ವಿರಾಟ್ ಕೊಹ್ಲಿ  
ಕ್ರಿಕೆಟ್

Virat Kohli: 15 ವರ್ಷಗಳ ನಂತರ ವಿಜಯ್ ಹಜಾರೆ ಟೂರ್ನಿಗೆ ವಿರಾಟ್ ಕೊಹ್ಲಿ ವಾಪಸ್

ಈಗ ಭಾರತ ತಂಡದ ಏಕದಿನ ಪಂದ್ಯಗಳಲ್ಲಿ ಆಡುತ್ತಿರುವ ವಿರಾಟ್ ಕೊಹ್ಲಿ, ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ನಿರತರಾಗಿದ್ದಾರೆ.

ನವದೆಹಲಿ: ಡಿಸೆಂಬರ್ 24 ರಿಂದ ಆರಂಭವಾಗುವ ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಆಡಲು ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಆಟಗಾರ ವಿರಾಟ್‌ ಕೊಹ್ಲಿ ಸಿದ್ಧವಿರುವುದಾಗಿ ತಿಳಿಸಿದ್ದಾರೆ. ಅವರ ಲಭ್ಯತೆಯನ್ನು ಡಿಡಿಸಿಎ ಅಧ್ಯಕ್ಷ ರೋಹನ್ ಜೇಟ್ಲಿ ದೃಢಪಡಿಸಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿ ದೇಶೀಯ ಅಂಗಳಕ್ಕೆ 15 ವರ್ಷಗಳ ನಂತರ ಮರಳುತ್ತಿದ್ದಾರೆ.

ಈಗ ಭಾರತ ತಂಡದ ಏಕದಿನ ಪಂದ್ಯಗಳಲ್ಲಿ ಮಾತ್ರ ಆಡುತ್ತಿರುವ ವಿರಾಟ್ ಕೊಹ್ಲಿ, ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ನಿರತರಾಗಿದ್ದಾರೆ.

ಸೌತ್ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ ವಿರಾಟ್ ಕೊಹ್ಲಿ ಆಕರ್ಷಕ ಶತಕ ಬಾರಿಸಿದ್ದರು. ಇದೀಗ ರಾಯ್​ಪುರದಲ್ಲಿ ನಡೆಯಲಿರುವ ದ್ವಿತೀಯ ಪಂದ್ಯಕ್ಕಾಗಿ ಸಜ್ಜಾಗಿದ್ದಾರೆ. ಇನ್ನು ಈ ಸರಣಿಯ ಬಳಿಕ ದೇಶೀಯ ಟೂರ್ನಿ ಆಡಲು ವಿರಾಟ್ ಕೊಹ್ಲಿ ನಿರ್ಧರಿಸಿದ್ದಾರೆ.

2010 ರ ಫೆಬ್ರವರಿಯಲ್ಲಿ ಸರ್ವಿಸಸ್ ವಿರುದ್ಧ ಆಡಿದ ನಂತರ ವಿರಾಟ್ ಕೊಹ್ಲಿ 2025ರಲ್ಲಿ ಹಜಾರೆ ಟ್ರೋಫಿಗೆ ಮರಳುತ್ತಿದ್ದಾರೆ.

37 ವರ್ಷದ ಕೊಹ್ಲಿ ರಾಂಚಿಯಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧ ಸರಣಿಯ ಆರಂಭಿಕ ಪಂದ್ಯದಲ್ಲಿ ತಮ್ಮ 52 ನೇ ಶತಕವನ್ನು ಬಾರಿಸಿದರು, ಈ ವರ್ಷದ ಆರಂಭದಲ್ಲಿ ಟೆಸ್ಟ್ ಪಂದ್ಯಗಳಿಂದ ನಿವೃತ್ತಿ ಘೋಷಿಸಿ ಏಕಪಂದ್ಯಗಳತ್ತ ಮಾತ್ರ ಗಮನ ಹರಿಸಿದ್ದರು.

2024 ರಲ್ಲಿ ಬಾರ್ಬಡೋಸ್‌ನಲ್ಲಿ ನಡೆದ ವಿಶ್ವಕಪ್‌ನಲ್ಲಿ ಭಾರತ ಗೆದ್ದ ನಂತರ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಿಂದ ಸಹ ನಿವೃತ್ತರಾದರು.

ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡಲು ವಿರಾಟ್ ಕೊಹ್ಲಿ ತಮ್ಮ ಲಭ್ಯತೆಯನ್ನು ದೃಢಪಡಿಸಿದ್ದಾರೆ. 15 ವರ್ಷಗಳ ಬಳಿಕ ಮತ್ತೊಮ್ಮೆ ದೆಹಲಿ ಪರ ಏಕದಿನ ಪಂದ್ಯವನ್ನಾಡಲು ನಿರ್ಧರಿಸಿದ್ದಾರೆ. ಅದರಂತೆ ಡಿಸೆಂಬರ್ 24 ರಿಂದ ಶುರುವಾಗಲಿರುವ ವಿಜಯ ಹಝಾರೆ ಏಕದಿನ ಟೂರ್ನಿಯಲ್ಲಿ ಕಿಂಗ್ ಕೊಹ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಮೂಲಕ ನ್ಯೂಝಿಲೆಂಡ್ ವಿರುದ್ಧದ ಸರಣಿಗಾಗಿ ಕೊಹ್ಲಿ ಸಿದ್ಧತೆ ನಡೆಸಲಿದ್ದಾರೆ. ಅವರು ಎಷ್ಟು ಪಂದ್ಯಗಳಲ್ಲಿ ಭಾಗವಹಿಸುತ್ತಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ವಿರಾಟ್ ಕೊಹ್ಲಿ ಇರುವಾಗ ಅಭಿಮಾನಿಗಳು ಕ್ರೀಡಾಂಗಣದಲ್ಲಿ ಪಂದ್ಯವನ್ನು ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ನಿರೀಕ್ಷೆಯಿದೆ. ಈ ವರ್ಷದ ಆರಂಭದಲ್ಲಿ, ಕೊಹ್ಲಿ 12 ವರ್ಷಗಳ ನಂತರ ತಮ್ಮ ಮೊದಲ ಪ್ರಥಮ ದರ್ಜೆ ಪಂದ್ಯವನ್ನು ಆಡಿದಾಗ ರಣಜಿ ಟ್ರೋಫಿ ಪಂದ್ಯವನ್ನು ಅದ್ಭುತವಾಗಿ ಪ್ರದರ್ಶಿಸಿದರು. ಕೊಹ್ಲಿ ಆಟವನ್ನು ವೀಕ್ಷಿಸಲು 12,000 ಕ್ಕೂ ಹೆಚ್ಚು ಜನರು ಬಂದಿದ್ದರು.

ಬಿಸಿಸಿಐ ಗುತ್ತಿಗೆ ಪಡೆದ ಕ್ರಿಕೆಟಿಗರು ಗಾಯಗೊಂಡಿದ್ದರೆ ಅಥವಾ ರಾಷ್ಟ್ರೀಯ ಕರ್ತವ್ಯದಲ್ಲಿಲ್ಲದಿದ್ದರೆ ದೇಶೀಯ ಕ್ರಿಕೆಟ್ ಆಡುವುದನ್ನು ಕಡ್ಡಾಯಗೊಳಿಸಿದೆ. ಇಂಗ್ಲೆಂಡ್ ಪ್ರವಾಸಕ್ಕೆ ಮುಂಚಿತವಾಗಿ ಟೆಸ್ಟ್ ಪಂದ್ಯಗಳಿಂದ ನಿವೃತ್ತರಾದ ರೋಹಿತ್ ಶರ್ಮಾ ಕೂಡ ವಿಜಯ್ ಹಜಾರೆ ಟ್ರೋಫಿಯಲ್ಲಿ ಮುಂಬೈ ಪರ ಆಡುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!