ವೈಭವ್ ಸೂರ್ಯವಂಶಿ 
ಕ್ರಿಕೆಟ್

''ವೈಭವ್ ಸೂರ್ಯವಂಶಿ ಕ್ರಿಕೆಟ್ ಜೀವನ ಅಂದುಕೊಂಡಷ್ಟು ಸುಲಭವಲ್ಲಾ''; ಆರ್ ಪಿ ಸಿಂಗ್ ವಾರ್ನಿಂಗ್, ಯಾಕೆ?

ರಾಜಸ್ಥಾನ ರಾಯಲ್ಸ್ 1.10 ಕೋಟಿಗೆ ಖರೀದಿಸಿದ ಸೂರ್ಯವಂಶಿ, ಸವಾಯಿ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ಭರ್ಜರಿ 11 ಸಿಕ್ಸರ್, 7 ಬೌಂಡರಿಗಳ ಮೂಲಕ ಗುಜರಾತ್ ಟೈಟನ್ಸ್ ಗೆ ಭರ್ಜರಿ ಗೆಲುವು ತಂದುಕೊಟ್ಟರು.

ಜೈಪುರ: ಗುಜರಾತ್ ಟೈಟನ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಕೇವಲ 35 ಎಸೆತಗಳಲ್ಲಿ ಸ್ಟನಿಂಗ್ ಶತಕ ಸಿಡಿಸುವ ಮೂಲಕ ರಾತ್ರೋ ರಾತ್ರಿ ಕ್ರಿಕೆಟ್ ಜಗತ್ತನ್ನು ನಿದ್ದೆಗೆಡಿಸಿದ ರಾಜಸ್ಥಾನ ರಾಯಲ್ಸ್ ತಂಡದ ಕಿರಿಯ ಬ್ಯಾಟರ್ ವೈಭವ್ ಸೂರ್ಯವಂಶಿಗೆ ಎಚ್ಚರಿಕೆಗಳು ಬರಲಾರಂಭಿಸಿವೆ.ವಿಶೇಷವಾಗಿ ಅವರಿಗೆ ಮುಂಬರುವ ಸವಾಲುಗಳನ್ನು ನೆನಪಿಸಿ ಆರ್ ಪಿ ಸಿಂಗ್ ವಾರ್ನಿಂಗ್ ನೀಡಿದ್ದಾರೆ.

ರಾಜಸ್ಥಾನ ರಾಯಲ್ಸ್ 1.10 ಕೋಟಿಗೆ ಖರೀದಿಸಿದ ಸೂರ್ಯವಂಶಿ, ಸವಾಯಿ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ಭರ್ಜರಿ 11 ಸಿಕ್ಸರ್, 7 ಬೌಂಡರಿಗಳ ಮೂಲಕ ಗುಜರಾತ್ ಟೈಟನ್ಸ್ ಗೆ ಭರ್ಜರಿ ಗೆಲುವು ತಂದುಕೊಟ್ಟರು.

ಎರಡನೇ ಇನ್ನಿಂಗ್ಸ್ ನಲ್ಲಿ ಗುಜರಾತ್ ಟೈಟನ್ಸ್ ಆಟ ಆಡುತ್ತಿದ್ದೆಯೋ, ಅಥವಾ ಇಲ್ಲವೋ ಎಂಬುದೇ ಕಾಣುತ್ತಿರಲಿಲ್ಲ. ರಾಜಸ್ಥಾನ ಕೇವಲ 15.5 ಓವರ್‌ಗಳಲ್ಲಿ 210 ರನ್‌ಗಳ ಗುರಿಯನ್ನು ತಲುಪಿತು. ಯಶಸ್ವಿ ಜೈಸ್ವಾಲ್ ಅಜೇಯ ಅರ್ಧ ಶತಕ ಬಾರಿಸಿದರು.

14 ವರ್ಷದ ಯುವ ಬ್ಯಾಟರ್‌ ವೇಗಿಗಳು ಮತ್ತು ಸ್ಪಿನ್ನರ್‌ಗಳ ವಿರುದ್ಧ ನಿರ್ಭಯವಾಗಿ ಬ್ಯಾಟ್ ಮಾಡುವ ಮೂಲಕ ಎದುರಾಗಳಿಗೆ ನಡುಕ ಹುಟ್ಟಿಸಿದರು.

ಈ ಮಧ್ಯೆ ''ವೈಭವ್ ಸೂರ್ಯವಂಶಿ ಕ್ರಿಕೆಟ್ ಜೀವನ ಅಂದುಕೊಂಡಷ್ಟು ಸುಲಭವಲ್ಲಾ ಎಂದು ಆರ್ ಪಿ ಸಿಂಗ್ ಹೇಳಿದ್ದಾರೆ. ಏಕೆಂದರೆ ಇತರ ತಂಡಗಳು ವೈಭವ್ ಗಾಗಿ ಸಿದ್ಧರಾಗಿ ಬರುತ್ತವೆ. ಅವರು ಈಗಾಗಲೇ ಆತನ ಪ್ರಬಲ ಮತ್ತು ದುರ್ಬಲ ಅಂಶಗಳನ್ನು ವಿಮರ್ಶಿಸಲು ಪ್ರಾರಂಭಿಸಿದ್ದಾರೆ. ಅವರಿನ್ನೂ ಹೊಸಬರು. ಆಡಿರುವ ಮೊದಲ ಮೂರು ಪಂದ್ಯಗಳಲ್ಲಿ ವಿರೋಧಿಗಳು ಸಿದ್ಧವಾಗಿರಲಿಲ್ಲ. ಆದಾಗ್ಯೂ, ಅವರು ಮುಂದಿನ ಪಂದ್ಯದಲ್ಲಿ ಕಣಕ್ಕಿಳಿಯುವ ಮುನ್ನಾ ಅವರಿಗಾಗಿ ಯೋಜನೆಗಳನ್ನು ಸಿದ್ಧಪಡಿಸುತ್ತಾರೆ ಎಂದು ಹೇಳಿದರು.

ವೈಭವ್ ಅವರ ಹೊಡೆತಗಳಿಂದ ದಿಗ್ಭ್ರಮೆಗೊಂಡಿದ್ದೆ. ಅವರ ವಯಸ್ಸನ್ನು ಮರೆತುಬಿಡಿ ಮತ್ತು ಅವರ ಹೊಡೆತಗಳನ್ನು ನೋಡಿ. ಅವರ ಲಾಂಗ್ ಶಾಟ್ ಗಳಿಂದ ನಾನು ಪ್ರಭಾವಿತನಾಗಿದ್ದೇನೆ ಮತ್ತು ದಿಗ್ಭ್ರಮೆಗೊಂಡಿದ್ದೇನೆ ಎಂದು ಆರ್ ಪಿಸಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT