ಟೀಂ ಇಂಡಿಯಾ 
ಕ್ರಿಕೆಟ್

3rd ODI: ಗಿಲ್ ಸ್ಫೋಟಕ ಶತಕ; ಇಂಗ್ಲೆಂಡ್ ವಿರುದ್ಧ ಗೆದ್ದ ಭಾರತ; ಸರಣಿ ವೈಟ್‌ವಾಶ್ ಮಾಡಿದ ರೋಹಿತ್ ಪಡೆ!

ಭಾರತ ಮತ್ತೊಮ್ಮೆ ಇಂಗ್ಲೆಂಡ್ ವಿರುದ್ಧ ತನ್ನ ಪ್ರಾಬಲ್ಯವನ್ನು ಸಾಬೀತುಪಡಿಸಿದೆ. ಎಲ್ಲಾ ವಿಭಾಗಗಳಲ್ಲಿ ಗಮನಾರ್ಹ ಪ್ರದರ್ಶನ ನೀಡಿದೆ.

ಅಹಮದಾಬಾದ್: ಟೀಂ ಇಂಡಿಯಾದ ಅದ್ಭುತ ಆಲ್‌ರೌಂಡ್ ಪ್ರದರ್ಶನದಿಂದಾಗಿ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 142 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ, ಭಾರತ ಇಂಗ್ಲೆಂಡ್ ವಿರುದ್ಧ 3-0 ಸರಣಿಯನ್ನು ವೈಟ್‌ವಾಶ್ ಮಾಡಿದೆ.

ಭಾರತ ಮತ್ತೊಮ್ಮೆ ಇಂಗ್ಲೆಂಡ್ ವಿರುದ್ಧ ತನ್ನ ಪ್ರಾಬಲ್ಯವನ್ನು ಸಾಬೀತುಪಡಿಸಿದೆ. ಎಲ್ಲಾ ವಿಭಾಗಗಳಲ್ಲಿ ಗಮನಾರ್ಹ ಪ್ರದರ್ಶನ ನೀಡಿದೆ. ಇಂಗ್ಲೆಂಡ್ ಮತ್ತೊಮ್ಮೆ ಬ್ಯಾಟಿಂಗ್ ಮತ್ತು ಬಾಲ್‌ನಲ್ಲಿ ಎಡವಿತು, ಮತ್ತೊಂದು ಭಾರೀ ಸೋಲನ್ನು ಅನುಭವಿಸಿತು.

ಮೊದಲು ಬ್ಯಾಟಿಂಗ್ ಮಾಡಿದ್ದ ಟೀಮ್ ಇಂಡಿಯಾ 357 ರನ್‌ಗಳ ಬೃಹತ್ ಮೊತ್ತವನ್ನು ಗಳಿಸಿ, ಇನ್ನಿಂಗ್ಸ್‌ನ ಕೊನೆಯ ಎಸೆತದಲ್ಲಿ ಆಲೌಟ್ ಆಯಿತು. ಶುಭಮನ್ ಗಿಲ್ ಅದ್ಭುತ ಶತಕದೊಂದಿಗೆ ಮಿಂಚಿದರು. ಇನ್ನು ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್ ನಿರ್ಣಾಯಕ ಅರ್ಧಶತಕಗಳ ಗಳಿಸಿದರು. ಇಂಗ್ಲೆಂಡ್‌ನ ಆದಿಲ್ ರಶೀದ್ ಅತ್ಯುತ್ತಮ ಬೌಲರ್ ಆಗಿದ್ದು ನಾಲ್ಕು ವಿಕೆಟ್‌ಗಳನ್ನು ಪಡೆದರು. ಮಾರ್ಕ್ ವುಡ್ ಎರಡು ವಿಕೆಟ್ ಪಡೆದರು. ಜೋ ರೂಟ್ ಮತ್ತು ಸಕೀಬ್ ಅಹ್ಮದ್ ತಲಾ ಒಂದು ವಿಕೆಟ್ ಪಡೆದರು.

ಭಾರತ ನೀಡಿದ 358 ರನ್ ಗಳ ಬೃಹತ್ ಮೊತ್ತ ಬೆನ್ನಟ್ಟಿದ ಇಂಗ್ಲೆಂಡ್ 214 ರನ್ ಗಳಿಗೆ ಸರ್ವಪತನ ಕಂಡಿದೆ. ಇಂಗ್ಲೆಂಡ್ ಉತ್ತಮ ಆರಂಭ ಪಡೆಯಿತು. ಆದರೆ ಅರ್ಷದೀಪ್ ಸಿಂಗ್ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದು ಆರಂಭಿಕ ಪಿಲ್ ಸಾಲ್ಟ್ 23 ಮತ್ತು ಬೆನ್ ಡಕೆಟ್ 34 ರನ್ ಗಳಿಗೆ ಔಟ್ ಮಾಡಿದರು. ನಂತರ ಬಂದ ಟಾಮ್ ಬ್ಯಾಂಟನ್ 38 ರನ್ ಗಳಿಸಿ ಔಟಾದರು. ಗಸ್ ಅಟ್ಕಿನ್ಸನ್ ಅತ್ಯುತ್ತಮವಾಗಿ 38 ರನ್ ಬಾರಿಸಿದರು. ಆದರೆ ನಂತರ ಬಂದ ಆಟಗಾರರು ರನ್ ಗಳಿಸುವಲ್ಲಿ ವಿಫಲರಾದರು. ಭಾರತದ ಪರ ಅರ್ಷ್ ದೀಪ್, ಹರ್ಷಿತ್ ರಾಣಾ, ಅಕ್ಷರ್ ಪಟೇಲ್ ಮತ್ತು ಹಾರ್ದಿಕ್ ಪಾಂಡ್ಯ ತಲಾ 2 ವಿಕೆಟ್ ಪಡೆದರೆ ವಾಷಿಂಗ್ಟನ್ ಸುಂದರ್ ಮತ್ತು ಕುಲದೀಪ್ ಯಾದವ್ ತಲಾ 1 ವಿಕೆಟ್ ಪಡೆದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಬುಡ ಸಹಿತ ಕಿತ್ತು ಬಿಸಾಡುತ್ತೇವೆ': ಕದನ ವಿರಾಮ ಉಲ್ಲಂಘನೆ ಕುರಿತು ಹಮಾಸ್ ಗೆ ಡೊನಾಲ್ಡ್ ಟ್ರಂಪ್ ಎಚ್ಚರಿಕೆ!

Bengaluru: 'ಪರೀಕ್ಷೆ ನೆಪದಲ್ಲಿ ಮುತ್ತಿಟ್ಟು, ಬಟ್ಟೆ ಬಿಚ್ಚಲು ಒತ್ತಾಯಿಸಿದ ಡಾಕ್ಟರ್': ಯುವತಿ ದೂರು, ಬಂಧನ

'ಯಾವನಿಗ್ ಬೇಕ್ ನಿನ್ ಗಿಫ್ಟ್'..!: ಮಾಲೀಕ ನೀಡಿದ ದೀಪಾವಳಿ ಉಡುಗೊರೆಯ ಗೇಟ್ ಬಳಿ ಎಸೆದ ಉದ್ಯೋಗಿಗಳು! Video

ಮೋದಿ ಸರ್ಕಾರದ GST ಬದಲಾವಣೆಯಿಂದ ರಾಜ್ಯಕ್ಕೆ15 ಸಾವಿರ ಕೋಟಿ ನಷ್ಟ: ಕುಮಾರಸ್ವಾಮಿ ಸೇರಿ ಎಲ್ಲಾ ಸಂಸದರನ್ನು ಸೋಲಿಸಿ; ಸಿದ್ದರಾಮಯ್ಯ

Anekal: ಲಿವಿಂಗ್​ ಟುಗೆದರ್​ನಲ್ಲಿದ್ದ ಒಡಿಶಾ ಮೂಲದ ಜೋಡಿ ಆತ್ಮಹತ್ಯೆ! ಇದೇ ಕಾರಣ

SCROLL FOR NEXT