ವೈಭವ್ ಸೂರ್ಯವಂಶಿ ಮತ್ತು ಯಶಸ್ವಿ ಜೈಸ್ವಾಲ್ 
ಕ್ರಿಕೆಟ್

IPL 2025: Vaibhav Suryavanshi, Yashasvi Jaiswal ಸ್ಫೋಟಕ ಬ್ಯಾಟಿಂಗ್; GT ವಿರುದ್ಧ RRಗೆ 8 ವಿಕೆಟ್ ಭರ್ಜರಿ ಜಯ

ಜೈಪುರದ ಸವಾಯ್ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡ ನೀಡಿದ್ದ 210 ರನ್ ಗಳ ಗುರಿಯನ್ನು ರಾಜಸ್ತಾನ ರಾಯಲ್ಸ್ ತಂಡ ಕೇವಲ 15.5 ಓವರ್ ನಲ್ಲೇ 212 ರನ್ ಗಳಿಸಿ 8 ವಿಕೆಟ್ ಗಳ ಅಂತರದಲ್ಲಿ ಭರ್ಜರಿ ಜಯ ಗಳಿಸಿತು.

ಜೈಪುರ: ಐಪಿಎಲ್ ಟೂರ್ನಿಯಲ್ಲಿ ಇಂದು ಮಹತ್ವದ ಪಂದ್ಯ ಮುಕ್ತಾಯವಾಗಿದ್ದು, ಪ್ರಬಲ ಗುಜರಾತ್ ಟೈಟನ್ಸ್ ವಿರುದ್ಧ ರಾಜಸ್ತಾನ ರಾಯಲ್ಸ್ ತಂಡ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ಜೈಪುರದ ಸವಾಯ್ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡ ನೀಡಿದ್ದ 210 ರನ್ ಗಳ ಗುರಿಯನ್ನು ರಾಜಸ್ತಾನ ರಾಯಲ್ಸ್ ತಂಡ ಕೇವಲ 15.5 ಓವರ್ ನಲ್ಲೇ 212 ರನ್ ಗಳಿಸಿ 8 ವಿಕೆಟ್ ಗಳ ಅಂತರದಲ್ಲಿ ಭರ್ಜರಿ ಜಯ ಗಳಿಸಿತು.

ರಾಜಸ್ತಾನ ಪರ ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ ಮತ್ತು ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್ ನಡೆಸಿ ಗುಜರಾತ್ ವಿರುದ್ಧದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದರು. ಜೈಸ್ವಾಲ್ 40 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 9 ಬೌಂಡರಿಗಳ ನೆರವಿನಿಂದ 70 ರನ್ ಸಿಡಿಸಿದರು.

ಮತ್ತೊಂದು ತುದಿಯಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ವೈಭವ್ ಸೂರ್ಯವಂಶಿ ಕೇವಲ 38 ಎಸೆತಗಳಲ್ಲಿ ಬರೊಬ್ಬರಿ 11 ಸಿಕ್ಸರ್ ಮತ್ತು 7 ಬೌಂಡರಿಗಳ ನೆರವಿನಿಂದ 101 ರನ್ ಗಳಿಸಿದರು.

ಆದರೆ ಶತಕದ ಬಳಿಕ ಕನ್ನಡಿಗ ಪ್ರಸಿದ್ಧ ಕೃಷ್ಣ ಬೌಲಿಂಗ್ ನಲ್ಲಿ ಕ್ಲೀನ್ ಬೌಲ್ಡ್ ಆಗಿ ಹೊರ ನಡೆದರು. ವೈಭವ್ ಸೂರ್ಯವಂಶಿ ಬೆನ್ನಲ್ಲೇ ನಿತೀಶ್ ರಾಣಾ ಕೂಡ ಬಂದಷ್ಟೇ ವೇಗವಾಗಿ 4 ರನ್ ಸಿಡಿಸಿ ರಷೀದ್ ಖಾನ್ ಗೆ ವಿಕೆಟ್ ಒಪ್ಪಿಸಿದರು. ಬಳಿಕ ಕ್ರೀಸ್ ಗೆ ಬಂದ ನಾಯಕ ರಿಯಾನ್ ಪರಾಗ್ 15 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 2 ಬೌಂಡರಿ ಸಹಿತ ಅಜೇಯ 32 ರನ್ ಸಿಡಿಸಿ ಗೆಲುವಿನ ಔಪಚಾರಿಕತೆ ಮುಕ್ತಾಯಗೊಳಿಸಿದರು.

ಶತಕದ ಮೂಲಕ ತಂಡದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ ವೈಭವ್ ಸೂರ್ಯವಂಶಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT