಂತ್ ಅಚ್ರೇಕರ್ ಅವರ ಸ್ಮಾರಕ ಉದ್ಘಾಟನೆಯ ಸಂದರ್ಭದಲ್ಲಿ ಗವಾಸ್ಕರ್ ಅವರು ಕಾಂಬ್ಳಿ ಅವರಿಗೆ ಸಹಾಯ ಮಾಡುವುದಾಗಿ ಹೇಳಿದ್ದರು. ಅದರಂತೆ ಈಗ ಕಾಂಬ್ಳಿ ಅವರಿಗೆ ಮಾಸಿಕ ಸಹಾಯಧನ ನೀಡಲು ಮುಂದಾಗಿದ್ದಾರೆ.

ಟೈಮ್ಸ್ ಆಫ್ ಇಂಡಿಯಾದ ವರದಿ ಪ್ರಕಾರ, ಸುನೀಲ್ ಗವಾಸ್ಕರ್ ಅವರ CHAMPS ಫೌಂಡೇಶನ್ ಕಾಂಬ್ಳಿಗೆ ಮಾಸಿಕ 30,000 ರೂ. ಹಣ ಮತ್ತು ವಾರ್ಷಿಕ 30,000 ರೂ.ಗಳ ವೈದ್ಯಕೀಯ ನೆರವನ್ನು ನೀಡಲಿದೆ.

ಜನವರಿಯಲ್ಲಿ ನಡೆದ ಮೈದಾನದ 50ನೇ ವಾರ್ಷಿಕೋತ್ಸವದ ವೇಳೆ ಗವಾಸ್ಕರ್ ಮತ್ತು ಕಾಂಬ್ಳಿ ವಾಂಖೆಡೆ ಕ್ರೀಡಾಂಗಣದಲ್ಲಿ ಭೇಟಿಯಾಗಿದ್ದರು.

ಕಾಂಬ್ಳಿಯವರ ಪತ್ನಿ ಆಂಡ್ರಿಯಾ ಹೆವಿಟ್ ಅವರು 2023ರಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ, ತಮ್ಮ ಪತಿಯ 'ಅಸಹಾಯಕ ಸ್ಥಿತಿಯನ್ನು' ನೋಡಿದ ನಂತರ ಅದನ್ನು ಹಿಂಪಡೆಯಲು ನಿರ್ಧರಿಸಿರುವುದಾಗಿ ತಿಳಿಸಿದರು.

'ನಾನು ಅವರನ್ನು ಬಿಟ್ಟರೆ ಅವರು ಅಸಹಾಯಕರಾಗಿರುತ್ತಾರೆ. ಅವರು ಮಗುವಿನಂತೆ ಮತ್ತು ಅದು ನನಗೆ ನೋವುಂಟು ಮಾಡುತ್ತದೆ. ಇದು ನನಗೆ ಚಿಂತೆಯಾಗಿತ್ತು. ನಾನು ಸ್ನೇಹಿತನನ್ನೇ ಬಿಡುವುದಿಲ್ಲ. ಆದರೆ, ಇವರು ಅದಕ್ಕಿಂತ ಹೆಚ್ಚಿನವರು. ನನ್ನ ಪಾಡಿಗೆ ನಾನಿದ್ದ ದಿನಗಳು ಇದ್ದವು. ಆದರೆ ನಂತರ ನಾನು ಚಿಂತೆಗೀಡಾಗುತ್ತಿದ್ದೆ. ಅವರು ಊಟ ಮಾಡಿದ್ದಾರೋ ಇಲ್ಲವೋ? ಚೆನ್ನಾಗಿದ್ದಾರೋ ಇಲ್ಲವೋ? ಎಂಬುದು ನನ್ನನ್ನು ಕಾಡುತ್ತಿತ್ತು. ಆಗ ನಾನು ಅವರನ್ನು ಪರಿಶೀಲಿಸಬೇಕಾಗಿತ್ತು ಮತ್ತು ಅವನಿಗೆ ನನ್ನ ಅಗತ್ಯವಿದೆ ಎಂದು ನನಗೆ ಅರ್ಥವಾಗುತ್ತಿತ್ತು' ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

IPL 2026: MI vs RCB; ವಾಂಖೆಡೆ ಕ್ರೀಡಾಂಗಣದಲ್ಲಿ ಇತಿಹಾಸ ಬರೆದ ಬೆಂಗಳೂರು, ಅತ್ಯಧಿಕ ಮೊತ್ತ!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

SCROLL FOR NEXT