ಜಸ್ ಪ್ರೀತ್ ಬುಮ್ರಾ ದಾಖಲೆ 
ಕ್ರಿಕೆಟ್

IPL 2025: Jasprit Bumrah ಭರ್ಜರಿ ಬೌಲಿಂಗ್, Lasith Malinga ದಾಖಲೆ ಪತನ

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ ಜಸ್ ಪ್ರೀತ್ ಬುಮ್ರಾ, 4 ವಿಕೆಟ್ ಪಡೆದು ಅಪರೂಪದ ದಾಖಲೆ ಬರೆದಿದ್ದಾರೆ.

ಮುಂಬೈ: ಹಾಲಿ ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಲಕ್ನೋ ಸೂಪಪ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ ಜಸ್ ಪ್ರೀತ್ ಬುಮ್ರಾ (Jasprit Bumrah) ಅಪರೂಪದ ದಾಖಲೆ ನಿರ್ಮಿಸಿದ್ದಾರೆ.

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ ಜಸ್ ಪ್ರೀತ್ ಬುಮ್ರಾ, 4 ವಿಕೆಟ್ ಪಡೆದು ಅಪರೂಪದ ದಾಖಲೆ ಬರೆದಿದ್ದಾರೆ.

ಆ ಮೂಲಕ ಬುಮ್ರಾ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್‌ ತಂಡದ ಪರ ಅತಿಹೆಚ್ಚು ವಿಕೆಟ್‌ ಪಡೆದ ಆಟಗಾರ ಎನಿಸಿಕೊಂಡರು. ಲಖನೌ ಸೂಪರ್‌ ಜೈಂಟ್ಸ್‌ ತಂಡದ ಬ್ಯಾಟರ್‌ ಏಡನ್‌ ಮಾರ್ಕ್ರಂ ವಿಕೆಟ್‌ ಪಡೆಯುವ ಮೂಲಕ ಅವರು ಈ ಸಾಧನೆ ಮಾಡಿದರು.

174 ವಿಕೆಟ್

ಇನ್ನು ಇಂದಿನ 4 ವಿಕೆಟ್ ಗಳು ಸೇರಿದಂತೆ ಜಸ್ ಪ್ರೀತ್ ಬುಮ್ರಾ ಮುಂಬೈ ಪರ ತಮ್ಮ ವಿಕೆಟ್ ಗಳಿಕೆಯನ್ನು 174ಕ್ಕೆ ಏರಿಸಿಕೊಂಡರು. ಆ ಮೂಲಕ ಮುಂಬೈ ಪರ ಅತೀ ಹೆಚ್ಚು ವಿಕೆಟ್ ಪಡೆದ ಮೊದಲ ಬೌಲರ್ ಎಂಬ ಕೀರ್ತಿಗೆ ಬುಮ್ರಾ ಪಾತ್ರರಾದರು. ಇದಕ್ಕೂ ಮೊದಲು ಈ ದಾಖಲೆ ಲಸಿತ್ ಮಲಿಂಗಾ ಹೆಸರಲ್ಲಿತ್ತು. ಮಲಿಂಗಾ ಒಟ್ಟು 170 ವಿಕೆಟ್ ಪಡೆದಿದ್ದರು. ಈ ಪಟ್ಟಿಯಲ್ಲಿ ಹರ್ಭಜನ್ ಸಿಂಗ್ (127 ವಿಕೆಟ್), ಮಿಚೆಲ್ ಮೆಕ್ ಲೆಂಗನ್ (71 ವಿಕೆಟ್), ಕೀರನ್ ಪೊಲಾರ್ಡ್ (69 ವಿಕೆಟ್) ಮತ್ತು ಹಾರ್ದಿಕ್ ಪಾಂಡ್ಯಾ 65 ವಿಕೆಟ್ ಪಡೆದಿದ್ದಾರೆ..

ಅಂದಹಾಗೆ 2013ರಲ್ಲಿ ಐಪಿಎಲ್‌ಗೆ ಪದಾರ್ಪಣೆ ಮಾಡಿದಾಗಿನಿಂದಲೂ ಮುಂಬೈ ಪರ ಆಡುತ್ತಿರುವ ಬೂಮ್ರಾ, ಈವರೆಗೆ 139 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. ಪ್ರತಿ ಓವರ್‌ಗೆ 7.32ರ ದರದಲ್ಲಿ ರನ್‌ ಬಿಟ್ಟುಕೊಟ್ಟಿರುವ ಅವರು, 174 ವಿಕೆಟ್‌ಗಳನ್ನು ಜೇಬಿಗಿಳಿಸಿಕೊಂಡಿದ್ದಾರೆ. ಎರಡು ಸಲ ಐದು ವಿಕೆಟ್‌ ಗೊಂಚಲು ಸಾಧನೆ ಮಾಡಿರುವ ಅವರು, ಇನಿಂಗ್ಸ್‌ವೊಂದರಲ್ಲಿ ಕೇವಲ 10 ರನ್‌ಗೆ 5 ವಿಕೆಟ್‌ ಪಡೆದ ಶ್ರೇಷ್ಠ ರೆಕಾರ್ಡ್‌ ಹೊಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

ಎರಡು ಬಾರಿ ಪ್ರಜ್ಞಾಹೀನರಾದ ಮಾಜಿ ಉಪ ರಾಷ್ಟ್ರಪತಿ Jagdeep Dhankhar, ಆಸ್ಪತ್ರೆಗೆ ದಾಖಲು!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

SCROLL FOR NEXT