ಕರುಣ್ ನಾಯರ್ 
ಕ್ರಿಕೆಟ್

'ನನಗೆ ನಿರಾಶೆಯಾಯಿತು...': ಇಂಗ್ಲೆಂಡ್ ಪ್ರವಾಸದ ಏರಿಳಿತಗಳ ಬಗ್ಗೆ ಮೌನ ಮುರಿದ ಕನ್ನಡಿಗ ಕರುಣ್ ನಾಯರ್!

ನಾಯರ್ ಅವರ ಗಮನ ಈಗ ಮಹಾರಾಜ ಟ್ರೋಫಿಯತ್ತ ಹರಿದಿದೆ. ಮೈಸೂರು ವಾರಿಯರ್ಸ್ ತಂಡವು ಪ್ರಶಸ್ತಿಯನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದೆ.

8 ವರ್ಷಗಳ ನಂತರ ಭಾರತ ತಂಡದಲ್ಲಿ ಅವಕಾಶ ಪಡೆದಿದ್ದ ಕನ್ನಡಿಗ ಕರುಣ್ ನಾಯರ್, ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾದರು. ಇಂಗ್ಲೆಂಡ್ ಪ್ರವಾಸದಲ್ಲಿನ ಅವರ ಪ್ರದರ್ಶನವು ಟೆಸ್ಟ್ ತಂಡಕ್ಕೆ ಮರಳಲು ಅವರು ತೋರಿಸಿದ ಹಸಿವನ್ನು ಪ್ರತಿಬಿಂಬಿಸಲಿಲ್ಲ. ನಾಯರ್ ಇಂಗ್ಲೆಂಡ್ ವಿರುದ್ಧದ ಐಧು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಕೇವಲ ಒಂದು ಅರ್ಧಶತಕ ಗಳಿಸಿದರು. ಅದು ಕೂಡ ಸರಣಿಯ ಕೊನೆಯ ಟೆಸ್ಟ್‌ನ ಮೊದಲ ಇನಿಂಗ್ಸ್‌ನಲ್ಲಿ, ಎರಡನೇ ಇನಿಂಗ್ಸ್‌ನಲ್ಲಿ ಮತ್ತೊಂದು ನೀರಸ ಪ್ರದರ್ಶನ ನೀಡಿದರು. ಸರಣಿ ಈಗ ಮುಗಿದಿದ್ದು, ಅವರ ಟೆಸ್ಟ್ ಭವಿಷ್ಯದ ಮೇಲೆ ಅನುಮಾನಗಳು ವ್ಯಕ್ತವಾಗಿವೆ. ಓವಲ್‌ನಲ್ಲಿ ಗಳಿಸಿದ ಅರ್ಧಶತಕವನ್ನು ಶತಕವನ್ನಾಗಿ ಪರಿವರ್ತಿಸಬೇಕಾಗಿತ್ತು ಎಂದು ಅನುಭವಿ ಬ್ಯಾಟ್ಸ್‌ಮನ್ ಸ್ವತಃ ಒಪ್ಪಿಕೊಂಡಿದ್ದು, ಹಾಗೆ ಮಾಡದಿದ್ದಕ್ಕೆ ನಿರಾಶೆ ವ್ಯಕ್ತಪಡಿಸಿದರು.

'ಓವಲ್‌ನಲ್ಲಿ ಅರ್ಧಶತಕವನ್ನು ಶತಕವನ್ನಾಗಿ ಪರಿವರ್ತಿಸಲು ಸಾಧ್ಯವಾಗದಿದ್ದಕ್ಕೆ ನಾನು ನಿರಾಶೆಗೊಂಡಿದ್ದೇನೆ. ಆದರೆ ಹಿಂತಿರುಗಿ ನೋಡಿದಾಗ, ಆ ಮೊದಲ ದಿನದಂದು ತಂಡವು ಕಠಿಣ ಸ್ಥಿತಿಯಲ್ಲಿದ್ದಾಗ ನಾನು ಉತ್ತಮ ಪ್ರದರ್ಶನ ನೀಡುವುದು ಬಹಳ ಮುಖ್ಯವಾಗಿತ್ತು. ಈ ಹಿಂದೆ ನಾನು ಅಲ್ಲಿ ಉತ್ತಮ ಪ್ರದರ್ಶನ ನೀಡಿದ್ದೆ; ಸರ್ರೆ ವಿರುದ್ಧ ನಾರ್ತಾಂಟ್ಸ್ ಪರ ನಾನು 150 ರನ್ ಗಳಿಸಿದ್ದೆ. ಅದನ್ನೇ ನಾನು ಈಗಲೂ ಮಾಡಲು ಆಶಿಸುತ್ತಿದ್ದೆ, ಆದರೆ ನನಗೆ ಸಾಧ್ಯವಾಗಲಿಲ್ಲ' ಎಂದು ಅವರು ESPNCricinfo ಜೊತೆಗಿನ ಚಾಟ್‌ನಲ್ಲಿ ಹೇಳಿದರು.

5 ಪಂದ್ಯಗಳ ಸರಣಿಯಲ್ಲಿ ಎರಡೂ ತಂಡಗಳ ನಡುವೆ ಸರಣಿ 2-2 ರಲ್ಲಿ ಮುಕ್ತಾಯಗೊಂಡಿತು.

'ಆ ಅರ್ಥದಲ್ಲಿ ಇದು ಏರಿಳಿತದ ಸರಣಿಯಾಗಿತ್ತು ಮತ್ತು ನಾನು ಬಹಳಷ್ಟು ಯೋಚಿಸಿದೆ. ಆದರೆ, ಏನಾಯಿತು ಎಂಬುದನ್ನು ಬಿಟ್ಟು ಮುಂದಿನ ಕೆಲವು ತಿಂಗಳುಗಳಲ್ಲಿ ನಾನು ಏನು ಮಾಡಬೇಕೆಂದು ನೋಡುವುದು ಸಹ ಮುಖ್ಯವಾಗಿದೆ. ಈಗ ನನ್ನ ಸಂಪೂರ್ಣ ಗಮನ ಆಡುವುದರ ಮೇಲೆ ಇಟ್ಟುಕೊಳ್ಳಬೇಕು ಮತ್ತು ಯಾವ ಕ್ರಮಾಂಕ ಎಂಬುದನ್ನು ಲೆಕ್ಕಿಸದೆ, ನಾನು ಮುಂದುವರಿಯುತ್ತೇನೆ ಮತ್ತು ದೊಡ್ಡ ಸ್ಕೋರ್‌ಗಳನ್ನು ಗಳಿಸುತ್ತೇನೆ ಎಂದು ಖಚಿತಪಡಿಸಿಕೊಳ್ಳುವತ್ತ ಗಮನ ಹರಿಸುತ್ತೇನೆ' ಎಂದು ಅವರು ಹೇಳಿದರು.

ನಾಯರ್ ಅವರ ಗಮನ ಈಗ ಮಹಾರಾಜ ಟ್ರೋಫಿಯತ್ತ ಹರಿದಿದೆ. ಮೈಸೂರು ವಾರಿಯರ್ಸ್ ತಂಡವು ಪ್ರಶಸ್ತಿಯನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

SCROLL FOR NEXT