ವಿರಾಟ್ ಕೊಹ್ಲಿ - ರೋಹಿತ್ ಶರ್ಮಾ 
ಕ್ರಿಕೆಟ್

IPL 2025: ಫಾರ್ಮ್‌ಗೆ ಮರಳಿದ ರೋಹಿತ್ ಶರ್ಮಾ; ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ 'ಹಿಟ್‌ಮ್ಯಾನ್'!

ರೋಹಿತ್ ಶರ್ಮಾ 45 ಎಸೆತಗಳಲ್ಲಿ ನಾಲ್ಕು ಬೌಂಡರಿ ಮತ್ತು ಆರು ಸಿಕ್ಸರ್‌ಗಳ ನೆರವಿನೊಂದಿಗೆ ಅಜೇಯ 76 ರನ್ ಗಳಿಸಿ ಮುಂಬೈ ಇಂಡಿಯನ್ಸ್ ತಂಡಕ್ಕೆ ನೆರವಾದರು.

ಭಾನುವಾರ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ರ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ 45 ಎಸೆತಗಳಲ್ಲಿ ಅಜೇಯ 76 ರನ್ ಗಳಿಸುವ ಮೂಲಕ ಮತ್ತೆ ಫಾರ್ಮ್‌ಗೆ ಮರಳಿದರು. ಈ ಆವೃತ್ತಿಯ ಆರಂಭದಿಂದಲೂ ಬ್ಯಾಟಿಂಗ್‌ನಲ್ಲಿ ಕಳಪೆ ಪ್ರದರ್ಶನ ನೀಡುತ್ತಿದ್ದ ರೋಹಿತ್, ಅಂತಿಮವಾಗಿ ಲಯಕ್ಕೆ ಮರಳಿದ್ದಾರೆ. 76 ರನ್‌ಗಳ ಅಜೇಯ ಇನಿಂಗ್ಸ್‌ನಿಂದಾಗಿ ರೋಹಿತ್ ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ನೀಡಲಾಯಿತು. ಈ ಮೂಲಕ ರೋಹಿತ್ ಶರ್ಮಾ ಅವರು ವಿರಾಟ್ ಕೊಹ್ಲಿ ಅವರನ್ನು ಹಿಂದಿಕ್ಕಿದ್ದಾರೆ.

ಐಪಿಎಲ್ ವೃತ್ತಿಜೀವನದಲ್ಲಿ 20ನೇ ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ರೋಹಿತ್, ಟಿ20 ಲೀಗ್ ಇತಿಹಾಸದಲ್ಲಿ ಅತಿ ಹೆಚ್ಚು ಪ್ರಶಸ್ತಿಗಳನ್ನು ಪಡೆದ ಆಟಗಾರರ ಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿರಾಟ್ ಕೊಹ್ಲಿ ಅವರನ್ನು ಹಿಂದಿಕ್ಕಿದ್ದಾರೆ.

ಐಪಿಎಲ್‌ನಲ್ಲಿ ಅತಿ ಹೆಚ್ಚು ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದವರು

ಎಬಿ ಡಿವಿಲಿಯರ್ಸ್- 25

ಕ್ರಿಸ್ ಗೇಲ್ - 22

ರೋಹಿತ್ ಶರ್ಮಾ - 20

ವಿರಾಟ್ ಕೊಹ್ಲಿ - 19

ಡೇವಿಡ್ ವಾರ್ನರ್ - 18

ಎಂಎಸ್ ಧೋನಿ - 18

ರೋಹಿತ್ 45 ಎಸೆತಗಳಲ್ಲಿ ನಾಲ್ಕು ಬೌಂಡರಿ ಮತ್ತು ಆರು ಸಿಕ್ಸರ್‌ಗಳ ನೆರವಿನೊಂದಿಗೆ ಅಜೇಯ 76 ರನ್ ಗಳಿಸಿ ಮುಂಬೈ ಇಂಡಿಯನ್ಸ್ ತಂಡಕ್ಕೆ ನೆರವಾದರು. ಮುಂಬೈ ತಂಡ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ಒಂಬತ್ತು ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು. ಈ ಆವೃತ್ತಿಯ ಹಿಂದಿನ ಪಂದ್ಯಗಳಲ್ಲಿ 0, 8, 13, 17, 18 ಮತ್ತು 26 ರನ್ ಗಳಿಸಿದ್ದ ರೋಹಿತ್ ಈ ಪಂದ್ಯದಲ್ಲಿ ರೋಹಿತ್ ಅಬ್ಬರದ ಮೊದಲ ಅರ್ಧಶತಕ ಗಳಿಸಿದರು.

'ಇಲ್ಲಿ ದೀರ್ಘಕಾಲ ಇದ್ದ ನಂತರ, ನಿಮ್ಮನ್ನು ನೀವು ಅನುಮಾನಿಸಲು ಪ್ರಾರಂಭಿಸುವುದು ಮತ್ತು ವಿಭಿನ್ನ ಕೆಲಸಗಳನ್ನು ಮಾಡಲು ಪ್ರಾರಂಭಿಸುವುದು ಸುಲಭ. ಚೆನ್ನಾಗಿ ಅಭ್ಯಾಸ ಮಾಡುವುದು, ಚೆಂಡನ್ನು ಚೆನ್ನಾಗಿ ಹೊಡೆಯುವುದು ನನಗೆ ಮುಖ್ಯವಾಗಿತ್ತು. ನೀವು ಏನು ಮಾಡಬೇಕೆಂದು ನೀವು ಸ್ಪಷ್ಟವಾಗಿದ್ದಾಗ, ಇಂತಹ ವಿಷಯಗಳು ಸಂಭವಿಸುತ್ತವೆ' ಎಂದು ಪಂದ್ಯದ ನಂತರ ರೋಹಿತ್ ಹೇಳಿದರು.

ಆಟಗಾರನೊಬ್ಬ ತನ್ನ ಸಾಮರ್ಥ್ಯವನ್ನೇ ಅನುಮಾನಿಸಲು ಪ್ರಾರಂಭಿಸಿದರೆ ಒತ್ತಡ ಹೆಚ್ಚಾಗುತ್ತದೆ ಎಂದು ಮಾಜಿ ಎಂಐ ನಾಯಕ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

SCROLL FOR NEXT