ಶ್ರೇಯಸ್ ಅಯ್ಯರ್ 
ಕ್ರಿಕೆಟ್

1st ODI: Shreyas Iyer ಭರ್ಜರಿ ಕಮ್ ಬ್ಯಾಕ್, ಆಂಗ್ಲರ ವಿರುದ್ಧ ದಾಖಲೆಯ ಅರ್ಧಶತಕ

ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ನೀಡಿರುವ 249ರನ್ ಗಳನ್ನು ಬೆನ್ನು ಹತ್ತಿರುವ ಭಾರತ ತಂಡಕ್ಕೆ ಶ್ರೇಯಸ್ ಅಯ್ಯರ್ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ನೆರವಾದರು.

ನಾಗ್ಪುರ: ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಆಯ್ಕೆಯಾಗಿರುವ ಶ್ರೇಯಸ್ ಅಯ್ಯರ್ ಟೀಂ ಇಂಡಿಯಾಗೆ ಭರ್ಜರಿ ಕಮ್ ಬ್ಯಾಕ್ ಮಾಡಿದ್ದು, ಆಂಗ್ಲರ ವಿರುದ್ಧ ದಾಖಲೆಯ ಅರ್ಧಶತಕ ಸಿಡಿಸುವ ಮೂಲಕ ಟೀಕಾಕಾರರಿಗೆ ತಿರುಗೇಟು ನೀಡಿದ್ದಾರೆ.

ಹೌದು.. ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ನೀಡಿರುವ 249ರನ್ ಗಳನ್ನು ಬೆನ್ನು ಹತ್ತಿರುವ ಭಾರತ ತಂಡಕ್ಕೆ ಶ್ರೇಯಸ್ ಅಯ್ಯರ್ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ನೆರವಾದರು. ನಾಗ್ಪುರ ಏಕದಿನ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಕೇವಲ 36 ಎಸೆತಗಳಲ್ಲಿ 163.89 ಸ್ಟ್ರೈಕ್ ರೇಟ್‌ನಲ್ಲಿ 59 ರನ್ ಗಳಿಸಿ ಔಟಾದರು. ಅವರ ಈ ಭರ್ಜರಿ ಇನ್ನಿಂಗ್ಸ್ ನಲ್ಲಿ 7 ಬೌಂಡರಿ ಮತ್ತು 2 ಸಿಕ್ಸರ್‌ಗಳು ಸೇರಿದ್ದವು.

ದಾಖಲೆಯ ಅರ್ಧಶತಕ

ಇನ್ನು ಇದೇ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಕೇವಲ 30 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಸಂಭ್ರಮಿಸಿದರು. ಆ ಮೂಲಕ ಏಕದಿನ ಕ್ರಿಕೆಟ್ ನಲ್ಲಿ ತಮ್ಮ 2ನೇ ವೇಗದ ಅರ್ಧಶತಕ ಗಳಿಸಿದರು. ಈ ಹಿಂದೆ ಶ್ರೇಯಸ್ ಅಯ್ಯರ್ 2019ರಲ್ಲಿ ವಿಶಾಖಪಟ್ಟಣಂನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ದದ ಏಕದಿನ ಪಂದ್ಯದಲ್ಲಿ 28 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದರು. ಆ ಮೂಲಕ ಇಂದು ತಮ್ಮ 2ನೇ ವೇಗದ ಅರ್ಧ ಶತಕ ಸಿಡಿಸಿದ ಸಾಧನೆ ಮಾಡಿದರು.

ಇನ್ನು ಈ ಪಂದ್ಯದಲ್ಲಿ ಭಾರತದ ಪರ ಅಕ್ಸರ್ ಪಟೇಲ್ ಕೂಡ ಅರ್ಧಶತಕ ಸಿಡಿಸಿ ಶ್ರೇಯಸ್ ಅಯ್ಯರ್ ಗೆ ಉತ್ತಮ ಸಾಥ್ ನೀಡಿದರು. ಅಕ್ಸರ್ ಪಟೇಲ್ ಒಟ್ಟು 47 ಎಸೆತಗಳನ್ನು ಎದುರಿಸಿ 1 ಸಿಕ್ಸರ್ ಮತ್ತು 6 ಬೌಂಡರಿ ಸಹಿತ 110.64 ಸ್ಟ್ರೈಕ್ ರೇಟ್ ನಲ್ಲಿ 52 ರನ್ ಕಲೆಹಾಕಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT