ರೋಹಿತ್ ಶರ್ಮಾ 
ಕ್ರಿಕೆಟ್

ICC Champions Trophy 2025: 11 ಸಾವಿರ ರನ್, ದಾಖಲೆ ಬರೆದ Rohit Sharma

ಬಾಂಗ್ಲಾದೇಶ ನೀಡಿದ 229ರನ್ ಗಳ ಸಾಧಾರಣ ಗುರಿಯನ್ನು ಬೆನ್ನು ಹತ್ತಿರುವ ಭಾರತ ತಂಡದ ಪರ ರೋಹಿತ್ ಶರ್ಮಾ ಆರಂಭಿಕರಾಗಿ ಕಣಕ್ಕಿಳಿದರು. ಈ ವೇಳೆ 36 ಎಸೆತಗಳಲ್ಲಿ 7 ಬೌಂಡರಿ ಸಹಿತ ರೋಹಿತ್ ಶರ್ಮಾ 41 ರನ್ ಗಳಿಸಿ ಔಟಾದರು.

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ದಾಖಲೆ ನಿರ್ಮಾಣ ಮಾಡಿದ್ದು, ಈ ಸಾಧನೆ ಮಾಡಿದ ಭಾರತದ ನಾಲ್ಕನೇ ಆಟಗಾರ ಎನಿಸಿಕೊಂಡಿದ್ದಾರೆ.

ಹೌದು.. ದುಬೈನ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಬಾಂಗ್ಲಾದೇಶ ನೀಡಿದ 229ರನ್ ಗಳ ಸಾಧಾರಣ ಗುರಿಯನ್ನು ಬೆನ್ನು ಹತ್ತಿರುವ ಭಾರತ ತಂಡದ ಪರ ರೋಹಿತ್ ಶರ್ಮಾ ಆರಂಭಿಕರಾಗಿ ಕಣಕ್ಕಿಳಿದರು. ಈ ವೇಳೆ 36 ಎಸೆತಗಳಲ್ಲಿ 7 ಬೌಂಡರಿ ಸಹಿತ ರೋಹಿತ್ ಶರ್ಮಾ 41 ರನ್ ಗಳಿಸಿ ಔಟಾದರು.

ಇದೇ ಇನ್ನಿಂಗ್ಸ್ ನಲ್ಲಿ ರೋಹಿತ್ ಶರ್ಮಾ ತಮ್ಮ ಏಕದಿನ ರನ್ ಗಳಿಕೆಯನ್ನು 11 ಸಾವಿರಕ್ಕೆ ಏರಿಕೆ ಮಾಡಿಕೊಂಡಿದ್ದು, ಆ ಮೂಲಕ ಈ ಸಾಧನೆ ಮಾಡಿದ 4ನೇ ಭಾರತೀಯ ಆಟಗಾರ ಹಾಗೂ ಜಾಗತಿಕ 10ನೇ ಆಟಗಾರ ಎನಿಸಿಕೊಂಡಿದ್ದಾರೆ. ಇದಕ್ಕೂ ಮೊದಲು ಭಾರತದ ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ, ಆಸ್ಟ್ರೇಲಿಯಾದ ರಿಕ್ಕಿ ಪಾಂಟಿಂಗ್ ಮತ್ತು ಭಾರತದ ವಿರಾಟ್ ಕೊಹ್ಲಿ ಈ ಸಾಧನೆ ಮಾಡಿದ್ದರು.

ವೇಗದ 11 ಸಾವಿರ ರನ್, 2ನೇ ಆಟಗಾರ

ಅಂತೆಯೇ ರೋಹಿತ್ ಶರ್ಮಾ ವೇಗವಾಗಿ 11 ಸಾವಿರ ರನ್ ಗಳಿಸಿದ 2ನೇ ಆಟಗಾರ ಎಂಬ ಕೀರ್ತಿಗೂ ಭಾಜನರಾಗಿದ್ದು, ರೋಹಿತ್ ಈ ಸಾಧನೆಗಾಗಿ 261 ಇನ್ನಿಂಗ್ಸ್ ತೆಗೆದುಕೊಂಡಿದ್ದಾರೆ. 222 ಇನ್ನಿಂಗ್ಸ್ ಗಳಲ್ಲಿ 11 ಸಾವಿರ ರನ್ ಕಲೆಹಾಕಿರುವ ಕೊಹ್ಲಿ ಈ ಪಟ್ಟಿಯಲ್ಲಿ ಅಗ್ರಸ್ಥಾನಿಯಾಗಿದ್ದಾರೆ. 276 ಇನ್ನಿಂಗ್ಸ್ ಗಳಲ್ಲಿ 11 ಸಾವಿರ ರನ್ ಗಳಿಸಿರುವ ಸಚಿನ್ 3 ಮತ್ತು 286 ಇನ್ನಿಂಗ್ಸ್ ಗಳಲ್ಲಿ ಈ ಸಾಧನೆ ಮಾಡಿರುವ ರಿಕ್ಕಿ ಪಾಂಟಿಂಗ್ 4ನೇ ಸ್ಥಾನದಲ್ಲಿದ್ದಾರೆ. ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ 288 ಇನ್ನಿಂಗ್ಸ್ ಗಳಲ್ಲಿ 11 ಸಾವಿರ ರನ್ ಕಲೆಹಾಕಿದ್ದರು.

Fewest inngs to 11,000 ODI runs

  • 222 Virat Kohli

  • 261 Rohit Sharma

  • 276 Sachin Tendulkar

  • 286 Ricky Ponting

  • 288 Sourav Ganguly

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT