ವಿರಾಟ್ ಕೊಹ್ಲಿ 
ಕ್ರಿಕೆಟ್

IPL 2025: ಕೆಲವೇ ಗಂಟೆಗಳಲ್ಲಿ Suryakumar Yadav 'ಆರೆಂಜ್ ಕ್ಯಾಪ್' ಕಸಿದ Virat Kohli

ಆರ್ ಸಿಬಿ 18.3 ಓವರ್ ನಲ್ಲಿ 165 ರನ್ ಗಳಿಸಿ ಇನ್ನೂ 9 ಎಸೆತ ಬಾಕಿ ಇರುವಂತೆಯೇ 6 ವಿಕೆಟ್ ಅಂತರದ ಭರ್ಜರಿ ಜಯ ದಾಖಲಿಸಿತು.

ನವದೆಹಲಿ: ಐಪಿಎಲ್ ಟೂರ್ನಿಯಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿರುವ ರನ್ ಮೆಷಿನ್ ವಿರಾಟ್ ಕೊಹ್ಲಿ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧವೂ ಭರ್ಜರಿ ಬ್ಯಾಟಿಂಗ್ ಮಾಡಿ ಆರೆಂಜ್ ಕ್ಯಾಪ್ ಕೀರ್ತಿಗೆ ಭಾಜನರಾಗಿದ್ದಾರೆ.

ಇಂದು ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ 2ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ನೀಡಿದ 163ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಆರ್ ಸಿಬಿ ಕೃನಾಲ್ ಪಾಂಡ್ಯಾ ಮತ್ತು ವಿರಾಟ್ ಕೊಹ್ಲಿ ಅವರ ಅರ್ಧಶತಕಗಳ ನೆರವಿನಿಂದ ಜಯಭೇರಿ ಭಾರಿಸಿತು. ಆರ್ ಸಿಬಿ 18.3 ಓವರ್ ನಲ್ಲಿ 165 ರನ್ ಗಳಿಸಿ ಇನ್ನೂ 9ಎಸೆತ ಬಾಕಿ ಇರುವಂತೆಯೇ 6 ವಿಕೆಟ್ ಅಂತರದ ಭರ್ಜರಿ ಜಯ ದಾಖಲಿಸಿತು.

ಈ ಪಂದ್ಯದಲ್ಲಿ ಆರ್ ಸಿಬಿ ಗೆಲುವಿನಲ್ಲಿ ವಿರಾಟ್ ಕೊಹ್ಲಿ ಮಹತ್ತರ ಪಾತ್ರವಹಿಸಿದರು. ವಿರಾಟ್ ಕೊಹ್ಲಿ 47 ಎಸೆತಗಳಲ್ಲಿ 4 ಬೌಂಡರಿ ಸಹಿತ 51 ರನ್ ಗಳಿಸಿದರು. ಆ ಮೂಲಕ ಹಾಲಿ ಐಪಿಎಲ್ ಟೂರ್ನಿಯಲ್ಲಿ ತಮ್ಮ ರನ್ ಗಳಿಕೆಯನ್ನು 443 ರನ್ ಗಳಿಗೆ ಏರಿಸಿಕೊಂಡರು.

ಅಲ್ಲದೆ ಹಾಲಿ ಟೂರ್ನಿಯಲ್ಲಿ ಗರಿಷ್ಟ ರನ್ ಗಳಿಸಿದ ಆಟಗಾರ ಎಂಬ ಕೀರ್ತಿಗೂ ವಿರಾಟ್ ಕೊಹ್ಲಿ ಭಾಜನರಾದರು. ಆ ಮೂಲಕ ಕೊಹ್ಲಿ ಇದೀಗ ಆರೆಂಜ್ ಕ್ಯಾಪ್ ಗೌರವಕ್ಕೆ ಪಾತ್ರರಾಗಿದ್ದಾರೆ.

ಇಂದು ಮಧ್ಯಾಹ್ನವಷ್ಟೇ ಮುಂಬೈ ಇಂಡಿಯನ್ಸ್ ತಂಡ ಸೂರ್ಯ ಕುಮಾರ್ ಯಾದವ್ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಅರ್ಧಶತಕ ಸಿಡಿಸಿ ಇದೇ ಪಟ್ಟಿಯ ಅಗ್ರ ಸ್ಥಾನಕ್ಕೇರಿದ್ದರು. ಸೂರ್ಯ ಕುಮಾರ್ ಯಾದವ್ ಇಂದಿನ ಅರ್ಧಶತಕ ಕೂಡ ಸೇರಿದಂತೆ ಹಾಲಿ ಟೂರ್ನಿಯಲ್ಲಿ ತಮ್ಮ ರನ್ ಗಳಿಕೆಯನ್ನು 427 ರನ್ ಗಳಿಗೆ ಏರಿಕೆ ಮಾಡಿಕೊಂಡು ಆರೆಂಜ್ ಕ್ಯಾಪ್ ಗೌರವಕ್ಕೆ ಪಾತ್ರರಾಗಿದ್ದರು.

ಆದರೆ ಇದಾದ ಕೆಲವೇ ಗಂಟೆಗಳ ಅವಧಿಯಲ್ಲಿ ವಿರಾಟ್ ಕೊಹ್ಲಿ ಸೂರ್ಯಕುಮಾರ್ ಯಾದವ್ ರಿಂದ ಆರೆಂಜ್ ಕ್ಯಾಪ್ ಕಸಿದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT