ಜಾವಗಲ್ ಶ್ರೀನಾಥ್ 
ಕ್ರಿಕೆಟ್

ICC Champions Trophy 2025: ಪಾಕಿಸ್ತಾನಕ್ಕೆ ಮತ್ತೆ ಮುಖಭಂಗ; ನಿತಿನ್ ಮೆನನ್, ಜಾವಗಲ್ ಶ್ರೀನಾಥ್ ಹಿಂದೇಟು; ಪರ್ಯಾಯ ತಲೆ ಬಿಸಿ!

ಇದೇ ಫೆಬ್ರವರಿ 19 ರಿಂದ ಆರಂಭವಾಗಲಿರುವ ಚಾಂಪಿಯನ್ಸ್ ಟ್ರೋಫಿಗೆ ಐಸಿಸಿ, ಅಂಪೈರ್‌ಗಳ ಹಾಗೂ ಮ್ಯಾಚ್ ರೆಫರಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಲಾಹೋರ್: ಪಾಕಿಸ್ತಾನದಲ್ಲಿ ಆಯೋಜನೆಯಾಗಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಒಂದಲ್ಲಾ ಒಂದು ಅಡೆತಡೆ ಬರುತ್ತಿದ್ದು, ಇದೀಗ ಈ ಪಟ್ಟಿಗೆ ಮತ್ತೊಂದು ಹೊಸ ತಲೆನೋವು ಸೇರ್ಪಡೆಯಾಗಿ ಪಾಕಿಸ್ತಾನಕ್ಕೆ ಮತ್ತೆ ಮುಖಭಂಗ ಏರ್ಪಟ್ಟಿದೆ.

ಹೌದು.. ಇದೇ ಫೆಬ್ರವರಿ 19 ರಿಂದ ಆರಂಭವಾಗಲಿರುವ ಚಾಂಪಿಯನ್ಸ್ ಟ್ರೋಫಿಗೆ ಐಸಿಸಿ, ಅಂಪೈರ್‌ಗಳ ಹಾಗೂ ಮ್ಯಾಚ್ ರೆಫರಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ 12 ಅಂಪೈರ್​ಗಳು ಹಾಗೂ ಮೂವರು ಮ್ಯಾಚ್ ರೆಫರಿಗಳು ಸೇರಿದ್ದಾರೆ. ಅಚ್ಚರಿಯಿಂದರೆ ಈ ಎರಡೂ ಪಟ್ಟಿಗಳಲ್ಲಿ ಭಾರತದ ಇಬ್ಬರು ಖ್ಯಾತ ಪಂದ್ಯದ ಅಧಿಕಾರಿಗಳ ಹೆಸರು ನಾಪತ್ತೆಯಾಗಿದೆ. ಭಾರತದ ಅಂಪೈರ್ ನಿತಿನ್ ಮೆನನ್ ಮತ್ತು ರೆಫರಿ ಜಾವಗಲ್ ಶ್ರೀನಾಥ್ ರನ್ನು ಕೈಬಿಟ್ಟು ಐಸಿಸಿ ಈ ಪಟ್ಟಿ ಸಿದ್ಧಪಡಿಸಿದೆ.

ಐಸಿಸಿ ಅಂಪೈರ್​ಗಳ ಪ್ಯಾನೆಲ್‌ನಲ್ಲಿ ಸ್ಥಾನ ಪಡೆದಿರುವ ನಿತಿನ್ ಮೆನನ್ ಹಾಗೂ ಅನುಭವಿ ಮ್ಯಾಚ್ ರೆಫರಿ ಕನ್ನಡಿಗ ಜಾವಗಲ್ ಶ್ರೀನಾಥ್ ಅವರು ಈ ಪಟ್ಟಿಯಲ್ಲಿಲ್ಲ. ವಾಸ್ತವವಾಗಿ ಈ ಇಬ್ಬರು ಐಸಿಸಿ ಆಯೋಜನೆ ಮಾಡುವ ಪ್ರತಿಯೊಂದು ಪಂದ್ಯಾವಳಿಯಲ್ಲೂ ಕಾಣಿಸಿಕೊಳ್ಳುತ್ತಿದ್ದರು. ಆದರೆ ಮುಂಬರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಈ ಇಬ್ಬರು ಇರುವುದಿಲ್ಲ.

ಕಾರಣವೇನು?

ವರದಿಯ ಪ್ರಕಾರ, ಈ ಇಬ್ಬರು ಪಾಕಿಸ್ತಾನಕ್ಕೆ ಹೋಗಲು ನಿರಾಕರಿಸಿದ್ದು, ಇದು ಪಾಕಿಸ್ತಾನಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಅಲ್ಲದೆ ಈ ಇಬ್ಬರನ್ನು ಹೊರತು ಪಡಿಸಿ ಐಸಿಸಿ ಹೊಸ ಪಟ್ಟಿ ತಯಾರಿಸಿದೆ ಎಂದು ಹೇಳಲಾಗುತ್ತಿದೆ. ಇನ್ನು ಈ ಇಬ್ಬರೂ ಭಾರತ ಮೂಲದವರಾಗಿದ್ದು, ಅದರಲ್ಲೂ ಜಾವಗಲ್ ಶ್ರೀನಾಥ್ ಕರ್ನಾಟಕದವರಾಗಿದ್ದಾರೆ. ಭಾರತ ಮತ್ತು ಪಾಕಿಸ್ತಾನ ದೇಶಗಳ ನಡುವಿನ ಸಂಘರ್ಷ ಮತ್ತು ಪಾಕಿಸ್ತಾನದಲ್ಲಿನ ಭದ್ರತಾ ಭೀತಿಯೇ ಅವರನ್ನು ಪಾಕಿಸ್ತಾನಕ್ಕೆ ಹೋಗಲು ಹಿಂದೇಟು ಹಾಕುವಂತೆ ಮಾಡಿದೆ ಎನ್ನಲಾಗಿದೆ.

ಚಾಂಪಿಯನ್ಸ್ ಟ್ರೋಫಿಗೆ ಅಂಪೈರ್‌ಗಳ ಪಟ್ಟಿ

ಕುಮಾರ್ ಧರ್ಮಸೇನ, ಕ್ರಿಸ್ ಗ್ಯಾಫ್ನಿ, ಮೈಕೆಲ್ ಗೌಫ್, ಆಡ್ರಿಯನ್ ಹೋಲ್ಡ್‌ಸ್ಟಾಕ್, ರಿಚರ್ಡ್ ಇಲ್ಲಿಂಗ್‌ವರ್ತ್, ರಿಚರ್ಡ್ ಕೆಟಲ್‌ಬರೋ, ಎಹ್ಸಾನ್ ರಜಾ, ಪಾಲ್ ರೈಫಲ್, ಶರಫುದ್ದೌಲಾ ಇಬ್ನೆ ಶಾಹಿದ್, ರಾಡ್ನಿ ಟಕರ್, ಅಲೆಕ್ಸ್ ವಾರ್ಫ್, ಜೋಯಲ್ ವಿಲ್ಸನ್.

ಮ್ಯಾಚ್ ರೆಫರಿಗಳ ಪಟ್ಟಿ

ಡೇವಿಡ್ ಬೂನ್, ಆಂಡ್ರ್ಯೂ ಪೈಕ್ರಾಫ್ಟ್ ಮತ್ತು ರಂಜನ್ ಮದುಗಲ್ಲೆ ಪಂದ್ಯದ ರೆಫರಿಗಳಾಗಿರುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

SCROLL FOR NEXT