ಭಾರತಕ್ಕೆ ಜಯ 
ಕ್ರಿಕೆಟ್

1st ODI: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 4 ವಿಕೆಟ್ ಭರ್ಜರಿ ಜಯ

ಗುರುವಾರ ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್​ಕ್ರೀಡಾಂಗಣದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ತಂಡವನ್ನು 4 ವಿಕೆಟ್ ಗಳ ಅಂತರದಲ್ಲಿ ಮಣಿಸಿತು.

ನಾಗ್ಪುರ: ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ 4 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ಗುರುವಾರ ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್​ಕ್ರೀಡಾಂಗಣದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ತಂಡವನ್ನು 4 ವಿಕೆಟ್ ಗಳ ಅಂತರದಲ್ಲಿ ಮಣಿಸಿತು.

ಇಂಗ್ಲೆಂಡ್ ನೀಡಿದ್ದ 249 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಭಾರತ ತಂಡ ಶುಭ್ ಮನ್ ಗಿಲ್ (87 ರನ್), ಶ್ರೇಯಸ್ ಅಯ್ಯರ್ (59 ರನ್) ಮತ್ತು ಅಕ್ಸರ್ ಪಟೇಲ್ (52 ರನ್) ಅವರ ಅರ್ಧಶತಕಗಳ ನೆರವಿನಿಂದ ಇನ್ನೂ 11.2 ಓವರ್ ಇರುವಂತೆಯೇ ಗೆಲುವು ಸಾಧಿಸಿತು. ಆ ಮೂಲಕ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿದೆ.

ಮತ್ತೆ ನಿರಾಶೆ ಮೂಡಿಸಿದ ನಾಯಕ ರೋಹಿತ್, ಕೆಎಲ್ ರಾಹುಲ್

ಇನ್ನು ಈ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ರ ಬ್ಯಾಟಿಂಗ್ ವೈಫಲ್ಯ ಮತ್ತೆ ಮುಂದುವರೆದಿದೆ. ಇನ್ನಿಂಗ್ಸ್ ಆರಂಭದಲ್ಲಿ ರಕ್ಷಣಾತ್ಮಕ ಆಟದ ಮೊರೆ ಹೋಗಿದ್ದ ರೋಹಿತ್ ಶರ್ಮಾ 7 ಎಸೆತಗಳಲ್ಲಿ ಕೇವಲ 2 ರನ್ ಗಳಿಸಿ ಲಿವಿಂಗ್ ಸ್ಟೋನ್ ಬೌಲಿಂಗ್ ನಲ್ಲಿ ಔಟಾದರು. ಅಂತೆಯೇ ಕೆಎಲ್ ರಾಹುಲ್ ಕೂಡ ಈ ಪಂದ್ಯದಲ್ಲಿ ಮತ್ತೆ ನಿರಾಶೆ ಮೂಡಿಸಿದರು. ರಾಹುಲ್ ಕೂಡ 9 ಎಸೆತಗಳನ್ನು ಎದುರಿಸಿ ಕೇವಲ 2 ರನ್ ಗಳಿಸಿ ಅದಿಲ್ ರಷೀದ್ ಗೆ ವಿಕೆಟ್ ಒಪ್ಪಿಸಿದರು.

ಉಳಿದಂತೆ ಇಂದಿನ ಪಂದ್ಯದ ಮೂಲಕ ಏಕದಿನ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ ಯಶಸ್ವಿ ಜೈಸ್ವಾಲ್ 15 ರನ್ ಗಳಿಸಿದರೆ, ಹಾರ್ದಿಕ್ ಪಾಂಡ್ಯ (ಅಜೇಯ 9) ಮತ್ತು ರವೀಂದ್ರ ಜಡೇಜಾ (ಅಜೇಯ 12 ರನ್) ಗೆಲುವಿನ ಔಪಚಾರಿಕತೆ ಮುಕ್ತಾಯ ಮಾಡಿದರು.

ಇಂಗ್ಲೆಂಡ್ ಪರ ಸಕೀಬ್ ಮಹಮೂದ್ ಮತ್ತು ಅದಿಲ್ ರಷೀದ್ ತಲಾ 2 ವಿಕೆಟ್ ಪಡೆದರೆ, ಜೋಫ್ರಾ ಆರ್ಚರ್, ಜೇಕಬ್ ಬೆಥೆಲ್ ತಲಾ 1 ವಿಕೆಟ್ ಪಡೆದರು.

ಇಂಗ್ಲೆಂಡ್ ಗೆ 7ನೇ ಸೋಲು

ಇನ್ನು ಈ ಪಂದ್ಯದ ಸೋಲಿನ ಮೂಲಕ 2023ರ ವಿಶ್ವಕಪ್ ಟೂರ್ನಿ ಬಳಿಕ ಇಂಗ್ಲೆಂಡ್ ತಂಡ ತಾನಾಡಿರುವ 8 ಏಕದಿನ ಪಂದ್ಯಗಳ ಪೈಕಿ 7 ಪಂದ್ಯಗಳನ್ನು ಸೋತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT