ಗ್ರೇಮ್ ಸ್ಮಿತ್ ಅವರೊಂದಿಗೆ ದಿನೇಶ್ ಕಾರ್ತಿಕ್ 
ಕ್ರಿಕೆಟ್

SA20: ದಿನೇಶ್ ಕಾರ್ತಿಕ್ ದೊಡ್ಡ ಆಸ್ತಿ ಎಂದ ಗ್ರೇಮ್ ಸ್ಮಿತ್!

ಕಳೆದ ವರ್ಷ ಜೂನ್‌ನಲ್ಲಿ ಭಾರತೀಯ ಕ್ರಿಕೆಟ್‌ನಿಂದ ನಿವೃತ್ತರಾದ ನಂತರ SA20 ನಲ್ಲಿ ಕಾಣಿಸಿಕೊಂಡ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದ ಕಾರ್ತಿಕ್, ಇತ್ತೀಚೆಗೆ ಮುಕ್ತಾಯಗೊಂಡ ಮೂರನೇ ಆವೃತ್ತಿಯಲ್ಲಿ ಪಾರ್ಲ್ ರಾಯಲ್ಸ್‌ ಪರ ಆಡಿದರು.

ನವದೆಹಲಿ: ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಮತ್ತು SA20 ಲೀಗ್ ಕಮಿಷನರ್ ಗ್ರೇಮ್ ಸ್ಮಿತ್ ಅವರು ದಿನೇಶ್ ಕಾರ್ತಿಕ್ ಅವರನ್ನು "ದೊಡ್ಡ ಆಸ್ತಿ" ಎಂದು ಕರೆದಿದ್ದಾರೆ.

ಕಳೆದ ವರ್ಷ ಜೂನ್‌ನಲ್ಲಿ ಭಾರತೀಯ ಕ್ರಿಕೆಟ್‌ನಿಂದ ನಿವೃತ್ತರಾದ ನಂತರ SA20 ನಲ್ಲಿ ಕಾಣಿಸಿಕೊಂಡ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದ ಕಾರ್ತಿಕ್, ಇತ್ತೀಚೆಗೆ ಮುಕ್ತಾಯಗೊಂಡ ಮೂರನೇ ಆವೃತ್ತಿಯಲ್ಲಿ ಪಾರ್ಲ್ ರಾಯಲ್ಸ್‌ ಪರ ಆಡಿದರು.

ಮಂಗಳವಾರ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಗ್ರೇಮ್ ಸ್ಮಿತ್, "ದಿನೇಶ್ ಕಾರ್ತಿಕ್ ಅದ್ಭುತ ವೃತ್ತಿಪರ ಆಟಗಾರರಾಗಿದ್ದು, ಈ ಬಾರಿ SA20ಗೆ ದೊಡ್ಡ ಆಸ್ತಿಯಾಗಿದ್ದಾರೆ. ಅವರು ಉತ್ತಮ ಪ್ರದರ್ಶನ ನೀಡಿದರು, ಮಧ್ಯಮ ಕ್ರಮಾಂಕದಲ್ಲಿ ಪ್ರಮುಖ ಹೊಡೆತಗಳೊಂದಿಗೆ ವಿಕೆಟ್‌ಗಳನ್ನು ಪರಿಣಾಮಕಾರಿಯಾಗಿ ಕಾಪಾಡಿದರು. ಕಾಮೆಂಟರಿ ಮತ್ತು ಜನ ಸಂಪರ್ಕ (PR)ಕಾರ್ಯಕ್ರಮಗಳಲ್ಲಿ ಅವರು ಇರುವುದು ಅದ್ಬುತವಾಗಿದೆ. ಚೆನ್ನಾಗಿ ಮಾತನಾಡುತ್ತಾರೆ. ಆಟವನ್ನು ಚೆನ್ನಾಗಿ ಅರ್ಥಮಾಡಿಕೊಂಡಿದ್ದಾರೆ. ಭಾವೋದ್ರಿಕ್ತ ಪ್ರೇಕ್ಷಕರು ಮತ್ತು ಸ್ಪರ್ಧಾತ್ಮಕ ಕ್ರಿಕೆಟ್ ಬಗ್ಗೆ ಅವರು ಬಹಳವಾಗಿ ಮಾತನಾಡಿದರು ಎಂದು ತಿಳಿಸಿದರು.

39 ವರ್ಷದ ಕಾರ್ತಿಕ್ ಅವರು ಪಾರ್ಲ್ ರಾಯಲ್ಸ್ ಪರ 11 ಪಂದ್ಯಗಳಲ್ಲಿ 130 ರನ್ ಗಳಿಸಿದರು. ಡೇವಿಡ್ ಮಿಲ್ಲರ್ ನೇತೃತ್ವದ ರಾಯಲ್ಸ್ ತಂಡದಲ್ಲಿ ಜೋ ರೂಟ್, ಲುಂಗಿ ಎನ್‌ಗಿಡಿ ಮತ್ತು ಮುಜೀಬ್ ಉರ್ ರೆಹಮಾನ್‌ರಂತಹ ಅಂತರಾಷ್ಟ್ರೀಯ ಕ್ರಿಕೆಟ್ ಆಟಗಾರರು ಇದ್ದರು.

ಭಾರತೀಯ ಕ್ರಿಕೆಟ್ ನಿಂದ ನಿವೃತ್ತಿಯಾದ ನಂತರ ವಿದೇಶದ ಫ್ರಾಂಚೈಸ್ ಲೀಗ್‌ಗಳಲ್ಲಿ ಆಡಲು ದಿನೇಶ್ ಕಾರ್ತಿಕ್ ಗೆ ಅವಕಾಶ ಸಿಕ್ಕಿತ್ತು. ಈ ಮಧ್ಯೆ MI ಕೇಪ್ ಟೌನ್ ತಮ್ಮ ಚೊಚ್ಚಲ SA20 ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT