ಗೌತಮ್ ಗಂಭೀರ್ 
ಕ್ರಿಕೆಟ್

ಪಹಲ್ಗಾಮ್‌ ಉಗ್ರರ ದಾಳಿಗೆ ಪ್ರತೀಕಾರದ ಹೇಳಿಕೆ: ಕಾಶ್ಮೀರ ಐಸಿಸ್ ಉಗ್ರರಿಂದ ಗೌತಮ್ ಗಂಭೀರ್ ಗೆ ಜೀವ ಬೆದರಿಕೆ!

ಏಪ್ರಿಲ್ 22 ರಂದು ಗಂಭೀರ್ ಅವರಿಗೆ ಎರಡು ಬೆದರಿಕೆ ಇಮೇಲ್‌ಗಳು ಬಂದಿವೆ ಎಂದು ಎಎನ್‌ಐ ವರದಿ ಮಾಡಿದೆ. ಒಂದು ಇಮೇಲ್ ಮಧ್ಯಾಹ್ನ ಮತ್ತು ಇನ್ನೊಂದು ಸಂಜೆ ಬಂದಿದೆ. ಎರಡೂ ಇಮೇಲ್‌ ನಲ್ಲಿಯೂ 'IKILLU' ಎಂಬ ಸಂದೇಶವಿದೆ.

ನವದೆಹಲಿ: ಪಹಲ್ಗಾಮ್‌ ಉಗ್ರರ ದಾಳಿಗೆ ಪ್ರತೀಕಾರದ ಹೇಳಿಕೆ ನೀಡಿದ್ದ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಮತ್ತು ಬಿಜೆಪಿಯ ಮಾಜಿ ಸಂಸದ ಗೌತಮ್ ಗಂಭೀರ್‌ಗೆ "ಐಸಿಸ್ ಕಾಶ್ಮೀರ" ಉಗ್ರರಿಂದ ಜೀವ ಬೆದರಿಕೆ ಬಂದಿದೆ ಎಂದು ವರದಿಯಾಗಿದೆ.

ಈ ಸಂಬಂಧ ದೆಹಲಿ ಪೊಲೀಸರನ್ನು ಸಂಪರ್ಕಿಸಿದ್ದು, ಎಫ್ ಐಆರ್ ಗಾಗಿ ದೂರು ದಾಖಲಿಸಿದ್ದಾರೆ. ಅವರ ಕುಟುಂಬದ ಭದ್ರತೆ ಕಾಪಾಡಲು ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ ಎಂದು ಅವರ ಕಚೇರಿ ತಿಳಿಸಿದೆ. ದೆಹಲಿ ಪೊಲೀಸರು ಕೂಲಂಕುಷವಾಗಿ ತನಿಖೆ ನಡೆಸಿ ಸೂಕ್ತ ರಕ್ಷಣಾ ಕ್ರಮ ಕೈಗೊಳ್ಳುವ ನಿರೀಕ್ಷೆಯಿದೆ.

ಏಪ್ರಿಲ್ 22 ರಂದು ಗಂಭೀರ್ ಅವರಿಗೆ ಎರಡು ಬೆದರಿಕೆ ಇಮೇಲ್‌ಗಳು ಬಂದಿವೆ ಎಂದು ಎಎನ್‌ಐ ವರದಿ ಮಾಡಿದೆ. ಒಂದು ಇಮೇಲ್ ಮಧ್ಯಾಹ್ನ ಮತ್ತು ಇನ್ನೊಂದು ಸಂಜೆ ಬಂದಿದೆ. ಎರಡೂ ಇಮೇಲ್‌ ನಲ್ಲಿಯೂ 'IKILLU' ಎಂಬ ಸಂದೇಶವಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ದೆಹಲಿ ಪೊಲೀಸರು ಗೌತಮ್ ಗಂಭೀರ್‌ಗೆ ಸಂಬಂಧಿಸಿದ ಇಮೇಲ್ ಐಡಿಯಲ್ಲಿ ಬೆದರಿಕೆ ಮೇಲ್ ಬಂದಿರುವ ಬಗ್ಗೆ ನಮಗೆ ತಿಳಿಸಲಾಗಿದೆ. ಅದೇ ರೀತಿ ತನಿಖೆ ನಡೆಸಲಾಗುತ್ತಿದೆ. ಅವರಿಗೆ ಈಗಾಗಲೇ ದೆಹಲಿ ಪೊಲೀಸರು ರಕ್ಷಣೆ ಒದಗಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಗಂಭೀರ್‌ಗೆ ಇಂತಹ ಕೊಲೆ ಬೆದರಿಕೆಗಳು ಬರುತ್ತಿರುವುದು ಇದೇ ಮೊದಲಲ್ಲ ಎಂದು ವರದಿಗಳು ತಿಳಿಸಿವೆ. ನವೆಂಬರ್ 2021 ರಲ್ಲಿ ಅವರು ಇದೇ ರೀತಿಯ ಇಮೇಲ್ ಅನ್ನು ಸ್ವೀಕರಿಸಿದ್ದರು.

ಪಹಲ್ಗಾಮ್‌ನಲ್ಲಿ ನಡೆದ ಭಯಾನಕ ದಾಳಿಯನ್ನು ಗಂಭೀರ್ ಖಂಡಿಸಿದ್ದರು. ಪ್ರವಾಸಿಗರ ಮೇಲೆ ನಡೆದ ದಾಳಿಗೆ ಸಂತಾಪ ಸೂಚಿಸಿ, ‘ಮೃತರ ಕುಟುಂಬಗಳಿಗೆ ನನ್ನ ಪ್ರಾರ್ಥನೆಗಳು. ಇದಕ್ಕೆ ಕಾರಣರಾದವರು ಶಿಕ್ಷೆ ಅನುಭವಿಸುತ್ತಾರೆ. ಭಾರತ ಪ್ರತೀಕಾರ ತೀರಿಸಿಕೊಳ್ಳುತ್ತದೆʼ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಗೌತಮ್‌ ಗಂಭೀರ್‌ಗೆ ಜೀವ ಬೆದರಿಕೆ ಸಂದೇಶ ಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT