ಚೆನ್ನೈ ತಂಡ ಸೇರಿದ ಡೆವಾಲ್ಡ್ ಬ್ರೆವಿಸ್ 
ಕ್ರಿಕೆಟ್

IPL 2025: CSK ಕ್ಯಾಂಪ್ ಸೇರಿದ Dewald Brevis; ಮುಂಬೈ ಆಟಗಾರನಿಗೆ ಚೆನ್ನೈ ಗಾಳ, ಗುರ್ಕಿರೀಟ್ ಸಿಂಗ್ ಗೆ ಗಾಯ

2025 ರ ಐಪಿಎಲ್‌ನಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಸ್ಫೋಟಕ ಬ್ಯಾಟರ್​ನ ಅಗಮನವಾಗಿದೆ.

ಚೆನ್ನೈ: ಹಾಲಿ ಐಪಿಎಲ್ ಟೂರ್ನಿಯಲ್ಲಿ ಆಟಗಾರರ ಗಾಯದ ಸಮಸ್ಯೆಯಿಂದ ಗೊಂದಲಕ್ಕೀಡಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಬಹುದೊಡ್ಡ ರಿಲೀಫ್ ಸಿಕ್ಕಿದ್ದು, ಮತ್ತೋರ್ವ ಸ್ಟಾರ್ ಆಟಗಾರ CSK ಕ್ಯಾಂಪ್ ಸೇರಿದ್ದಾರೆ.

ಹೌದು.. 2025 ರ ಐಪಿಎಲ್‌ನಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಸ್ಫೋಟಕ ಬ್ಯಾಟರ್​ನ ಅಗಮನವಾಗಿದ್ದು, ಏಪ್ರಿಲ್ 18 ರಂದು ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್​ವೊಂದನ್ನು ಹಂಚಿಕೊಂಡಿರುವ ಸಿಎಸ್​ಕೆ ಫ್ರಾಂಚೈಸಿ, ದಕ್ಷಿಣ ಆಫ್ರಿಕಾದ ಯುವ ಆಟಗಾರ ಡೆವಾಲ್ಡ್ ಬ್ರೆವಿಸ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿರುವುದಾಗಿ ತಿಳಿಸಿದೆ.

ಈ ಹಿಂದೆ ಸಿಎಸ್ ಕೆ ತಂಡದ ವೇಗಿ ಗುರ್ಜಪಾನಿ ಸಿಂಗ್ ಗಾಯಗೊಂಡು ಟೂರ್ನಿಯಿಂದಲೇ ಹೊರಬಿದ್ದಿದ್ದರು. ಅವರ ಸ್ಥಾನಕ್ಕೆ ದಕ್ಷಿಣ ಆಫ್ರಿಕಾದ ಡೆವಾಲ್ಡ್ ಬ್ರೆವಿಸ್ ರನ್ನು ಸೇರಿಸಿಕೊಳ್ಳಲಾಗಿದೆ.

ಬ್ಯಾಟಿಂಗ್ ಗೆ ಬಲ

ಇನ್ನು ಹಾಲಿ ಟೂರ್ನಿಯಲ್ಲಿ ಚೆನ್ನೈ ತಂಡದ ಬ್ಯಾಟಿಂಗ್‌ ವಿಭಾಗ ದುರ್ಬಲವಾಗಿದ್ದು, ಇದೇ ಕಾರಣಕ್ಕಾಗಿ ವೇಗದ ಬೌಲರ್ ಬದಲಿಗೆ ಬ್ಯಾಟ್ಸ್‌ಮನ್‌ನನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಟಿ20 ಸ್ವರೂಪದಲ್ಲಿ ಸ್ಫೋಟಕ ಬ್ಯಾಟಿಂಗ್‌ಗೆ ಹೆಸರುವಾಸಿಯಾಗಿರುವ ಡೆವಾಲ್ಡ್ ಬ್ರೆವಿಸ್ ಅವರನ್ನು ಚೆನ್ನೈ ತಂಡ ಸೇರಿಸಿಕೊಂಡಿದೆ. ಅವರ ದಾಖಲೆಯೂ ಇದಕ್ಕೆ ಸಾಕ್ಷಿಯಾಗಿದ್ದು, ಈ ಬ್ಯಾಟ್ಸ್‌ಮನ್ ಕೇವಲ 81 ಟಿ20 ಪಂದ್ಯಗಳಲ್ಲಿ 123 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

ಅಂದಹಾಗೆ ಬ್ರೆವಿಸ್ ಪ್ರಸ್ತುತ ಅತ್ಯುತ್ತಮ ಫಾರ್ಮ್‌ನಲ್ಲಿದ್ದು, ಇತ್ತೀಚೆಗೆ ಅವರು ಕ್ರಿಕೆಟ್ ದಕ್ಷಿಣ ಆಫ್ರಿಕಾದ ಡಿವಿಷನ್-1 ಟಿ20 ಟೂರ್ನಮೆಂಟ್‌ನ ಕೊನೆಯ 6 ಇನ್ನಿಂಗ್ಸ್‌ಗಳಲ್ಲಿ ಒಂದು ಶತಕ ಮತ್ತು 3 ಅರ್ಧಶತಕಗಳನ್ನು ಬಾರಿಸಿದ್ದಾರೆ. ತಮ್ಮ ಟಿ20 ವೃತ್ತಿಜೀವನದಲ್ಲಿ, ಬ್ರೆವಿಸ್ 145 ರ ಸ್ಟ್ರೈಕ್ ರೇಟ್‌ನಲ್ಲಿ 1787 ರನ್ ಗಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT