ಸಾಂದರ್ಭಿಕ ಚಿತ್ರ 
ಕ್ರಿಕೆಟ್

Asia Cup 2025: ಪಾಕಿಸ್ತಾನ ಜೊತೆಗೆ ಭಾರತ ಆಡಬೇಕೇ? Mood ಸಮೀಕ್ಷೆಯಲ್ಲಿ ಜನರ ಅಭಿಪ್ರಾಯ ಏನು ಗೊತ್ತಾ!

1 ಜುಲೈ ಮತ್ತು 14 ಆಗಸ್ಟ್ 2025 ರ ನಡುವೆ ಇಂಡಿಯಾ ಟುಡೇ-ಸಿವೋಟರ್ ಮೂಡ್ ಆಫ್ ದಿ ನೇಷನ್ ಸಮೀಕ್ಷೆಯಲ್ಲಿ 54,788 ಮಂದಿ ಭಾಗವಹಿಸಿದ್ದಾರೆ.

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯ ನಂತರ ಗಡಿಯಾಚೆಗಿನ ಉದ್ವಿಗ್ನತೆ ಹೆಚ್ಚುತ್ತಿರುವಂತೆಯೇ ಭಾರತ-ಪಾಕಿಸ್ತಾನ ಕ್ರೀಡಾ ಸಂಬಂಧಕ್ಕೆ ಸಂಬಂಧಿಸಿದಂತೆ ರಾಷ್ಟ್ರದ ಜನರ ಅಭಿಪ್ರಾಯ ಕುರಿತು ಮೂಡ್ ಆಫ್ ದಿ ನೇಷನ್ ಸಮೀಕ್ಷೆ ನಡೆಸಿದೆ.

ಬರುವ ಏಷ್ಯಾಕಪ್‌ನಲ್ಲಿ ಭಾರತ ತನ್ನ ತಮ್ಮ ಸಾಂಪ್ರದಾಯಿಕ ಎದುರಾಳಿಗಳನ್ನು ಎದುರಿಸಲು ಸಜ್ಜಾಗುತ್ತಿರುವಾಗಲೂ, ಇಂಡಿಯಾ ಟುಡೆ-ಸಿವೋಟರ್ ಮೂಡ್ ಆಫ್ ದಿ ನೇಷನ್ (MOTN) ಸಮೀಕ್ಷೆಯಲ್ಲಿ ಪ್ರತಿಕ್ರಿಯಿಸಿದ ಶೇ.68.6 ರಷ್ಟು ಜನರು, ನೆರೆ ರಾಷ್ಟ್ರದೊಂದಿಗೆ ಕ್ರೀಡಾ ಸಂಬಂಧ ಹೊಂದಬಾರದು ಎಂದು ಹೇಳಿದ್ದಾರೆ.

ಸಮೀಕ್ಷೆಯಲ್ಲಿ ಪ್ರತಿಕ್ರಿಯಿಸಿದವರಲ್ಲಿ ಶೇ. 25 ರಷ್ಟು ಜನರು ಪಾಕಿಸ್ತಾನದೊಂದಿಗೆ ಕ್ರಿಕೆಟ್ ಪಂದ್ಯಗಳು ಸೇರಿದಂತೆ ದ್ವಿಪಕ್ಷೀಯ ಕ್ರೀಡಾ ಸಂಬಂಧಗಳನ್ನು ಮುಂದುವರೆಸುವ ಪರವಾಗಿದ್ದಾರೆ.ಶೇ. 7 ರಷ್ಟು ಮಂದಿ ಯಾವುದೇ ಸ್ಪಷ್ಟ ಅಭಿಪ್ರಾಯ ನೀಡಲಿಲ್ಲ. ಉಳಿದ ಶೇ. 68. 6 ರಷ್ಟು ಜನರು ಯಾವುದೇ ಕ್ರೀಡಾ ಸಂಬಂಧ ಹೊಂದಬಾರದು ಎಂದು ಹೇಳಿದರು.

1 ಜುಲೈ ಮತ್ತು 14 ಆಗಸ್ಟ್ 2025 ರ ನಡುವೆ ಇಂಡಿಯಾ ಟುಡೇ-ಸಿವೋಟರ್ ಮೂಡ್ ಆಫ್ ದಿ ನೇಷನ್ ಸಮೀಕ್ಷೆಯಲ್ಲಿ 54,788 ಮಂದಿ ಭಾಗವಹಿಸಿದ್ದಾರೆ. ಅಲ್ಲದೇ CVoter ನಿಂದ 1,52,038 ಸಂದರ್ಶನಗಳನ್ನು ವಿಶ್ಲೇಷಿಸಲಾಗಿದೆ. ಒಟ್ಟಾರೆಯಾಗಿ, 2,06,826 ವ್ಯಕ್ತಿಗಳ ಅಭಿಪ್ರಾಯಗಳು ಈ ವರದಿಗೆ ಆಧಾರವಾಗಿದೆ.

ಮಾಜಿ ಕ್ರಿಕೆಟಿಗರು ಸೇರಿದಂತೆ ಹಲವು ಮಂದಿ ಪಾಕಿಸ್ತಾನದ ವಿರುದ್ಧದ ಏಷ್ಯಾ ಕಪ್ ಪಂದ್ಯ ಬಹಿಷ್ಕರಿಸುವಂತೆ ಒತ್ತಾಯಿಸುತ್ತಿದ್ದಾರೆ. ಏಷ್ಯಾ ಕಪ್‌ನಿಂದ ಭಾರತ ಹಿಂದೆ ಸರಿಯಬಹುದೆಂಬ ಊಹಾಪೋಹಗಳಿದ್ದರೂ, ತಂಡವು ತಟಸ್ಥ ಸ್ಥಳವಾದ ಯುಎಇಯಲ್ಲಿ ಭಾಗವಹಿಸಲು ನಿರ್ಧರಿಸಿದೆ.

ಭಾರತ ಮತ್ತು ಪಾಕಿಸ್ತಾನವು ಸೆಪ್ಟೆಂಬರ್ 14 ರಂದು ಗುಂಪು ಹಂತದಲ್ಲಿ ಮುಖಾಮುಖಿಯಾಗಲಿದ್ದು, ಎರಡೂ ತಂಡಗಳು ಫೈನಲ್ ತಲುಪಿದರೆ ಟೂರ್ನಿಯಲ್ಲಿ ಮೂರು ಬಾರಿ ಮುಖಾಮುಖಿಯಾಗುವ ಸಾಧ್ಯತೆಯಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಒಂದೆ ಕಂಪನಿಯ ವಾಚ್ ಕಟ್ಟಿ ಒಗ್ಗಟ್ಟು ಪ್ರದರ್ಶಿಸಿದ್ರಾ CM, DCM?; Cartier ವಾಚಿನ ಬೆಲೆ ಎಷ್ಟು ಗೊತ್ತಾ?

PMO ಕಚೇರಿಗೆ 'ಸೇವಾ ತೀರ್ಥ': ದೇಶದಲ್ಲಿರುವ ಎಲ್ಲಾ ರಾಜಭವನಗಳಿಗೆ 'ಲೋಕಭವನ' ಎಂದು ಮರುನಾಮಕರಣ!

ಬೆಂಗಳೂರು ವಿಮಾನ ನಿಲ್ದಾಣ, ಮಾಲ್‌ಗಳಿಗೆ ಬಾಂಬ್ ಬೆದರಿಕೆ; ತನಿಖೆ ಆರಂಭಿಸಿದ ಪೊಲೀಸರು

ಗೌತಮ್ ಗಂಭೀರ್ ಗೆ ಮೂಗುದಾರ..? ಮೆಂಟರ್ ಆಗಿ MS Dhoni ಎಂಟ್ರಿ.. 2026 ಟಿ20 ವಿಶ್ವಕಪ್ ಗೆ ಸಿದ್ಧತೆ!

ಯುಪಿಯಲ್ಲಿ ಮತ್ತೊಬ್ಬ BLO ಸಾವು; SIR ಕೆಲಸದ ಒತ್ತಡಕ್ಕೆ ಒಂದೇ ವಾರದಲ್ಲಿ ಐವರು ಬಲಿ

SCROLL FOR NEXT