ಭಾರತ U-19 ತಂಡದ ನಾಯಕ ಆಯುಷ್ ಮ್ಹಾತ್ರೆ ಮತ್ತು ಪಾಕಿಸ್ತಾನ U-19 ನಾಯಕ ಫರ್ಹಾನ್ ಯೂಸುಫ್. 
ಕ್ರಿಕೆಟ್

U19 Asia Cup Semi-Final: ಶ್ರೀಲಂಕಾ ವಿರುದ್ಧ ಭಾರತಕ್ಕೆ ಗೆಲುವು; 11 ವರ್ಷಗಳ ಬಳಿಕ ಫೈನಲ್‌ನಲ್ಲಿ ಪಾಕಿಸ್ತಾನದೊಂದಿಗೆ ಮುಖಾಮುಖಿ!

ಐಪಿಎಲ್ 2026ರ ಹರಾಜಿನಲ್ಲಿ ಆರ್‌ಸಿಬಿ ಖರೀದಿಸಿದ ಇಬ್ಬರು ಆಟಗಾರರಾದ ವಿಹಾನ್ ಮಲ್ಹೋತ್ರಾ (61*) ಮತ್ತು ಕನಿಷ್ಕ್ ಚೌಹಾಣ್ (ಒಂದೇ ಓವರ್‌ನಲ್ಲಿ ಎರಡು ವಿಕೆಟ್‌ಗಳು) ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದರು.

ದುಬೈನಲ್ಲಿ ನಡೆದ U-19 ಏಷ್ಯಾ ಕಪ್‌ನ ಮೊದಲ ಸೆಮಿಫೈನಲ್‌ನಲ್ಲಿ ಭಾರತದ U-19 ತಂಡವು ಶ್ರೀಲಂಕಾ U-19 ತಂಡವನ್ನು ಎಂಟು ವಿಕೆಟ್‌ಗಳಿಂದ ಸೋಲಿಸಿ ಭರ್ಜರಿ ಗೆಲುವು ಸಾಧಿಸಿತು. ಮಳೆಯಿಂದಾಗಿ ಐದು ಗಂಟೆ ತಡವಾಗಿ ಆರಂಭವಾದ ಪಂದ್ಯವನ್ನು 20 ಓವರ್‌ಗಳಿಗೆ ಇಳಿಸಲಾಗಿತ್ತು. ಪಂದ್ಯದಲ್ಲಿ ಭಾರತವು ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡುವ ಮೂಲಕ ಶ್ರೀಲಂಕಾವನ್ನು 8 ವಿಕೆಟ್‌ಗಳಿಗೆ 138 ಸ್ಕೋರ್‌ಗೆ ಸೀಮಿತಗೊಳಿಸಿತು.

ಭಾರತ ತಂಡದ ನಾಯಕ ಆಯುಷ್ ಮ್ಹಾತ್ರೆ ಮತ್ತು 14 ವರ್ಷದ ವೈಭವ್ ಸೂರ್ಯವಂಶಿ ಅವರ ವಿಕೆಟ್‌ಗಳನ್ನು ಆರಂಭದಲ್ಲೇ ಕಳೆದುಕೊಂಡಿತು. ಆದರೆ, ವಿಹಾನ್ ಮಲ್ಹೋತ್ರಾ ಮತ್ತು ಆರನ್ ಜಾರ್ಜ್ ಅವರ ಅರ್ಧಶತಕಗಳ ನೆರವಿನಿಂದಾಗಿ ಭಾರತವು 139 ರನ್‌ಗಳ ಗುರಿ ಬೆನ್ನಟ್ಟುವಲ್ಲಿ ನೆರವಾಯಿತು.

ಶ್ರೀಲಂಕಾ ನೀಡಿದ ಗುರಿ ಬೆನ್ನಟ್ಟಿದ ಭಾರತದ ಉಪನಾಯಕ ವಿಹಾನ್ ಮಲ್ಹೋತ್ರಾ 45 ಎಸೆತಗಳಲ್ಲಿ ಅಜೇಯ 61 ರನ್ ಗಳಿಸಿದರು. ಅವರಿಗೆ ಆರನ್ ಜಾರ್ಜ್ ಅವರಿಂದ ಉತ್ತಮ ಬೆಂಬಲ ದೊರೆಯಿತು. ಅವರು ಅಜೇಯ 58 ರನ್ ಗಳಿಸಿದರು. ಈ ಜೋಡಿಯು 114 ರನ್‌ಗಳ ಜೊತೆಯಾಟ ನಡೆಸಿ ಭಾರತವನ್ನು 18 ಓವರ್‌ಗಳಲ್ಲಿ ಆರಾಮವಾಗಿ ಗೆಲುವಿನ ದಡ ಸೇರಿಸಿತು.

ಐಪಿಎಲ್ 2026ರ ಹರಾಜಿನಲ್ಲಿ ಆರ್‌ಸಿಬಿ ಖರೀದಿಸಿದ ಇಬ್ಬರು ಆಟಗಾರರಾದ ವಿಹಾನ್ ಮಲ್ಹೋತ್ರಾ (61*) ಮತ್ತು ಕನಿಷ್ಕ್ ಚೌಹಾಣ್ (ಒಂದೇ ಓವರ್‌ನಲ್ಲಿ ಎರಡು ವಿಕೆಟ್‌ಗಳು) ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದರು. ಮತ್ತೊಂದೆಡೆ ಎರಡನೇ ಸೆಮಿಫೈನಲ್‌ನಲ್ಲಿ ಬಾಂಗ್ಲಾದೇಶವನ್ನು ಸೋಲಿಸಿದ ನಂತರ ಪಾಕಿಸ್ತಾನವು, ಭಾನುವಾರ ನಡೆಯಲಿರುವ U-19 ಏಷ್ಯಾ ಕಪ್‌ನ ಫೈನಲ್‌ನಲ್ಲಿ ಭಾರತವನ್ನು ಎದುರಿಸಲಿದೆ.

ಭಾರತವು ಪಂದ್ಯಾವಳಿಯ ಉದ್ದಕ್ಕೂ ಅಜೇಯವಾಗಿ ಮುಂದುವರೆದಿದೆ. ಆದರೆ, ಪಾಕಿಸ್ತಾನ ತಂಡವು ಗುಂಪು ಹಂತದಲ್ಲಿ ಮೆನ್ ಇನ್ ಬ್ಲೂ ವಿರುದ್ಧ ಮಾತ್ರ ಸೋಲು ಕಂಡಿದೆ. 11 ವರ್ಷಗಳಲ್ಲಿ ಭಾರತ ಮತ್ತು ಪಾಕಿಸ್ತಾನ U-19 ಏಷ್ಯಾ ಕಪ್ ಫೈನಲ್‌ನಲ್ಲಿ ಮುಖಾಮುಖಿಯಾಗುತ್ತಿರುವುದು ಇದೇ ಮೊದಲು. 2014ರಲ್ಲಿ ಕೊನೆಯ ಬಾರಿಗೆ ಈ ಮುಖಾಮುಖಿ ನಡೆದಿತ್ತು. ಆಗ ಶ್ರೇಯಸ್ ಅಯ್ಯರ್, ಸರ್ಫರಾಜ್ ಖಾನ್, ಸಂಜು ಸ್ಯಾಮ್ಸನ್ ಮತ್ತು ಕುಲದೀಪ್ ಯಾದವ್ ಅವರಂತಹ ಭವಿಷ್ಯದ ಅಂತರರಾಷ್ಟ್ರೀಯ ಆಟಗಾರರನ್ನು ಒಳಗೊಂಡ ತಂಡದೊಂದಿಗೆ ಭಾರತ ಟ್ರೋಫಿಯನ್ನು ಎತ್ತಿಹಿಡಿಯಿತು.

ಭಾರತ vs ಪಾಕಿಸ್ತಾನ, ಅಂಡರ್-19 ಏಷ್ಯಾ ಕಪ್ ಪಂದ್ಯವು ಡಿಸೆಂಬರ್ 21ರಂದು ದುಬೈನ ಐಸಿಸಿ ಅಕಾಡೆಮಿಯಲ್ಲಿ ನಡೆಯಲಿದೆ. ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್ ಮತ್ತು ಸೋನಿ ಲಿವ್‌ನಲ್ಲಿ ನೇರಪ್ರಸಾರವಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯಪಾಲರು ಹೊರಡಿಸಿದ್ದ ಅಮಾನತು ಆದೇಶ ರದ್ದು: KPSC ಅಧ್ಯಕ್ಷರನ್ನಾಗಿ ಶಿವಶಂಕರಪ್ಪ ಮರುನೇಮಕಕ್ಕೆ ಹೈಕೋರ್ಟ್ ಸೂಚನೆ

India vs Sri Lanka: ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆದ ರಿಷಭ್ ಪಂತ್; ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟರ್!

ನೀಟ್ ಪ್ರತಿಭಟನೆ: ಪೊಲೀಸರ ದೌರ್ಜನ್ಯ ಆರೋಪಗಳ ತನಿಖೆಗೆ ಸುಪ್ರೀಂ ಉನ್ನತಾಧಿಕಾರ ಸಮಿತಿ

'ಮಹಾತ್ಮ ಗಾಂಧಿ, ನೆಹರು ಅಷ್ಟೇ ಅಲ್ಲ ವಾಜಪೇಯಿ ವಿರುದ್ಧವೂ ಕೇಸ್ ದಾಖಲಿಸಿ': ವಂದೇ ಮಾತರಂ ವಿವಾದ ಕುರಿತು ಖರ್ಗೆ ತಿರುಗೇಟು

ಪಬ್‌ನಲ್ಲಿ ಶಾಕಿಂಗ್ ಘಟನೆ: ಬಾರ್‌ಟೆಂಡರ್ ಯುವತಿಗೆ ಚಾಕುವಿನಿಂದ ಇರಿದು ಕೊಂದ ಸಹೋದ್ಯೋಗಿ; ಭಯಾನಕ ಕೃತ್ಯ CCTVಯಲ್ಲಿ ಸೆರೆ! Video