ಗೌತಮ್ ಗಂಭೀರ್ - ರೋಹಿತ್ ಶರ್ಮಾ 
ಕ್ರಿಕೆಟ್

Vijay Hazare Trophy: 'ನೀವು ನೋಡುತ್ತಿದ್ದೀರಾ?'; ರೋಹಿತ್ ಶರ್ಮಾ ಶತಕ ಸಿಡಿಸಿದ್ದಕ್ಕೆ ಗೌತಮ್ ಗಂಭೀರ್ ವಿರುದ್ಧ ಅಭಿಮಾನಿಗಳ ಕಿಡಿ

ರೋಹಿತ್ ಶರ್ಮಾ ಸಲೀಸಾಗಿ ಸಿಕ್ಸರ್‌ಗಳ ಸುರಿಮಳೆಗೈದರು ಮತ್ತು ಸಿಕ್ಕಿಂನ ವೇಗಿಗಳನ್ನು ತರಾಟೆಗೆ ತೆಗೆದುಕೊಂಡರು.

ಬುಧವಾರ ಜೈಪುರದ ಸವಾಯ್ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ಸಿಕ್ಕಿಂ ವಿರುದ್ಧ ನಡೆದ 2025-26ರ ವಿಜಯ್ ಹಜಾರೆ ಟ್ರೋಫಿ ಪಂದ್ಯದಲ್ಲಿ ಭಾರತದ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಅತ್ಯುತ್ತಮ ಪ್ರದರ್ಶನ ನೀಡಿದರು. ಬಲಗೈ ಬ್ಯಾಟ್ಸ್‌ಮನ್ 94 ಎಸೆತಗಳಲ್ಲಿ 155 ರನ್ ಗಳಿಸಿ ಅದ್ಭುತ ಪ್ರದರ್ಶನ ನೀಡಿದಾಗ ನೆರೆದಿದ್ದ ಸಾವಿರಾರು ಅಭಿಮಾನಿಗಳು ಸಂಭ್ರಮಿಸಿದರು. ಅವರ ಇನಿಂಗ್ಸ್ 18 ಬೌಂಡರಿ ಮತ್ತು ಒಂಬತ್ತು ಸಿಕ್ಸರ್‌ಗಳಿಂದ ಕೂಡಿತ್ತು. ಮುಂಬೈ ತಂಡವು 237 ರನ್‌ಗಳ ಗುರಿಯನ್ನು ಸುಲಭವಾಗಿ ಬೆನ್ನಟ್ಟಿತು. ತಂಡವು ಎಂಟು ವಿಕೆಟ್‌ಗಳು ಮತ್ತು 117 ಎಸೆತಗಳು ಬಾಕಿ ಇರುವಾಗಲೇ ಪಂದ್ಯವನ್ನು ಗೆದ್ದಿತು.

ಪಂದ್ಯದ ಮೊದಲ ಇನಿಂಗ್ಸ್ ಆರಂಭವಾದ ಅರ್ಧ ಗಂಟೆಯ ಸುಮಾರಿಗೆ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಆಯ್ಕೆದಾರ ಆರ್‌ಪಿ ಸಿಂಗ್ ಅವರನ್ನು ಗಮನಿಸಿದ ಅಭಿಮಾನಿಗಳು ಗೌತಮ್ ಗಂಭೀರ್ ಅವರನ್ನು ಗುರಿಯಾಗಿಸಿಕೊಂಡರು.

'ಗಂಭೀರ್ ಕಿಧರ್ ಹೈ, ದೇಖ್ ರಹಾ ಹೈ ನಾ (ಗೌತಮ್ ಗಂಭೀರ್, ನೀವು ಎಲ್ಲಿದ್ದೀರಿ, ನೀವು ನೋಡುತ್ತಿದ್ದೀರಾ)?' ಎಂದು ಅಭಿಮಾನಿಗಳು ಘೋಷಣೆ ಕೂಗಿದರು ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.

ರೋಹಿತ್ ಶರ್ಮಾ ಸಲೀಸಾಗಿ ಸಿಕ್ಸರ್‌ಗಳ ಸುರಿಮಳೆಗೈದರು ಮತ್ತು ಸಿಕ್ಕಿಂನ ವೇಗಿಗಳನ್ನು ತರಾಟೆಗೆ ತೆಗೆದುಕೊಂಡರು. ಪಿಂಕ್ ಸಿಟಿಯ 'ಹಿಟ್‌ಮ್ಯಾನ್' ಪ್ರಿಯರಿಗೆ ಕ್ರಿಸ್‌ಮಸ್ ಹಬ್ಬಕ್ಕೆ ಅತ್ಯುತ್ತಮ ಉಡುಗೊರೆ ಇದಾಗಿತ್ತು. ವಾರದ ದಿನದಂದು, ನಗರದ ಸುಮಾರು 20,000ಕ್ಕೂ ಹೆಚ್ಚು ಜನರು ಕ್ರೀಡಾಂಗಣದಲ್ಲಿ ಜಮಾಯಿಸಿದ್ದರು. ಪ್ರವೇಶ ಉಚಿತವಾಗಿತ್ತು.

'ಮುಂಬೈ ಚಾ ರಾಜಾ ರೋಹಿತ್ ಶರ್ಮಾ' (ಮುಂಬೈನ ರಾಜ ರೋಹಿತ್ ಶರ್ಮಾ) ಎಂಬ ಘೋಷಣೆ ಕ್ರೀಡಾಂಗಣದ ಸ್ಟ್ಯಾಂಡ್‌ಗಳಾದ್ಯಂತ ಪ್ರತಿಧ್ವನಿಸಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚಿತ್ರದುರ್ಗ: ಖಾಸಗಿ ಬಸ್‌ಗೆ ಕಂಟೇನರ್​​ ಲಾರಿ ಡಿಕ್ಕಿ, ಬೆಂಕಿ​​​​; 9 ಮಂದಿ ಸಜೀವ ದಹನ, ಹಲವರಿಗೆ ಗಂಭೀರ ಗಾಯ; ತನಿಖೆಗೆ ಆದೇಶ; Video

ಚಿತ್ರದುರ್ಗ ಬಸ್ ದುರಂತ: ಸಿಎಂ ಸಿದ್ದರಾಮಯ್ಯ-ಪ್ರಧಾನಿ ಮೋದಿ ತೀವ್ರ ಸಂತಾಪ; ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ

ಭಾರಿ ನಕ್ಸಲ್ ಕಾರ್ಯಾಚರಣೆ: 1.1 ಕೋಟಿ ರೂ ಇನಾಮು ಹೊಂದಿದ್ದ ನಕ್ಸಲ್ ನಾಯಕ ಗಣೇಶ್ ಉಯ್ಕೆ ಸೇರಿ ನಾಲ್ವರು ಹತ!

ಅಮೆರಿಕದಲ್ಲಿ Sun Pharma ಗೆ ಶಾಕ್: 17,000ಕ್ಕೂ ಹೆಚ್ಚು ಯೂನಿಟ್ ಆಂಟಿಫಂಗಲ್ ಶಾಂಪೂ ಹಿಂದಕ್ಕೆ!

'ಮದ್ಯದಂಗಡಿ ಹರಾಜು' ರಾಜ್ಯ ಸರ್ಕಾರದ ಹೊಸ ವರ್ಷದ ಕೊಡುಗೆ: ಕೇಂದ್ರ ಸಚಿವ ಕುಮಾರಸ್ವಾಮಿ ವಾಗ್ದಾಳಿ!

SCROLL FOR NEXT