ಕೊಹ್ಲಿ, ಪೃಥ್ವಿ ಶಾ ಮತ್ತು ರೋಹಿತ್ ಶರ್ಮಾ 
ಕ್ರಿಕೆಟ್

Vijay Hazare Trophy: ಕೊಹ್ಲಿ ಮತ್ತೊಂದು ದಾಖಲೆ, ಆಯ್ಕೆದಾರರಿಗೆ ಪೃಥ್ವಿ ಶಾ ಖಡಕ್ ಸಂದೇಶ, ರೋಹಿತ್ ಶರ್ಮಾ ಗೋಲ್ಡನ್ ಡಕೌಟ್..!

ವಿಜಯ್ ಹಜಾರೆ ಟ್ರೋಫಿಯಲ್ಲಿ ವಿರಾಟ್ ಕೊಹ್ಲಿ ಅದ್ಭುತ ಪ್ರದರ್ಶನ ಮುಂದುವರೆದಿದ್ದು, ಗುಜರಾತ್ ವಿರುದ್ಧದ ಪಂದ್ಯದಲ್ಲಿ ದೆಹಲಿ ಬ್ಯಾಟರ್ ವಿರಾಟ್ ಕೊಹ್ಲಿ ಮತ್ತೆ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದರು.

ನವದೆಹಲಿ: ಭಾರತದ ದೇಶೀಯ ಕ್ರೆಕೆಟ್ ಟೂರ್ನಿ ವಿಜಯ್ ಹಜಾರೆ ಟ್ರೋಫಿಯಲ್ಲಿ ಟೀಂ ಇಂಡಿಯಾ ಆಟಗಾರರ ಭರ್ಜರಿ ಪ್ರದರ್ಶನ ಮುಂದುವರೆದಿದ್ದು, ಭಾರತದ ರನ್ ಮೆಷಿನ್ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ.

ಹೌದು.. ವಿಜಯ್ ಹಜಾರೆ ಟ್ರೋಫಿಯಲ್ಲಿ ವಿರಾಟ್ ಕೊಹ್ಲಿ ಅದ್ಭುತ ಪ್ರದರ್ಶನ ಮುಂದುವರೆದಿದ್ದು, ಗುಜರಾತ್ ವಿರುದ್ಧದ ಪಂದ್ಯದಲ್ಲಿ ದೆಹಲಿ ಬ್ಯಾಟರ್ ವಿರಾಟ್ ಕೊಹ್ಲಿ ಮತ್ತೆ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದರು.

61 ಎಸೆತಗಳಲ್ಲಿ 1 ಸಿಕ್ಸರ್ ಮತ್ತು 13 ಬೌಂಡರಿಗಳ ನೆರವಿನಿಂದ ಕೊಹ್ಲಿ 77 ರನ್ ಗಳಿಸಿ ವಿಶಾಲ್ ಜೈಸ್ವಾಲ್ ಬೌಲಿಂಗ್ ನಲ್ಲಿ ಔಟಾದರು. ಆ ಮೂಲಕ ಕೇವಲ 23 ರನ್ ಗಳ ಅಂತರದಲ್ಲಿ ಮತ್ತೊಂದು ಶತಕ ಸಿಡಿಸುವ ಅವಕಾಶ ಮಿಸ್ ಮಾಡಿಕೊಂಡರು.

ದೆಹಲಿ ನಾಯಕ ರಿಷಭ್ ಪಂತ್ ಕೂಡ 70 ರನ್ ಗಳಿಸಿ ಗಮನ ಸೆಳೆದರು.

ಕೊಹ್ಲಿ ಅಪರೂಪದ ದಾಖಲೆ

ಆದಾಗ್ಯೂ ಕೊಹ್ಲಿ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ಲಿಸ್ಟ್ ಎ ಬ್ಯಾಟಿಂಗ್ ಸರಾಸರಿಯನ್ನು ಹೊಂದಿರುವ ಆಟಗಾರ ಎಂಬ ಕೀರ್ತಿಗೆ ಭಾಜನರಾದರು. ಈ ದಾಖಲೆ ಈ ಹಿಂದೆ ಆಸ್ಟ್ರೇಲಿಯಾದ ದಂತಕಥೆ ಮೈಕೆಲ್ ಬೆವನ್ ಅವರ ಹೆಸರಲ್ಲಿತ್ತು.

ಆಯ್ಕೆದಾರರಿಗೆ ಪೃಥ್ವಿ ಶಾ ಖಡಕ್ ಸಂದೇಶ

ಮತ್ತೊಂದು ಪಂದ್ಯದಲ್ಲಿ ಸಿಕ್ಕಿಂ ವಿರುದ್ಧ ಮಹಾರಾಷ್ಟ್ರದ 151 ರನ್ ಗಳ ಗುರಿ ಬೆನ್ನಟ್ಟುವಲ್ಲಿ ಪೃಥ್ವಿ ಶಾ ನೆರವಾದರು. ಮಹಾರಾಷ್ಟ್ರದ ಆರಂಭಿಕ ಆಟಗಾರ ಪೃಥ್ವಿ ಶಾ 43 ಎಸೆತಗಳಲ್ಲಿ ಎಂಟು ಬೌಂಡರಿ ಮತ್ತು ಒಂದು ಸಿಕ್ಸರ್ ಬಾರಿಸಿ ಅರ್ಧಶತಕ ಸಿಡಿಸಿದರು. ಆ ಮೂಲಕ ಪೃಥ್ವಿಶಾ ತಾವಿನ್ನೂ ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಲು ಫಿಟ್ ಆಗಿರುವುದಾಗಿ ಆಯ್ಕೆ ಸಮಿತಿಗೆ ಖಡಕ್ ಸಂದೇಶ ರವಾನಿಸಿದ್ದಾರೆ.

ರೋಹಿತ್ ಶರ್ಮಾ ಗೋಲ್ಡನ್ ಡಕೌಟ್

ಚಂಡೀಗಢ ವಿರುದ್ಧ ಉತ್ತರ ಪ್ರದೇಶ ಪರ ರಿಂಕು ಸಿಂಗ್ 56 ಎಸೆತಗಳಲ್ಲಿ ಶತಕ ಬಾರಿಸಿದ್ದು ವಿಶೇಷವಾಗಿತ್ತು. ಆದಾಗ್ಯೂ, ಉತ್ತರಾಖಂಡ್ ವಿರುದ್ಧ ಮುಂಬೈ ಪರ ರೋಹಿತ್ ಶರ್ಮಾ ಅದ್ಭುತ ಪ್ರದರ್ಶನ ನೀಡುವಲ್ಲಿ ವಿಫಲರಾದರು, ಆಘಾತಕಾರಿಯಾಗಿ ಗೋಲ್ಡನ್ ಡಕ್ ಗೆ ರೋಹಿತ್ ಶರ್ಮಾ ಔಟಾದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?