ಟೀಂ ಇಂಡಿಯಾ 
ಕ್ರಿಕೆಟ್

3rd ODI: ಗಿಲ್ ಸ್ಫೋಟಕ ಶತಕ; ಇಂಗ್ಲೆಂಡ್ ವಿರುದ್ಧ ಗೆದ್ದ ಭಾರತ; ಸರಣಿ ವೈಟ್‌ವಾಶ್ ಮಾಡಿದ ರೋಹಿತ್ ಪಡೆ!

ಭಾರತ ಮತ್ತೊಮ್ಮೆ ಇಂಗ್ಲೆಂಡ್ ವಿರುದ್ಧ ತನ್ನ ಪ್ರಾಬಲ್ಯವನ್ನು ಸಾಬೀತುಪಡಿಸಿದೆ. ಎಲ್ಲಾ ವಿಭಾಗಗಳಲ್ಲಿ ಗಮನಾರ್ಹ ಪ್ರದರ್ಶನ ನೀಡಿದೆ.

ಅಹಮದಾಬಾದ್: ಟೀಂ ಇಂಡಿಯಾದ ಅದ್ಭುತ ಆಲ್‌ರೌಂಡ್ ಪ್ರದರ್ಶನದಿಂದಾಗಿ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 142 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ, ಭಾರತ ಇಂಗ್ಲೆಂಡ್ ವಿರುದ್ಧ 3-0 ಸರಣಿಯನ್ನು ವೈಟ್‌ವಾಶ್ ಮಾಡಿದೆ.

ಭಾರತ ಮತ್ತೊಮ್ಮೆ ಇಂಗ್ಲೆಂಡ್ ವಿರುದ್ಧ ತನ್ನ ಪ್ರಾಬಲ್ಯವನ್ನು ಸಾಬೀತುಪಡಿಸಿದೆ. ಎಲ್ಲಾ ವಿಭಾಗಗಳಲ್ಲಿ ಗಮನಾರ್ಹ ಪ್ರದರ್ಶನ ನೀಡಿದೆ. ಇಂಗ್ಲೆಂಡ್ ಮತ್ತೊಮ್ಮೆ ಬ್ಯಾಟಿಂಗ್ ಮತ್ತು ಬಾಲ್‌ನಲ್ಲಿ ಎಡವಿತು, ಮತ್ತೊಂದು ಭಾರೀ ಸೋಲನ್ನು ಅನುಭವಿಸಿತು.

ಮೊದಲು ಬ್ಯಾಟಿಂಗ್ ಮಾಡಿದ್ದ ಟೀಮ್ ಇಂಡಿಯಾ 357 ರನ್‌ಗಳ ಬೃಹತ್ ಮೊತ್ತವನ್ನು ಗಳಿಸಿ, ಇನ್ನಿಂಗ್ಸ್‌ನ ಕೊನೆಯ ಎಸೆತದಲ್ಲಿ ಆಲೌಟ್ ಆಯಿತು. ಶುಭಮನ್ ಗಿಲ್ ಅದ್ಭುತ ಶತಕದೊಂದಿಗೆ ಮಿಂಚಿದರು. ಇನ್ನು ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್ ನಿರ್ಣಾಯಕ ಅರ್ಧಶತಕಗಳ ಗಳಿಸಿದರು. ಇಂಗ್ಲೆಂಡ್‌ನ ಆದಿಲ್ ರಶೀದ್ ಅತ್ಯುತ್ತಮ ಬೌಲರ್ ಆಗಿದ್ದು ನಾಲ್ಕು ವಿಕೆಟ್‌ಗಳನ್ನು ಪಡೆದರು. ಮಾರ್ಕ್ ವುಡ್ ಎರಡು ವಿಕೆಟ್ ಪಡೆದರು. ಜೋ ರೂಟ್ ಮತ್ತು ಸಕೀಬ್ ಅಹ್ಮದ್ ತಲಾ ಒಂದು ವಿಕೆಟ್ ಪಡೆದರು.

ಭಾರತ ನೀಡಿದ 358 ರನ್ ಗಳ ಬೃಹತ್ ಮೊತ್ತ ಬೆನ್ನಟ್ಟಿದ ಇಂಗ್ಲೆಂಡ್ 214 ರನ್ ಗಳಿಗೆ ಸರ್ವಪತನ ಕಂಡಿದೆ. ಇಂಗ್ಲೆಂಡ್ ಉತ್ತಮ ಆರಂಭ ಪಡೆಯಿತು. ಆದರೆ ಅರ್ಷದೀಪ್ ಸಿಂಗ್ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದು ಆರಂಭಿಕ ಪಿಲ್ ಸಾಲ್ಟ್ 23 ಮತ್ತು ಬೆನ್ ಡಕೆಟ್ 34 ರನ್ ಗಳಿಗೆ ಔಟ್ ಮಾಡಿದರು. ನಂತರ ಬಂದ ಟಾಮ್ ಬ್ಯಾಂಟನ್ 38 ರನ್ ಗಳಿಸಿ ಔಟಾದರು. ಗಸ್ ಅಟ್ಕಿನ್ಸನ್ ಅತ್ಯುತ್ತಮವಾಗಿ 38 ರನ್ ಬಾರಿಸಿದರು. ಆದರೆ ನಂತರ ಬಂದ ಆಟಗಾರರು ರನ್ ಗಳಿಸುವಲ್ಲಿ ವಿಫಲರಾದರು. ಭಾರತದ ಪರ ಅರ್ಷ್ ದೀಪ್, ಹರ್ಷಿತ್ ರಾಣಾ, ಅಕ್ಷರ್ ಪಟೇಲ್ ಮತ್ತು ಹಾರ್ದಿಕ್ ಪಾಂಡ್ಯ ತಲಾ 2 ವಿಕೆಟ್ ಪಡೆದರೆ ವಾಷಿಂಗ್ಟನ್ ಸುಂದರ್ ಮತ್ತು ಕುಲದೀಪ್ ಯಾದವ್ ತಲಾ 1 ವಿಕೆಟ್ ಪಡೆದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಿಡದಿ ಟೌನ್​​ಶಿಪ್​​ಗೆ ಒಪ್ಪಿದ ರೈತರು; HDK ವಿರೋಧದ ನಡುವೆ ಜೂನ್ 1 ರಿಂದಲೇ ಹಣ ಬಿಡುಗಡೆ: ಡಿಕೆಶಿ ಮಹತ್ವದ ಘೋಷಣೆ

ಆರ್ಥಿಕತೆ ಎಕ್ಕುಟ್ಟಿ ಹೋಗಲಿ, ಆದ್ರೆ ಮೆಲೋನಿಗೆ 'ಮೆಲೋಡಿ' ಕೊಡುವುದು ತಡವಾಗ್ಬಾರ್ದು: ಖರ್ಗೆ ಕಿಡಿ

ವೈಭವ್ ಸೂರ್ಯವಂಶಿಗೆ, ಕ್ರಿಸ್ ಗೇಲ್ ಸಿಕ್ಸರ್ ದಾಖಲೆ ಮುರಿಯುವ ಸಾಮರ್ಥ್ಯ ಇದೆ: ಅನಿಲ್ ಕುಂಬ್ಳೆ ಹೀಗೆ ಹೇಳಿದ್ಯಾಕೆ?

'ಧುರಂಧರ್-2' ಸೇನಾ ರಹಸ್ಯ ಬಹಿರಂಗಪಡಿಸಿದೆಯೇ?: ಪರಿಶೀಲಿಸುವಂತೆ ಕೇಂದ್ರಕ್ಕೆ ದೆಹಲಿ ಹೈಕೋರ್ಟ್ ಸೂಚನೆ

43 ವರ್ಷಗಳ ಹಿಂದೆ ಕಳುವಾಗಿದ್ದ 19 ಕೋಟಿ ರೂ. ಮೌಲ್ಯದ 'ಅವಲೋಕಿತೇಶ್ವರ' ಪ್ರತಿಮೆ ಭಾರತಕ್ಕೆ ಹಿಂದಿರುಗಿಸುತ್ತಿದೆ ಅಮೆರಿಕ!

SCROLL FOR NEXT