ಆಟಗಾರರ ನಡುವೆ ಜಗಳ 
ಕ್ರಿಕೆಟ್

Maharaja T20: ಮೈಸೂರು vs ಗುಲ್ಬರ್ಗಾ ಪಂದ್ಯ; ಮೈದಾನದಲ್ಲೇ ಆಟಗಾರರ ನಡುವೆ ಜಗಳ, Video!

ಲವ್ನಿತ್ ಸಿಸೋಡಿಯಾ ಇನ್ನಿಂಗ್ಸ್​ನ ಮೊದಲ ಓವರ್​ನಲ್ಲಿಯೇ ಮೈಸೂರು ತಂಡದ ಅನುಭವಿ ಸ್ಪಿನ್ನರ್ ಕೃಷ್ಣಪ್ಪ ಗೌತಮ್ ಅವರ ಓವರ್​ನಲ್ಲಿ ಸತತ ನಾಲ್ಕು ಸಿಕ್ಸರ್‌ಗಳನ್ನು ಬಾರಿಸಿದರು.

ಮಹಾರಾಜ T20 ಟ್ರೋಫಿಯಲ್ಲಿ ಗುಲ್ಬರ್ಗಾ ಮಿಸ್ಟಿಕ್ಸ್ ಹಾಗೂ ಮೈಸೂರು ವಾರಿಯರ್ಸ್​ ತಂಡಗಳು ಇಂದು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮೈಸೂರು ತಂಡ 20 ಓವರ್​ಗಳಲ್ಲಿ ಬರೋಬ್ಬರಿ 210 ರನ್ ಬಾರಿಸಿದ್ದು ಗುಲ್ಬರ್ಗಾಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದೆ. ಈ ಗುರಿ ಬೆನ್ನಟ್ಟಿದ ಗುಲ್ಬರ್ಗಾ ತಂಡದ ಪರ ಆರಂಭಿಕನಾಗಿ ಕಣಕ್ಕಿಳಿದಿದ್ದ ಲವ್ನಿತ್ ಸಿಸೋಡಿಯಾ ಇನ್ನಿಂಗ್ಸ್​ನ ಮೊದಲ ಓವರ್​ನಲ್ಲಿಯೇ ಮೈಸೂರು ತಂಡದ ಅನುಭವಿ ಸ್ಪಿನ್ನರ್ ಕೃಷ್ಣಪ್ಪ ಗೌತಮ್ ಅವರ ಓವರ್​ನಲ್ಲಿ ಸತತ ನಾಲ್ಕು ಸಿಕ್ಸರ್‌ಗಳನ್ನು ಬಾರಿಸಿದರು.

4ನೇ ಓವರ್​ನಲ್ಲಿ ಗೌತಮ್ ಮಿಶ್ರಾ ಬೌಲಿಂಗ್ ನಲ್ಲಿ ಮನೀಶ್ ಪಾಂಡ್ಯಗೆ ಕ್ಯಾಚ್ ನೀಡಿ ಲವ್ನಿತ್ ಔಟಾದರು. ಇನ್ನು ಸಂಭ್ರಮಾಚರಣೆಯಲ್ಲಿ ಗೌತಮ್ ಮಿಶ್ರಾ ಲವ್ನಿತ್ ಹತ್ತಿರ ಬಂದು ಏನೇ ಹೇಳಿದರು. ಇದರಿಂದ ಕೆರಳಿದ ಲವ್ನಿತ್ ಕೋಪದಲ್ಲಿ ಗೌತಮ್ ಕಡೆ ಬ್ಯಾಟ್ ತೋರಿಸಿದ್ದು ಆಟಗಾರರ ನಡುವೆ ಜಗಳ ಕೂಡ ನಡೆಯಿತು.

ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೈಸೂರು ಮತ್ತು ಗುಲ್ಬರ್ಗಾ ಪಂದ್ಯದಲ್ಲಿ ಕೇವಲ 13 ಎಸೆತಗಳಲ್ಲಿ 5 ಸಿಕ್ಸರ್ ಹಾಗೂ 1 ಬೌಂಡರಿ ಸಹಿತ 37 ರನ್ ಬಾರಿಸಿದ್ದ ಲವ್ನಿತ್ ಎದುರಾಳಿ ತಂಡಕ್ಕೆ ಸಿಂಹಸ್ವಪ್ನರಾಗಿದ್ದರು. ಆದರೆ ಲವ್ನಿತ್ ಅವರನ್ನು ಔಟ್ ಮಾಡುವ ಮೂಲಕ ಗೌತಮ್ ಮೈಸೂರು ತಂಡಕ್ಕೆ ಮೊದಲ ಬ್ರೇಕ್ ಥ್ರೂ ತಂದುಕೊಟ್ಟರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT