ಕುಮಾರ್ ಧರ್ಮಸೇನಾ - ಕೆಎಲ್ ರಾಹುಲ್ 
ಕ್ರಿಕೆಟ್

'ನೀವು ಹಾಗೆ ಮಾತನಾಡಲು ಸಾಧ್ಯವಿಲ್ಲ': ಕೆಎಲ್ ರಾಹುಲ್ ಜೊತೆ ಅಂಪೈರ್ ಕುಮಾರ್ ಧರ್ಮಸೇನಾ ಬಿಸಿ ಬಿಸಿ ಚರ್ಚೆ!

ಮೈದಾನದಲ್ಲಿ ಯಾವುದೇ ಭಾವನೆಯನ್ನು ವ್ಯಕ್ತಪಡಿಸದೆಯೇ ಭಾರತ ಕೇವಲ ಬ್ಯಾಟಿಂಗ್ ಮತ್ತು ಬೌಲಿಂಗ್ ಮಾಡುವುದನ್ನು ನೀವು ಬಯಸುತ್ತೀರಾ ಎಂದು ರಾಹುಲ್ ಅಂಪೈರ್ ಅನ್ನು ಪ್ರಶ್ನಿಸಿದರು.

ಶುಕ್ರವಾರ ದಿ ಓವಲ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಪಂದ್ಯದ 2 ನೇ ದಿನ ಭಾರತ ಕ್ರಿಕೆಟ್ ತಂಡದ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಅವರು ಆನ್-ಫೀಲ್ಡ್ ಅಂಪೈರ್ ಕುಮಾರ್ ಧರ್ಮಸೇನಾ ಅವರೊಂದಿಗೆ ಚರ್ಚೆ ನಡೆಸಿದರು. ಇಂಗ್ಲೆಂಡ್ ಬ್ಯಾಟ್ಸ್‌ಮನ್ ಜೋ ರೂಟ್ ಮತ್ತು ಭಾರತದ ವೇಗಿ ಪ್ರಸಿದ್ಧ್ ಕೃಷ್ಣ ನಡುವಿನ ಮಾತಿನ ಚಕಮಕಿಯ ನಂತರ ಈ ಘಟನೆ ಸಂಭವಿಸಿದೆ. ರಾಹುಲ್ ತಮ್ಮ ತಂಡದ ಆಟಗಾರನಿಗೆ ಬೆಂಬಲ ನೀಡಲು ಮುಂದಾದಾಗ ಧರ್ಮಸೇನಾ ಇದನ್ನು ಕೊನೆಗೊಳಿಸಲು ಬಯಸಿದ್ದರು. ಮೈದಾನದಲ್ಲಿ ಯಾವುದೇ ಭಾವನೆಯನ್ನು ವ್ಯಕ್ತಪಡಿಸದೆಯೇ ಭಾರತ ಕೇವಲ ಬ್ಯಾಟಿಂಗ್ ಮತ್ತು ಬೌಲಿಂಗ್ ಮಾಡುವುದನ್ನು ನೀವು ಬಯಸುತ್ತೀರಾ ಎಂದು ರಾಹುಲ್ ಅಂಪೈರ್ ಅನ್ನು ಪ್ರಶ್ನಿಸಿದರು.

ಕೆಎಲ್ ರಾಹುಲ್ ಮತ್ತು ಕುಮಾರ್ ಧರ್ಮಸೇನಾ ನಡುವಿನ ಮಾತುಕತೆ

ರಾಹುಲ್: ನಾವು ಏನು ಮಾಡಬೇಕೆಂದು ನೀವು ಬಯಸುತ್ತೀರಿ? ಸುಮ್ಮನಿರುವುದೇ?

ಧರ್ಮಸೇನಾ: ಯಾವುದೇ ಬೌಲರ್ ನಿಮ್ಮ ಬಳಿಗೆ ಬರುವುದು ಮತ್ತು ಹಾಗೆ ನಡೆದುಕೊಳ್ಳುವುದನ್ನು ನೀವು ಇಷ್ಟಪಡುತ್ತೀರಾ? ಇಲ್ಲ, ನೀವು ಹಾಗೆ ಮಾಡಲು ಸಾಧ್ಯವಿಲ್ಲ. ಇಲ್ಲ, ರಾಹುಲ್, ನಾವು ಆ ದಾರಿಯಲ್ಲಿ ಹೋಗಬಾರದು.

ರಾಹುಲ್: ನಾವು ಏನು ಮಾಡಬೇಕೆಂದು ನೀವು ಬಯಸುತ್ತೀರಿ? ಬ್ಯಾಟಿಂಗ್ ಮಾಡಿ, ಬೌಲಿಂಗ್ ಮಾಡಿ ಮನೆಗೆ ಹೋಗಬೇಕೇ?

ಧರ್ಮಸೇನಾ: ಪಂದ್ಯದ ಕೊನೆಯಲ್ಲಿ ನಾವು ಚರ್ಚಿಸುತ್ತೇವೆ. ನೀವು ಹಾಗೆ ಮಾತನಾಡಲು ಸಾಧ್ಯವಿಲ್ಲ.

ಪಂದ್ಯಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ, ಯಶಸ್ವಿ ಜೈಸ್ವಾಲ್ ಅವರ ಅಜೇಯ 51 ರನ್‌ಗಳ ನೆರವಿನಿಂದ ಭಾರತವು ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್‌ನ ಎರಡನೇ ದಿನದಾಟದ ಅಂತ್ಯಕ್ಕೆ 2 ವಿಕೆಟ್ ನಷ್ಟಕ್ಕೆ 75 ರನ್ ಗಳಿಸಿದೆ. ಇಂಗ್ಲೆಂಡ್ ವಿರುದ್ಧ 52 ರನ್‌ಗಳ ಮುನ್ನಡೆಯಲ್ಲಿದೆ.

ಭಾರತ ತಂಡ ಆರಂಭಿಕ ಆಟಗಾರ ಕೆಎಲ್ ರಾಹುಲ್ (7) ಮತ್ತು ಸಾಯಿ ಸುದರ್ಶನ್ (11) ಅವರನ್ನು ಕಳೆದುಕೊಂಡಿತು. ಆದರೆ, ಜೈಸ್ವಾಲ್ ಉತ್ತಮ ಪ್ರದರ್ಶನ ನೀಡಿದರು.

ರಾಹುಲ್ ಅವರನ್ನು ಜೋಶ್ ಟಂಗ್ ಔಟ್ ಮಾಡಿದರೆ, ಸುದರ್ಶನ್ ಅವರನ್ನು ಗಸ್ ಅಟ್ಕಿನ್ಸನ್ ಔಟ್ ಮಾಡಿದರು. ದಿನದಾಟದ ಅಂತ್ಯಕ್ಕೆ ಜೈಸ್ವಾಲ್ ನೈಟ್ ವಾಚ್‌ಮನ್ ಆಕಾಶ್ ದೀಪ್ (4 ನಾಟ್ ಔಟ್) ಜೊತೆಗೆ ಬ್ಯಾಟಿಂಗ್ ಮಾಡುತ್ತಿದ್ದರು.

ಇದಕ್ಕೂ ಮೊದಲು, ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ 224 ರನ್‌ಗಳಿತ್ತು. ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 247 ರನ್‌ಗಳಿಸಿತು. ಪ್ರಸಿದ್ಧ್ ಕೃಷ್ಣ ಮತ್ತು ಮೊಹಮ್ಮದ್ ಸಿರಾಜ್ ತಲಾ ನಾಲ್ಕು ವಿಕೆಟ್‌ಗಳನ್ನು ಪಡೆಯುವ ಮೂಲಕ ಭಾರತಕ್ಕೆ ನೆರವಾದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT