ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ 
ಕ್ರಿಕೆಟ್

RCB ಮಾರಾಟದ ವದಂತಿ: 'ಅವರು ಮೂರ್ಖರಾಗುತ್ತಿದ್ದರು...'; ಕಾಲ್ತುಳಿತ ಸಂಭವಿಸಿದ್ದು ದುರದೃಷ್ಟಕರ- ಲಲಿತ್ ಮೋದಿ

18 ವರ್ಷಗಳ ಭಳಿಕ ಐಪಿಎಲ್ ಟ್ರೋಫಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವವನ್ನು ವೀಕ್ಷಿಸಲು ಸುಮಾರು 3 ಲಕ್ಷ ಜನರು ಸೇರಿದ್ದರು. ಈ ವೇಳೆ ಉಂಟಾದ ನೂಕುನುಗ್ಗಲಿನಿಂದ ಕಾಲ್ತುಳಿತ ಸಂಭವಿಸಿತ್ತು.

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ ಮಾಜಿ ಆಯುಕ್ತ ಲಲಿತ್ ಮೋದಿ, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮಾರಾಟದ ವದಂತಿಗಳನ್ನು ತಳ್ಳಿಹಾಕಿದ್ದಾರೆ. ಬಿಯಾಂಡ್ 23 ಪಾಡ್‌ಕ್ಯಾಸ್ಟ್‌ನಲ್ಲಿ ಆಸ್ಟ್ರೇಲಿಯಾದ ಮಾಜಿ ನಾಯಕ ಮೈಕೆಲ್ ಕ್ಲಾರ್ಕ್ ಅವರೊಂದಿಗೆ ಮಾತನಾಡಿದ 61 ವರ್ಷದ ಲಲಿತ್, ಆರ್‌ಸಿಬಿ ಸದ್ಯ ಎರಡು ಬಿಲಿಯನ್ ಡಾಲರ್ ಮೌಲ್ಯದ್ದಾಗಿದೆ ಮತ್ತು ಮುಂಬರುವ ವರ್ಷಗಳಲ್ಲಿ ಅದರ ಮೌಲ್ಯ ಮತ್ತಷಅಟು ಬೆಳೆಯುತ್ತದೆ ಎಂದು ಸೂಚಿಸಿದರು. ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಬಗ್ಗೆ ಮಾತನಾಡಿದ ಅವರು, ಇದು ದುರದೃಷ್ಟಕರ ಘಟನೆ ಎಂದರು.

'ನಾವು (ಐಪಿಎಲ್) ಕೇವಲ 18 ವರ್ಷ ವಯಸ್ಸಿನವರು. ನಾವು ಅಭಿಮಾನಿಗಳನ್ನು ಅನುಸರಿಸಲು ಪ್ರಾರಂಭಿಸಿದ್ದೇವೆ. ನಾವು ಇದೀಗ ಉನ್ಮಾದವನ್ನು ಪ್ರಾರಂಭಿಸಿದ್ದೇವೆ. ಆರ್‌ಸಿಬಿ ಕಪ್ ಗೆದ್ದ ನಂತರ ಕರ್ನಾಟಕದಲ್ಲಿ ಕಾಲ್ತುಳಿತ ಸಂಭವಿಸಿದ್ದು ದುರದೃಷ್ಟಕರ. ಆದರೆ ದೇಶಾದ್ಯಂತ, ಪ್ರಪಂಚದಾದ್ಯಂತ ಆ ಉತ್ಸಾಹ ಬೆಳೆಯುವುದನ್ನು ನೀವು ನೋಡುತ್ತೀರಿ' ಎಂದು ಲಲಿತ್ ಮೋದಿ ಹೇಳಿದರು.

'ಆರ್‌ಸಿಬಿಯನ್ನು ಮಾರಾಟ ಮಾಡಲು ಬಯಸಿದರೆ, ಅದನ್ನು 2 ಬಿಲಿಯನ್ ಡಾಲರ್‌ಗಿಂತ ಕಡಿಮೆ ಬೆಲೆಗೆ ಮಾರಾಟ ಮಾಡುವುದು ಮೂರ್ಖತನ. ಮುಂದಿನ ವರ್ಷ 2.5 ಬಿಲಿಯನ್ ಮತ್ತು ಎರಡು ವರ್ಷಗಳ ನಂತರ 3 ಬಿಲಿಯನ್ ಮತ್ತು ನಾಲ್ಕು ವರ್ಷಗಳ ನಂತರ 4 ಬಿಲಿಯನ್ ಡಾಲರ್. ಹೀಗೆ ಆರ್‌ಸಿಬಿ ಮೌಲ್ಯ ಹೆಚ್ಚುತ್ತಲೇ ಹೋಗುತ್ತದೆ. ಬೇಕಿದ್ದರೆ ನಾನು ಅದನ್ನು ಬರೆದುಕೊಡುತ್ತೇನೆ. ಇದು ವರ್ಷಕ್ಕೆ ಅರ್ಧ ಬಿಲಿಯನ್ ಡಾಲರ್‌ಗಳಷ್ಟು ಹೆಚ್ಚಾಗುತ್ತದೆ' ಎಂದು ಅವರು ಹೇಳಿದರು.

ಜೂನ್ 4 ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಸಾವಿಗೀಡಾದರು ಮತ್ತು 50ಕ್ಕೂ ಹೆಚ್ಚು ಜನರು ಗಾಯಗೊಂಡರು. ಬರೋಬ್ಬರಿ 18 ವರ್ಷಗಳ ಭಳಿಕ ಐಪಿಎಲ್ ಟ್ರೋಫಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವವನ್ನು ವೀಕ್ಷಿಸಲು ಸುಮಾರು 3 ಲಕ್ಷ ಜನರು ಸೇರಿದ್ದರು. ಈ ವೇಳೆ ಉಂಟಾದ ನೂಕುನುಗ್ಗಲಿನಿಂದ ಕಾಲ್ತುಳಿತ ಸಂಭವಿಸಿತ್ತು.

ಕೇಂದ್ರ ಆಡಳಿತ ನ್ಯಾಯಮಂಡಳಿಯ (ಸಿಎಟಿ) ಇಬ್ಬರು ಸದಸ್ಯರ ಪೀಠವು, ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತಕ್ಕೆ ಜವಾಬ್ದಾರಿ ಎಂದು ಅಭಿಪ್ರಾಯಪಟ್ಟಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯಸಭೆ ಚುನಾವಣೆಗೆ ಇಂದು ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ?: NDAಯಲ್ಲಿ ಮಹತ್ವದ ಬೆಳವಣಿಗೆ

US–Iran conflict| ಇರಾನ್ ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ; 6ನೇ ದಿನಕ್ಕೆ ಕಾಲಿಟ್ಟ ಯುದ್ಧ –ಡೊನಾಲ್ಡ್ ಟ್ರಂಪ್ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಸೆನೆಟ್ ವಿಫಲ

'ನೀವಿಬ್ರೇ ಅಲ್ವಾ ಹೇಳಿದ್ದು..': ಲೈವ್ ನಲ್ಲೇ ನಾಸರ್ ಹುಸೇನ್-ಅಥೆರ್ಟನ್ ಗೆ ತಿವಿದ Dinesh Karthik, ಮುಖ ಮುಚ್ಚಿಕೊಂಡ ಮಾಜಿ ದಂತಕಥೆಗಳು!

'ಮಧ್ಯಪ್ರಾಚ್ಯ ಸಂಘರ್ಷ: ಇರಾನ್ ಯುದ್ಧಕ್ಕೆ ನಾನು 10ಕ್ಕೆ 15 ಅಂಕ ಕೊಡುತ್ತೇನೆ, ಅಮೆರಿಕಾ ಈಗ ಅತ್ಯಂತ ಬಲಿಷ್ಠ ಸ್ಥಿತಿಯಲ್ಲಿದೆ': Donald Trump

ರಾಜ್ಯ ಬಜೆಟ್ 2026-27: ಮದ್ಯ ತೆರಿಗೆಯಿಂದ ರಾಜ್ಯಕ್ಕೆ ಭಾರೀ ಆದಾಯ, ಆದಾಯ ಗುರಿ 45,000 ಕೋಟಿ ರೂ.ಗೆ ಹೆಚ್ಚಿಸಲು ಸರ್ಕಾರ ಚಿಂತನೆ..!

SCROLL FOR NEXT