ಸುನೀಲ್ ಗವಾಸ್ಕರ್ online desk
ಕ್ರಿಕೆಟ್

ಭಾರತದ ಟಿ20 ವಿಶ್ವಕಪ್ ತಂಡದ ಘೋಷಣೆ: ಅಕ್ಷರ್ ಪಟೇಲ್ ಆಯ್ಕೆ ಬಗ್ಗೆ ಗವಾಸ್ಕರ್ ಹೇಳಿದ್ದೇನು?

ಆಲ್ ರೌಂಡರ್ ಗಳಿಗೆ ಹೆಚ್ಚು ಒತ್ತು ನೀಡುವ ನಿಟ್ಟಿನಲ್ಲಿ "ಅಕ್ಷರ್ ಪಟೇಲ್ ಅವರನ್ನ್ನು ಉಪನಾಯಕನನ್ನಾಗಿ ಮಾಡಲಾಗಿದೆ.

ಮುಂಬೈ: ಟಿ20 ವಿಶ್ವಕಪ್ ತಂಡದ ಘೋಷಣೆಯಾಗಿದ್ದು, ಈ ಬೆಳವಣಿಗೆ ಬಗ್ಗೆ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಮುಖವಾಗಿ ಅಕ್ಷರ್ ಪಟೇಲ್ ಅವರನ್ನು ಉಪನಾಯಕನನ್ನಾಗಿ ಆಯ್ಕೆ ಮಾಡಿರುವ ಬಗ್ಗೆ ಗವಾಸ್ಕರ್ ಪ್ರತಿಕ್ರಿಯೆ ನೀಡಿದ್ದು, ಆಲ್ ರೌಂಡರ್ ಗಳಿಗೆ ಹೆಚ್ಚು ಒತ್ತು ನೀಡುವ ನಿಟ್ಟಿನಲ್ಲಿ "ಅಕ್ಷರ್ ಪಟೇಲ್ ಅವರನ್ನ್ನು ಉಪನಾಯಕನನ್ನಾಗಿ ಮಾಡಲಾಗಿದೆ. ಅವರು ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗದಲ್ಲಿ ಎಕ್ಸ್-ಫ್ಯಾಕ್ಟರ್ ಆಗಿದ್ದಾರೆ. ಅವರ ಬ್ಯಾಟಿಂಗ್ ನಿಜವಾಗಿಯೂ ಆ ಮಟ್ಟದಲ್ಲಿದೆ. ಅವರು ಎಲ್ಲೆಡೆ ಚೆಂಡನ್ನು ಅಪ್ಪಳಿಸಬಹುದು. ಅವರು ಬೌಲಿಂಗ್ ಮಾಡುತ್ತಾರೆ, ತಮ್ಮ ವೇಗವನ್ನು ಬದಲಾಯಿಸುತ್ತಾರೆ, ಕ್ರೀಸ್‌ನಾದ್ಯಂತ ಬೌಲಿಂಗ್ ಮಾಡುತ್ತಾರೆ.

ವೇಗದ ವ್ಯತ್ಯಾಸವನ್ನು ತರುತ್ತಾರೆ, ಹಿಡಿತ ಮತ್ತು ತಿರುವು ಪಡೆಯುತ್ತಾರೆ. ಅವರು ಅತ್ಯುತ್ತಮ ಫೀಲ್ಡರ್ ಕೂಡ. ಅವರು ಎಕ್ಸ್-ಫ್ಯಾಕ್ಟರ್ ಆಗಿರುತ್ತಾರೆ ಎಂದು ಹೇಳಿದ್ದಾರೆ. ಅವರನ್ನು 5 ಅಥವಾ 6 ರಲ್ಲಿ ಬಳಸಬಹುದು ಮತ್ತು ಮೊದಲ 6 ಓವರ್‌ಗಳಲ್ಲಿ ಬೌಲಿಂಗ್ ಮಾಡಬಹುದು, ಅವರು ಅದನ್ನು ಮಾಡಲು ಸಮರ್ಥರಾಗಿದ್ದಾರೆ. ಅವರು ಮತ್ತು ಹಾರ್ದಿಕ್ ಪಾಂಡ್ಯ ಇಬ್ಬರೂ ಸಮರ್ಥರಾಗಿದ್ದಾರೆ" ಎಂದು ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT