ಮೊಹಮ್ಮದ್ ಸಿರಾಜ್ 
ಕ್ರಿಕೆಟ್

ಭಾರತದ ಗೆಲುವಿನ ನಿರೀಕ್ಷೆಗೆ ಪೆಟ್ಟು: ಬೌಂಡರಿ ಲೈನ್ ಬಳಿ Mohammed Siraj ಎಡವಟ್ಟು; Video!

19 ರನ್ ಗಳಿಸಿದ್ದಾಗ ಹ್ಯಾರಿ ಬ್ರೂಕ್‌ ನೀಡಿದ ಕ್ಯಾಚ್ ಅನ್ನು ಮೊಹಮ್ಮದ್ ಸಿರಾಜ್ ಕೈಚೆಲ್ಲಿದ್ದು ಇದು ಭಾರತ ತಂಡ ಗೆಲ್ಲುವ ಭರವಸೆಯನ್ನು ಕಸಿದುಕೊಂಡಿತು.

ಲಂಡನ್‌ನ ಕೆನ್ನಿಂಗ್ಟನ್ ಓವಲ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಟೆಸ್ಟ್ ಸರಣಿಯ 5ನೇ ಮತ್ತು ಕೊನೆಯ ಪಂದ್ಯ ರೋಚಕ ತಿರುವು ಪಡೆದುಕೊಂಡಿದೆ. ಇಂತಹ ಪರಿಸ್ಥಿತಿಯಲ್ಲಿ, ನಾಲ್ಕನೇ ದಿನವಾದ ಭಾನುವಾರ ಭಾರತದ ಆಟಗಾರ ಮೊಹಮ್ಮದ್ ಸಿರಾಜ್ (Mohammed Siraj) ಇಂಗ್ಲೆಂಡ್‌ನ ಅಪಾಯಕಾರಿ ಬ್ಯಾಟ್ಸ್‌ಮನ್ ಹ್ಯಾರಿ ಬ್ರೂಕ್‌ಗೆ ಜೀವದಾನ ನೀಡುವ ಮೂಲಕ ಭಾರತ ತಂಡಕ್ಕೆ ದುಬಾರಿಯಾದರು. 19 ರನ್ ಗಳಿಸಿದ್ದಾಗ ಹ್ಯಾರಿ ಬ್ರೂಕ್‌ ನೀಡಿದ ಕ್ಯಾಚ್ ಅನ್ನು ಮೊಹಮ್ಮದ್ ಸಿರಾಜ್ ಕೈಚೆಲ್ಲಿದ್ದು ಇದು ಭಾರತ ತಂಡ ಗೆಲ್ಲುವ ಭರವಸೆಯನ್ನು ಕಸಿದುಕೊಂಡಿತು.

ವಾಸ್ತವವಾಗಿ, ಭಾರತೀಯ ಬೌಲರ್ ಪ್ರಸಿದ್ಧ್ ಕೃಷ್ಣ 35ನೇ ಓವರ್ ಬೌಲಿಂಗ್ ಮಾಡಿದರು. ಈ ಓವರ್‌ನ ಮೊದಲ ಎಸೆತದಲ್ಲಿ, ಮೊಹಮ್ಮದ್ ಸಿರಾಜ್ ಹ್ಯಾರಿ ಬ್ರೂಕ್‌ಗೆ (19 ರನ್) ಜೀವದಾನ ನೀಡಿದರು. ಹ್ಯಾರಿ ಬ್ರೂಕ್ ಪುಲ್ ಶಾಟ್ ಆಡಿದರು.

ಚೆಂಡು ಡೀಪ್ ಫೈನಲ್ ಲೆಗ್‌ಗೆ ಹೋಯಿತು. ಬೌಂಡರಿ ಗೆರೆ ಬಳಿ ಮೊಹಮ್ಮದ್ ಸಿರಾಜ್ ಕ್ಯಾಚ್ ಪಡೆದರು. ಆದರೆ ಈ ಸಮಯದಲ್ಲಿ ಅವರು ಬೌಂಡರಿ ಲೈನ್‌ ಬಗ್ಗೆ ಗಮನ ಕೊಟ್ಟಿರಲಿಲ್ಲ. ಪರಿಣಾಮವಾಗಿ, ಅವರ ಕಾಲು ಬೌಂಡರಿ ಗೆರೆಗೆ ತಾಗಿತು. ನಂತರ ನಿಯಂತ್ರಣ ತಪ್ಪಿ ಬೌಂಡರಿ ಒಳಗೆ ಹೋದರು. ಹೀಗಾಗಿ ಹ್ಯಾರಿ ಬ್ರೂಕ್ ನಾಟ್ ಔಟ್ ಎಂದು ಘೋಷಿಸಲ್ಪಟ್ಟಿದ್ದು ಮಾತ್ರವಲ್ಲದೆ ಆರು ರನ್ ಸಹ ನೀಡಲಾಯಿತು. ನಂತರ ಸ್ಫೋಟಕ ಬ್ಯಾಟಿಂಗ್ ಮಾಡಿದ ಬ್ರೂಕ್ ಶತಕ ಸಹ ದಾಖಲಿಸಿದರು.

ಸದ್ಯ ಇಂಗ್ಲೆಂಡ್ 3 ವಿಕೆಟ್ ನಷ್ಟಕ್ಕೆ 267 ರನ್ ಪೇರಿಸಿದ್ದು ಗೆಲುವಿಗೆ ಇನ್ನು 107 ರನ್ ಬಾಕಿ ಇದೆ. ಇಂದು ನಾಲ್ಕನೇ ದಿನವಾಗಿರುವುದರಿಂದ ನಾಳೆಯೂ ಇಂಗ್ಲೆಂಡ್ ತಂಡಕ್ಕೆ ಬ್ಯಾಟಿಂಗ್ ಮಾಡಲು ಹೆಚ್ಚಿನ ಅವಕಾಶವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೋದಿ-ಅಮಿತ್ ಶಾರನ್ನೇ ಧೈರ್ಯವಾಗಿ ಎದುರಿಸಿ ಜೈಲಿಗೆ ಹೋಗಿ ಬಂದಿದ್ದೇನೆ; ನನ್ನನ್ನು ಹೆದರಿಸಲು ಬರಬೇಡಿ: ಡಿಕೆ ಶಿವಕುಮಾರ್

GOAT India Tour: ಹೈದರಾಬಾದಿನಲ್ಲಿ 'ಮೆಸ್ಸಿ' ಮೇನಿಯಾ; ಸಿಎಂ ರೇವಂತ್ ರೆಡ್ಡಿ ಜೊತೆಗೆ ಆಟವಾಡಿ ಪ್ರೇಕ್ಷಕರನ್ನು ರಂಜಿಸಿದ ಫುಟ್ಬಾಲ್ ದಂತಕಥೆ!

ರಾಕೆಟ್ ವೇಗದಲ್ಲಿ ಚಿನ್ನದ ಬೆಲೆ: ಹಳದಿ ಲೋಹದ ಸುಲಭ ಖರೀದಿಗಾಗಿ ಮಧ್ಯಮ ವರ್ಗದವರಿಗೆ ಇಲ್ಲಿದೆ ಟಿಪ್ಸ್!

ನೀವು ನಮ್ಮ ಪ್ರತಿನಿಧಿ ಹೊರತು ಯಜಮಾನನಲ್ಲ: ಡಿಕೆ ಶಿವಕುಮಾರ್ ಧಮ್ಕಿಗೆ ಮೋಹನ್‌ದಾಸ್ ಪೈ ಆಕ್ರೋಶ!

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ: ತಿರುವನಂತಪುರಂನಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವು; ಶಶಿ ತರೂರ್ ಹೊಗಳಿದ್ದು ಯಾರನ್ನ?

SCROLL FOR NEXT