ರಿಷಭ್ ಪಂತ್ 
ಕ್ರಿಕೆಟ್

IPL 2025: ಮುಂಬೈ ವಿರುದ್ಧ LSGಗೆ ಹೀನಾಯ ಸೋಲಿನ ನಡುವೆ ನಾಯಕ ರಿಷಭ್ ಪಂತ್‌ಗೆ ಮತ್ತೊಂದು ಸಂಕಷ್ಟ!

ಮುಂಬೈ ಇಂಡಿಯನ್ಸ್ ನೀಡಿದ 216 ರನ್‌ಗಳ ಗುರಿ ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 161 ರನ್‌ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡು ಮುಂಬೈ ವಿರುದ್ಧ ಸೋಲೊಪ್ಪಿಕೊಂಡಿತು.

ಮುಂಬೈ: ಭಾನುವಾರ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (IPL) 2025 ರ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡವು ಮುಂಬೈ ಇಂಡಿಯನ್ಸ್ (MI) ವಿರುದ್ಧ 54 ರನ್‌ಗಳ ಹೀನಾಯ ಸೋಲು ಕಂಡಿದೆ. ಇದರೊಂದಿಗೆ ಎಲ್ಎಸ್‌ಜಿ ನಾಯಕ ರಿಷಬ್ ಪಂತ್ ಅವರಿಗೆ ದಂಡ ವಿಧಿಸಲಾಗಿದೆ.

ಈ ತಿಂಗಳ ಆರಂಭದಲ್ಲಿ ಲಕ್ನೋದ ಏಕಾನಾ ಕ್ರೀಡಾಂಗಣದಲ್ಲಿ ನಡೆದ MI ವಿರುದ್ಧದ LSG ಪಂದ್ಯದ ನಂತರವೂ ಪಂತ್ ಅವರಿಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿತ್ತು. ಇದೀಗ ಮುಂಬೈನಲ್ಲಿ ನಡೆದ ಪಂದ್ಯದ ನಂತರವೂ ಸ್ಲೋ ಓರ್ ರೇಟ್ ಇದ್ದುದ್ದಕ್ಕಾಗಿ ರಿಷಬ್ ಪಂತ್ ಅವರಿಗೆ 24 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.

'ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.22ರ ಅಡಿಯಲ್ಲಿ ಕನಿಷ್ಠ ಓವರ್-ರೇಟ್ ಅಪರಾಧಗಳಿಗೆ ಸಂಬಂಧಿಸಿದಂತೆ, ಎಲ್ಎಸ್‌ಜಿ ತಂಡವು ಈ ಆವೃತ್ತಿಯಲ್ಲಿ ಎರಡನೇ ಬಾರಿಗೆ ಅಪರಾಧ ಎಸಗಿರುವುದರಿಂದ ಪಂತ್ ಅವರಿಗೆ 24 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ' ಎಂದು ಐಪಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.

'ಇಂಪ್ಯಾಕ್ಟ್ ಪ್ಲೇಯರ್ ಸೇರಿದಂತೆ ಪ್ಲೇಯಿಂಗ್ XI ನ ಉಳಿದ ಸದಸ್ಯರಿಗೆ ಆರು ಲಕ್ಷ ರೂಪಾಯಿ ಅಥವಾ ಅವರ ಪಂದ್ಯ ಶುಲ್ಕದ ಶೇ 25 ರಷ್ಟು ದಂಡ ವಿಧಿಸಲಾಗುತ್ತದೆ. ಇದರಲ್ಲಿ ಯಾವುದು ಕಡಿಮೆ ಮೊತ್ತವೋ ಆ ದಂಡ ವಿಧಿಸಲಾಗುತ್ತದೆ.

ರಾಜಸ್ಥಾನ್ ರಾಯಲ್ಸ್ (RR) ನಂತರ ಎರಡು ಬಾರಿ ದಂಡ ವಿಧಿಸಲಾದ ಎರಡನೇ ತಂಡ ಲಕ್ನೋ ಸೂಪರ್ ಜೈಂಟ್ಸ್ ಆಗಿದೆ. ಮಾರ್ಚ್‌ನಲ್ಲಿ, ಗುವಾಹಟಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧದ ಪಂದ್ಯದಲ್ಲಿ ರಿಯಾನ್ ಪರಾಗ್ ಅವರಿಗೆ ಸ್ಲೋ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಮೊದಲನೇ ಬಾರಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿತ್ತು.

ನಂತರ ಏಪ್ರಿಲ್ 9 ರಂದು ಬುಧವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಶುಭಮನ್ ಗಿಲ್ ನಾಯಕತ್ವದ ಗುಜರಾತ್ ಟೈಟಾನ್ಸ್ (GT) ವಿರುದ್ಧದ RR ಪಂದ್ಯದ ನಂತರ ಸಂಜು ಸ್ಯಾಮ್ಸನ್‌ ಅವರಿಗೆ 25 ಲಕ್ಷ ರೂ. ದಂಡ ವಿಧಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT