ಗೌತಮ್ ಗಂಭೀರ್ 
ಕ್ರಿಕೆಟ್

ಪಹಲ್ಗಾಮ್‌ ಉಗ್ರರ ದಾಳಿಗೆ ಪ್ರತೀಕಾರದ ಹೇಳಿಕೆ: ಕಾಶ್ಮೀರ ಐಸಿಸ್ ಉಗ್ರರಿಂದ ಗೌತಮ್ ಗಂಭೀರ್ ಗೆ ಜೀವ ಬೆದರಿಕೆ!

ಏಪ್ರಿಲ್ 22 ರಂದು ಗಂಭೀರ್ ಅವರಿಗೆ ಎರಡು ಬೆದರಿಕೆ ಇಮೇಲ್‌ಗಳು ಬಂದಿವೆ ಎಂದು ಎಎನ್‌ಐ ವರದಿ ಮಾಡಿದೆ. ಒಂದು ಇಮೇಲ್ ಮಧ್ಯಾಹ್ನ ಮತ್ತು ಇನ್ನೊಂದು ಸಂಜೆ ಬಂದಿದೆ. ಎರಡೂ ಇಮೇಲ್‌ ನಲ್ಲಿಯೂ 'IKILLU' ಎಂಬ ಸಂದೇಶವಿದೆ.

ನವದೆಹಲಿ: ಪಹಲ್ಗಾಮ್‌ ಉಗ್ರರ ದಾಳಿಗೆ ಪ್ರತೀಕಾರದ ಹೇಳಿಕೆ ನೀಡಿದ್ದ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಮತ್ತು ಬಿಜೆಪಿಯ ಮಾಜಿ ಸಂಸದ ಗೌತಮ್ ಗಂಭೀರ್‌ಗೆ "ಐಸಿಸ್ ಕಾಶ್ಮೀರ" ಉಗ್ರರಿಂದ ಜೀವ ಬೆದರಿಕೆ ಬಂದಿದೆ ಎಂದು ವರದಿಯಾಗಿದೆ.

ಈ ಸಂಬಂಧ ದೆಹಲಿ ಪೊಲೀಸರನ್ನು ಸಂಪರ್ಕಿಸಿದ್ದು, ಎಫ್ ಐಆರ್ ಗಾಗಿ ದೂರು ದಾಖಲಿಸಿದ್ದಾರೆ. ಅವರ ಕುಟುಂಬದ ಭದ್ರತೆ ಕಾಪಾಡಲು ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ ಎಂದು ಅವರ ಕಚೇರಿ ತಿಳಿಸಿದೆ. ದೆಹಲಿ ಪೊಲೀಸರು ಕೂಲಂಕುಷವಾಗಿ ತನಿಖೆ ನಡೆಸಿ ಸೂಕ್ತ ರಕ್ಷಣಾ ಕ್ರಮ ಕೈಗೊಳ್ಳುವ ನಿರೀಕ್ಷೆಯಿದೆ.

ಏಪ್ರಿಲ್ 22 ರಂದು ಗಂಭೀರ್ ಅವರಿಗೆ ಎರಡು ಬೆದರಿಕೆ ಇಮೇಲ್‌ಗಳು ಬಂದಿವೆ ಎಂದು ಎಎನ್‌ಐ ವರದಿ ಮಾಡಿದೆ. ಒಂದು ಇಮೇಲ್ ಮಧ್ಯಾಹ್ನ ಮತ್ತು ಇನ್ನೊಂದು ಸಂಜೆ ಬಂದಿದೆ. ಎರಡೂ ಇಮೇಲ್‌ ನಲ್ಲಿಯೂ 'IKILLU' ಎಂಬ ಸಂದೇಶವಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ದೆಹಲಿ ಪೊಲೀಸರು ಗೌತಮ್ ಗಂಭೀರ್‌ಗೆ ಸಂಬಂಧಿಸಿದ ಇಮೇಲ್ ಐಡಿಯಲ್ಲಿ ಬೆದರಿಕೆ ಮೇಲ್ ಬಂದಿರುವ ಬಗ್ಗೆ ನಮಗೆ ತಿಳಿಸಲಾಗಿದೆ. ಅದೇ ರೀತಿ ತನಿಖೆ ನಡೆಸಲಾಗುತ್ತಿದೆ. ಅವರಿಗೆ ಈಗಾಗಲೇ ದೆಹಲಿ ಪೊಲೀಸರು ರಕ್ಷಣೆ ಒದಗಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಗಂಭೀರ್‌ಗೆ ಇಂತಹ ಕೊಲೆ ಬೆದರಿಕೆಗಳು ಬರುತ್ತಿರುವುದು ಇದೇ ಮೊದಲಲ್ಲ ಎಂದು ವರದಿಗಳು ತಿಳಿಸಿವೆ. ನವೆಂಬರ್ 2021 ರಲ್ಲಿ ಅವರು ಇದೇ ರೀತಿಯ ಇಮೇಲ್ ಅನ್ನು ಸ್ವೀಕರಿಸಿದ್ದರು.

ಪಹಲ್ಗಾಮ್‌ನಲ್ಲಿ ನಡೆದ ಭಯಾನಕ ದಾಳಿಯನ್ನು ಗಂಭೀರ್ ಖಂಡಿಸಿದ್ದರು. ಪ್ರವಾಸಿಗರ ಮೇಲೆ ನಡೆದ ದಾಳಿಗೆ ಸಂತಾಪ ಸೂಚಿಸಿ, ‘ಮೃತರ ಕುಟುಂಬಗಳಿಗೆ ನನ್ನ ಪ್ರಾರ್ಥನೆಗಳು. ಇದಕ್ಕೆ ಕಾರಣರಾದವರು ಶಿಕ್ಷೆ ಅನುಭವಿಸುತ್ತಾರೆ. ಭಾರತ ಪ್ರತೀಕಾರ ತೀರಿಸಿಕೊಳ್ಳುತ್ತದೆʼ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಗೌತಮ್‌ ಗಂಭೀರ್‌ಗೆ ಜೀವ ಬೆದರಿಕೆ ಸಂದೇಶ ಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT