ವಿರಾಟ್ ಕೊಹ್ಲಿ 
ಕ್ರಿಕೆಟ್

Ind vs Eng: ಎರಡನೇ ಪಂದ್ಯಕ್ಕೆ ವಿರಾಟ್ ಕೊಹ್ಲಿ ಫಿಟ್- ಶುಭಮನ್ ಗಿಲ್

ನಾಗ್ಪುರದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ನಾಲ್ಕು ವಿಕೆಟ್‌ಗಳ ಜಯ ಸಾಧಿಸಿದೆ.

ಕಟಕ್: ಗುರುವಾರ ನಾಗ್ಪುರದಲ್ಲಿ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಿಂದ ಟೀಂ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಹೊರಗುಳಿದಿದ್ದರು. ಮುಂಬರುವ ಚಾಂಪಿಯನ್ಸ್ ಟ್ರೋಫಿ ಹಿನ್ನೆಲೆಯಲ್ಲಿ ಇದು ನಾಯಕ ರೋಹಿತ್ ಶರ್ಮಾಗೆ ತಲೆನೋವಾಗಿ ಪರಿಣಮಿಸಿತ್ತು. ಆದರೆ, ವಿರಾಟ್ ಕೊಹ್ಲಿ ಇದೀಗ ಫಿಟ್ ಆಗಿದ್ದು, ಇಂಗ್ಲೆಂಡ್ ವಿರುದ್ಧದ ಎರಡನೇ ಪಂದ್ಯಕ್ಕೆ ಲಭ್ಯರಿರುತ್ತಾರೆ ಎನ್ನಲಾಗಿದೆ.

ಭಾರತದ ಉಪನಾಯಕ ಶುಭಮನ್ ಗಿಲ್ ಅವರು ವಿರಾಟ್ ಕೊಹ್ಲಿ ಅವರ ಫಿಟ್ನೆಸ್ ಬಗ್ಗೆ ಇದ್ದ ಭಯವನ್ನು ನಿವಾರಿಸಿದ್ದಾರೆ. ಬ್ಯಾಟಿಂಗ್ ದಿಗ್ಗಜ ಕೊಹ್ಲಿ ಫಿಟ್ ಆಗಿದ್ದು, ಭಾನುವಾರ ಇಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಎರಡನೇ ಏಕದಿನ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಆಡಲಿದ್ದಾರೆ ಎಂದು ಹೇಳಿದ್ದಾರೆ.

ಫೆಬ್ರುವರಿ 19ರಂದು ಪಾಕಿಸ್ತಾನ ಮತ್ತು ದುಬೈನಲ್ಲಿ ಪ್ರಾರಂಭವಾಗುವ ICC ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಅಂತಿಮ ಅಭ್ಯಾಸ ಪಂದ್ಯಗಳೆಂದೇ ಹೇಳಲಾಗುತ್ತಿರುವ ನಾಗ್ಪುರದಲ್ಲಿ ನಡೆದ ಏಕದಿನ ಸರಣಿಯ ಆರಂಭಿಕ ಪಂದ್ಯದಿಂದ 36 ವರ್ಷದ ವಿರಾಟ್ ಕೊಹ್ಲಿ ಬಲ ಮೊಣಕಾಲಿನ ಊತದಿಂದಾಗಿ ಹೊರಗುಳಿದಿದ್ದರು.

ನಾಗ್ಪುರದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ನಾಲ್ಕು ವಿಕೆಟ್‌ಗಳ ಜಯ ಸಾಧಿಸಿದೆ. 87 ರನ್ ಗಳಿಸಿದ ಗಿಲ್, 'ಕೊಹ್ಲಿಗೆ ಆಗಿರುವ ಗಾಯ ಗಂಭೀರವಾದುದಲ್ಲ. ನಿನ್ನೆಯ (ಬುಧವಾರ) ಅಭ್ಯಾಸದ ವೇಳೆ ಅವರು (ಕೊಹ್ಲಿ) ಚೆನ್ನಾಗಿದ್ದರು. ಆದರೆ, ಗುರುವಾರ ಬೆಳಗ್ಗೆ ಸ್ವಲ್ಪ ಮೊಣಕಾಲಿನ ಊತ ಕಾಣಿಸಿಕೊಂಡಿತ್ತು. ಅವರು ಖಂಡಿತವಾಗಿಯೂ ಎರಡನೇ ಏಕದಿನ ಪಂದ್ಯಕ್ಕೆ ಮರಳಲಿದ್ದಾರೆ' ಎಂದು ಡಿಸ್ನಿ-ಹಾಟ್‌ಸ್ಟಾರ್‌ಗೆ ತಿಳಿಸಿದ್ದಾರೆ.

'ಇಲ್ಲ, ನಾನು ನನ್ನ ಶತಕದ ಬಗ್ಗೆ ಯೋಚಿಸುತ್ತಿರಲಿಲ್ಲ. ನಾನು ಫೀಲ್ಡ್ ಪ್ಲೇಸ್‌ಮೆಂಟ್‌ಗಳ ಮೇಲೆ ಗಮನ ಹರಿಸಿದ್ದೆ ಮತ್ತು ಅದಕ್ಕೆ ಅನುಗುಣವಾಗಿ ನನ್ನ ಬ್ಯಾಟ್ ಬೀಸುತ್ತಿದ್ದೆ. ನಾನು ಬೌಲರ್‌ಗಳ ಮೇಲೆ ಪ್ರಾಬಲ್ಯ ಸಾಧಿಸಲು ಬಯಸುತ್ತೇನೆ ಮತ್ತು 60 ರನ್ ಗಳಿಸಿರುವ ವೇಳೆಯಲ್ಲಿಯೂ ನಾನು ಅದೇ ಶಾಟ್ ಅನ್ನು ಆಡುತ್ತಿದ್ದೆ' ಎಂದು ಗಿಲ್ ಹೇಳಿದರು.

ಸಕೀಬ್ ಮಹಮೂದ್ ಅವರ ಎಸೆತದಲ್ಲಿ ಮಿಡ್-ಆನ್‌ನಲ್ಲಿ ಜೋಸ್ ಬಟ್ಲರ್ ಡೈವಿಂಗ್ ಕ್ಯಾಚ್ ಪಡೆದರು. ಈ ಮೂಲಕ ಗಿಲ್ ತಮ್ಮ ಇನಿಂಗ್ಸ್ ಮುಗಿಸಿದರು. ಈ ಸಮಯದಲ್ಲಿ ಭಾರತ 6 ವಿಕೆಟ್ ನಷ್ಟಕ್ಕೆ 235 ರನ್ ಗಳಿಸಿತ್ತು.

ಸಾಮಾನ್ಯವಾಗಿ ಏಕದಿನ ಪಂದ್ಯಗಳಲ್ಲಿ ಆರಂಭಿಕರಾಗಿ ಖಾತೆ ತೆರೆಯುತ್ತಿದ್ದ ಗಿಲ್, ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ನಂ.3 ಸ್ಥಾನದಲ್ಲಿ ಬ್ಯಾಟಿಂಗ್ ಮಾಡಿದ್ದು ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿದರು.

'ನಾನು ಟೆಸ್ಟ್‌ನಲ್ಲಿ ನಂ.3 ರಲ್ಲಿ ಆಡುತ್ತೇನೆ. ಹೀಗಾಗಿ, ಅದು ಅಷ್ಟೇನು ಸಮಸ್ಯೆಯಾಗುವುದಿಲ್ಲ. ಆ ಸ್ಥಾನದಲ್ಲಿ ಆಡುವುದು ಯಾವಾಗಲೂ ಸವಾಲಾಗಿದೆ ಏಕೆಂದರೆ ನೀವು ಆಟದ ಪರಿಸ್ಥಿತಿಗೆ ಹೊಂದಿಕೊಳ್ಳಬೇಕು. ತಂಡವು ಶೀಘ್ರಗತಿಯಲ್ಲಿ ವಿಕೆಟ್‌ಗಳನ್ನು ಕಳೆದುಕೊಂಡರೆ, ನೀವು ಸಂವೇದನಾಶೀಲವಾಗಿ ಆಡಬೇಕು. ತಂಡವು ಉತ್ತಮವಾಗಿ ಪ್ರಾರಂಭಿಸಿದರೆ, ನೀವು ಆವೇಗವನ್ನು ಕಾಯ್ದುಕೊಳ್ಳಬೇಕು. ಪರಿಸ್ಥಿತಿಗೆ ಅನುಗುಣವಾಗಿ ನನ್ನ ಬ್ಯಾಟಿಂಗ್ ಇತ್ತು' ಎಂದು ಹೇಳಿದರು

ಭಾರತದ ಯುವ ಆಟಗಾರರು ಆಗಾಗ್ಗೆ ಸ್ಪಿನ್ನರ್‌ಗಳ ವಿರುದ್ಧ ಸ್ವೀಪ್ ಮತ್ತು ರಿವರ್ಸ್ ಸ್ವೀಪ್ ಹೊಡೆತಗಳನ್ನು ಆಯ್ಕೆಮಾಡುತ್ತಾರೆ ಎಂಬುದಕ್ಕೆ ಉತ್ತರಿಸಿದ ಗಿಲ್, ಇದು ವೈಯಕ್ತಿಕ ಆಯ್ಕೆಯಾಗಿದೆ, ತಂಡದ ತಂತ್ರವಲ್ಲ. ಪ್ರತಿಯೊಬ್ಬ ಬ್ಯಾಟ್ಸ್‌ಮನ್ ನಿರ್ದಿಷ್ಟ ಪ್ರದೇಶಗಳನ್ನು ಗುರಿಯಾಗಿಸಲು ಯೋಜನೆಯನ್ನು ಹೊಂದಿರುತ್ತಾನೆ. ಬ್ಯಾಟಿಂಗ್ ಮಾಡುವಾಗ ಹೆಚ್ಚಿನ ಆಯ್ಕೆಗಳನ್ನು ಹೊಂದಲು ಅನೇಕ ಆಟಗಾರರು ನೆಟ್ಸ್‌ನಲ್ಲಿ ಸ್ವೀಪ್ ಮತ್ತು ರಿವರ್ಸ್ ಸ್ವೀಪ್‌ಗಳನ್ನು ಅಭ್ಯಾಸ ಮಾಡುತ್ತಿದ್ದಾರೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ವಿರುದ್ಧ ಪ್ರತೀಕಾರ: ರಷ್ಯಾ ತೈಲ ವಿನಾಯಿತಿ ವಿಸ್ತರಣೆ ಇಲ್ಲ ಎಂದ ಅಮೆರಿಕಾ; ಜಾಗತಿಕ ಮಾರುಕಟ್ಟೆಗೆ ಶಾಕ್, ಭಾರತದ ಮೇಲೂ ಪರಿಣಾಮ ಸಾಧ್ಯತೆ..!

ಮಹಿಳಾ ಮೀಸಲಾತಿ ಮಸೂದೆಗೆ ಬೆಂಬಲ; ಆದರೆ ಡೀಲಿಮಿಟೇಷನ್ ಗೆ ಪ್ರತಿಪಕ್ಷಗಳ ವಿರೋಧ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

EVM ಬದಲು ಬ್ಯಾಲೆಟ್ ಪೇಪರ್ ಬಳಕೆ ಮಸೂದೆಗೆ ಕೊನೆಗೂ ರಾಜ್ಯಪಾಲರ ಅಂಕಿತ!

ಪಾಕಿಸ್ತಾನಕ್ಕೆ ಶಾಕ್! ಕೇಂದ್ರದ ಡೀಲಿಮಿಟೇಷನ್ ಮಸೂದೆಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರದ ಕ್ಷೇತ್ರಗಳ ಮರುಹಂಚಿಕೆಗೆ ಕ್ರಮ!

'ಚೀನಾ, ಇಡೀ ಜಗತ್ತಿಗೆ' ಹಾರ್ಮುಜ್ ಅನ್ನು 'ಶಾಶ್ವತವಾಗಿ' ತೆರೆಯುತ್ತೇವೆ; ಜಿನ್ ಪಿಂಗ್ ನನಗೆ ದೊಡ್ಡ ಅಪ್ಪುಗೆ ನೀಡುತ್ತಾರೆ: ಟ್ರಂಪ್

SCROLL FOR NEXT