ಗೊಂಗಡಿ ತ್ರಿಶಾ 
ಕ್ರಿಕೆಟ್

U19 T20 World Cup: ಮಹಿಳಾ ಕ್ರಿಕೆಟ್ ಆಟಗಾರ್ತಿ ತ್ರಿಶಾಗೆ ತೆಲಂಗಾಣ ಸರ್ಕಾರ ಬಂಪರ್ ಬಹುಮಾನ ಘೋಷಣೆ!

ತ್ರಿಶಾ 19 ವರ್ಷದೊಳಗಿನ ಮಹಿಳೆಯರ ವಿಶ್ವಕಪ್‌ನಲ್ಲಿ ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿ ಗೆದ್ದುಕೊಂಡಿದ್ದರು.

ಹೈದರಾಬಾದ್: ಕೌಲಾಲಂಪುರದಲ್ಲಿ ಇತ್ತೀಚೆಗೆ ನಡೆದ ಐಸಿಸಿ 19 ವರ್ಷದೊಳಗಿನ ಮಹಿಳೆಯರ T20 ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಮಹಿಳಾ ಕ್ರಿಕೆಟ್ ಆಟಗಾರ್ತಿ ಗೊಂಗಡಿ ತ್ರಿಶಾಗೆ ತೆಲಂಗಾಣ ಬಂಪರ್ ಬಹುಮಾನದ ಘೋಷಣೆ ಮಾಡಲಾಗಿದೆ. ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಬುಧವಾರ 1 ಕೋಟಿ ರೂ. ನಗದು ಬಹುಮಾನ ಘೋಷಿಸಿದ್ದಾರೆ.

ತೆಲಂಗಾಣದ ಭದ್ರಾಚಲಂ ಮೂಲದ ತ್ರಿಶಾ ಅವರು ಮುಖ್ಯಮಂತ್ರಿಯನ್ನು ಹೈದರಾಬಾದ್‌ನಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾದರು. ತ್ರಿಷಾ ಅವರ ಆಟಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ರೆಡ್ಡಿ, ಭವಿಷ್ಯದಲ್ಲಿ ಅವರು ದೇಶಕ್ಕಾಗಿ ಉತ್ತಮ ಫಾರ್ಮ್ ಮುಂದುವರಿಸಲಿ ಎಂದು ಹಾರೈಸಿದರು.

ತೆಲಂಗಾಣದ 19 ವರ್ಷದೊಳಗಿನವರ ವಿಶ್ವಕಪ್ ತಂಡದ ಸದಸ್ಯೆ ಧೃತಿ ಕೇಸರಿ, ಅಂಡರ್ 19 ವಿಶ್ವಕಪ್ ತಂಡದ ಮುಖ್ಯ ಕೋಚ್ ನೌಶೀನ್ ಮತ್ತು ತರಬೇತುದಾರರಾದ ಶಾಲಿನಿ ಅವರಿಗೆ ತಲಾ 10 ಲಕ್ಷ ರೂಪಾಯಿ ನಗದು ಬಹುಮಾನವನ್ನು ಸಿಎಂ ಘೋಷಿಸಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ತ್ರಿಶಾ 19 ವರ್ಷದೊಳಗಿನ ಮಹಿಳೆಯರ ವಿಶ್ವಕಪ್‌ನಲ್ಲಿ ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿ ಗೆದ್ದುಕೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT