ಇಶಾಂತ್ ಶರ್ಮಾ ಅಸ್ವಸ್ಥ 
ಕ್ರಿಕೆಟ್

IPL ಟೂರ್ನಿಗೂ ಬಿಸಿಲಾಘಾತ: ಮೈದಾನದಲ್ಲೇ ಕುಸಿದ GT ವೇಗಿ Ishant Sharma!

ಗುಜರಾತ್ ನ ಅಹ್ಮದಾಬಾದ್ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ಟೈಟನ್ಸ್ ನಡುವಿನ ಪಂದ್ಯದಲ್ಲಿ ಈ ಘಟನೆ ನಡೆದಿದ್ದು, ಟಾಸ್ ಗೆದ್ದ ಗುಜರಾತ್ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು.

ಅಹ್ಮದಾಬಾದ್: ಉತ್ತರ ಭಾರತದಲ್ಲಿ ವ್ಯಾಪಕವಾಗಿರುವ ಬೇಸಿಗೆ ಧಗೆ ಐಪಿಎಲ್ ಟೂರ್ನಿ ಮೇಲೂ ಪರಿಣಾಮ ಬೀರಿದ್ದು, ಪಂದ್ಯದ ನಡುವೆಯೇ ಭಾರತ ತಂಡದ ಸ್ಟಾರ್ ವೇಗಿ ಕುಸಿದು ಬಿದ್ದ ಘಟನೆ ವರದಿಯಾಗಿದೆಯ

ಗುಜರಾತ್ ನ ಅಹ್ಮದಾಬಾದ್ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ಟೈಟನ್ಸ್ ನಡುವಿನ ಪಂದ್ಯದಲ್ಲಿ ಈ ಘಟನೆ ನಡೆದಿದ್ದು, ಟಾಸ್ ಗೆದ್ದ ಗುಜರಾತ್ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು.

ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ನಿಗಧಿತ 20 ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 203 ರನ್ ಕಲೆಹಾಕಿತು.

ಡೆಲ್ಲಿ ಪರ ಕರುಣ್ ನಾಯರ್ 31 ರನ್, ಕೆಎಲ್ ರಾಹುಲ್ 28 ರನ್, ನಾಯಕ ಅಕ್ಸರ್ ಪಟೇಲ್ 39 ರನ್, ಸ್ಟಬ್ಸ್ 31 ರನ್ ಮತ್ತು ಆಶುತೋಷ್ ಶರ್ಮಾ 31 ರನ್ ಕಲೆಹಾಕಿದರು. ಗುಜರಾತ್ ಪರ ಪ್ರಸಿದ್ಧ ಕೃಷ್ಣ 4 ವಿಕೆಟ್ ಪಡೆದರೆ, ಸಿರಾಜ್, ಅರ್ಶದ್ ಖಾನ್, ಇಶಾಂತ್ ಶರ್ಮಾ ಮತ್ತು ಸಾಯಿ ಕಿಶೋರ್ ತಲಾ 1 ವಿಕೆಟ್ ಪಡೆದರು.

ಪಂದ್ಯದ ನಡುವೆಯೇ ಮೈದಾನ ತೊರೆದ ಇಶಾಂತ್ ಶರ್ಮಾ

ಇನ್ನು ಈ ಪಂದ್ಯದಲ್ಲಿ ಡೆಲ್ಲಿ ವಿರುದ್ಧ 3 ಓವರ್ ಎಸೆದ ಇಶಾಂತ್ ಶರ್ಮಾ 6.30ರ ಸರಾಸರಿಯಲ್ಲಿ 19 ರನ್ ನೀಡಿ 1 ವಿಕೆಟ್ ಪಡೆದರು. ಡೆಲ್ಲಿ ಬ್ಯಾಟಿಂಗ್ ವೇಳೆ ಮೈದಾನದಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ಇಶಾಂತ್ ಶರ್ಮಾ ಬಿಸಿಲ ಧಗೆಯಿಂದಾಗಿ ಅನಾರೋಗ್ಯಕ್ಕೆ ತುತ್ತಾದರು.

ಕೂಡಲೇ ಫಿಸಿಯೋ ಮೈದಾನಕ್ಕೆ ಆಗಮಿಸಿ ಅವರನ್ನು ಮೈದಾನದಿಂದ ಹೊರಗೆ ಕರೆದೊಯ್ದು ಡ್ರೆಸಿಂಗ್ ರೂಮಿನಲ್ಲಿ ಕೂರಿಸಿ ಚಿಕಿತ್ಸೆ ಮಾಡಿದರು. ಇಶಾಂತ್ ಶರ್ಮಾ ಡಗೌಟ್ ನಲ್ಲಿ ಕುಳಿತು ತಲೆ ಮೇಲೆ ಬಟ್ಟೆ ಹಾಕಿಕೊಂಡು ಕುಳಿತಿರುವ ವಿಡಿಯೋ ಇದೀಗ ವೈರಲ್ ಆಗುತ್ತಿದೆ.

ಇನ್ನು ಈ ಪಂದ್ಯದಲ್ಲಿ ಇಶಾಂತ್ ಶರ್ಮಾ ಮಾತ್ರವಲ್ಲ.. ಗುಜರಾತ್ ತಂಡದ ನಾಯಕ ಅಕ್ಸರ್ ಪಟೇಲ್, ಪ್ರಮುಖ ಬೌಲರ್ ಪ್ರಸಿದ್ಧ ಕೃಷ್ಣ ಕೂಡ ದಣಿದಿದ್ದರು. ಇಬ್ಬರೂ ಆಟಗಾರರಿಗೆ ಆಗಾಗ ಆರೋಗ್ಯದಲ್ಲಿ ವ್ಯತ್ಯಯವಾಗಿದ್ದು ಕಂಡುಬಂತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT