ರಾಯಲ್ ಚಾಲೆಂಜರ್ಸ್ ಬೆಂಗಳೂರು 
ಕ್ರಿಕೆಟ್

IPL 2025: 'ವಧುವಿನ ಗೆಳತಿಯಾಗುವ ಬದಲು ತಾನೇ ವಧುವಾಗಲು RCB ಬಯಸಿದರೆ...': ಆಸ್ಟ್ರೇಲಿಯಾ ಮಾಜಿ ಕ್ರಿಕೆಟಿಗ ಹೇಳಿದ್ದೇನು?

ಹಿಂದಿನ ಆವೃತ್ತಿಗಳಲ್ಲಿ, ಬೌಲಿಂಗ್ ಅವರ ದೌರ್ಬಲ್ಯ ಎಂದು ನಾನು ಹೇಳುತ್ತೇನೆ. ಆದರೆ ಈಗ, ಅವರು ಬಹಳಷ್ಟು ಬೇಸ್‌ಗಳನ್ನು ಆವರಿಸಿದ್ದಾರೆಂದು ನಾನು ಭಾವಿಸುತ್ತೇನೆ. ಈ ಪಂದ್ಯವು ಅವರಿಗೆ ಗೆಲ್ಲಲೇಬೇಕಾದ ಪಂದ್ಯವಾಗಿದೆ.

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುರುವಾರ ನಡೆಯಲಿರುವ ರಾಜಸ್ಥಾನ್ ರಾಯಲ್ಸ್ (ಆರ್‌ಆರ್) ವಿರುದ್ಧದ ಪಂದ್ಯವು ಆರ್‌ಸಿಬಿಗೆ ಗೆಲ್ಲಲೇಬೇಕಾದ ಪಂದ್ಯವಾಗಿದೆ ಎಂದು ಎಂದು ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಮ್ಯಾಥ್ಯೂ ಹೇಡನ್ ಹೇಳಿದ್ದಾರೆ. ರಜತ್ ಪಾಟಿದಾರ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತವರಿನಿಂದ ಹೊರಗೆ ಆಡಿರುವ ಎಲ್ಲ ಸ್ಥಳಗಳಲ್ಲಿ ಅದ್ಭುತ ಯಶಸ್ಸನ್ನು ಕಂಡಿದೆ. ಆದರೆ, ಐಪಿಎಲ್ 2025ರಲ್ಲಿ ತವರಿನಲ್ಲಿ ಇನ್ನೂ ಒಂದು ಪಂದ್ಯವನ್ನು ಗೆದ್ದಿಲ್ಲ. ಇಲ್ಲಿಯವರೆಗೆ, ಆರ್‌ಸಿಬಿ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜಿಟಿ, ಡಿಸಿ ಮತ್ತು ಪಿಬಿಕೆಎಸ್ ವಿರುದ್ಧ ಆಡಿರುವ ಪಂದ್ಯಗಳಲ್ಲಿ ಸೋಲು ಕಂಡಿದೆ.

ಜಿಯೋಹಾಟ್‌ಸ್ಟಾರ್‌ನಲ್ಲಿ ಮಾತನಾಡಿದ ಹೇಡನ್, ಆರ್‌ಸಿಬಿ ತವರಿನಲ್ಲಿ ಗೆಲುವಿನ ಹಾದಿಗೆ ಮರಳುವುದು ಹೇಗೆ ಎಂಬುದನ್ನು ಲೆಕ್ಕಾಚಾರ ಮಾಡಬೇಕಾಗಿದೆ. ಕೆಕೆಆರ್, ಎಂಐ ಮತ್ತು ಸಿಎಸ್‌ಕೆಯಂತಹ ತಂಡಗಳು ವರ್ಷಗಳಿಂದ ಸ್ಥಿರವಾಗಿ ಕಾರ್ಯನಿರ್ವಹಿಸುತ್ತಿವೆ. ಏಕೆಂದರೆ, ಅವರು ತಮ್ಮ ತವರು ಮೈದಾನಗಳನ್ನು ತಮ್ಮ ಭದ್ರಕೋಟೆಗಳನ್ನಾಗಿ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.

'ಮುಂಬೈ, ಚೆನ್ನೈ, ಕೋಲ್ಕತ್ತಾದಂತಹ ಹೆಚ್ಚಿನ ಯಶಸ್ವಿ ಫ್ರಾಂಚೈಸಿಗಳು ತವರಿನಲ್ಲಿ ಭದ್ರಕೋಟೆಯನ್ನು ಹೊಂದಿವೆ. ಅದಕ್ಕಾಗಿಯೇ ಅವುಗಳು ವರ್ಷಗಳಿಂದ ಸ್ಥಿರ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಆರ್‌ಸಿಬಿ, ವಧುವಿನ ಗೆಳತಿಯಾಗುವುದನ್ನು ನಿಲ್ಲಿಸಿ ತಾನೇ ವಧುವಾಗಲು ಬಯಸಿದರೆ, ತವರಿನಲ್ಲಿ ಹೇಗೆ ಪಂದ್ಯವನ್ನು ಗೆಲ್ಲಬೇಕೆಂದು ಲೆಕ್ಕಾಚಾರ ಮಾಡಬೇಕಾಗುತ್ತದೆ. ಈ ಪಂದ್ಯವು ಆರ್‌ಸಿಬಿಗೆ ಗೆಲ್ಲಲೇಬೇಕಿದೆ' ಎಂದು ಹೇಡನ್ ಹೇಳಿದರು.

ಈ ಹಿಂದೆ ಆರ್‌ಸಿಬಿಯ ಬೌಲಿಂಗ್ ವಿಭಾಗ ದುರ್ಬಲವಾಗಿತ್ತು. ಆದಾಗ್ಯೂ, ಅವರು ಬಹಳಷ್ಟು ಪಂದ್ಯಗಳನ್ನು ಗೆದ್ದಿದ್ದರು. ಹಿಂದಿನ ಆವೃತ್ತಿಗಳಲ್ಲಿ, ಬೌಲಿಂಗ್ ಅವರ ದೌರ್ಬಲ್ಯ ಎಂದು ನಾನು ಹೇಳುತ್ತೇನೆ. ಆದರೆ ಈಗ, ಅವರು ಬಹಳಷ್ಟು ಬೇಸ್‌ಗಳನ್ನು ಆವರಿಸಿದ್ದಾರೆಂದು ನಾನು ಭಾವಿಸುತ್ತೇನೆ. ಈ ಪಂದ್ಯವು ಅವರಿಗೆ ಗೆಲ್ಲಲೇಬೇಕಾದ ಪಂದ್ಯವಾಗಿದೆ' ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

SCROLL FOR NEXT