ಕರ್ನಾಟಕ ಬುಲ್ಡೋಜರ್ಸ್ ತಂಡ 
ಕ್ರಿಕೆಟ್

CCL 2025: ಪಂಜಾಬ್ ವಿರುದ್ಧ ರೋಚಕ ಸೋಲು, ಸೆಮಿಫೈನಲ್‌ಗೆ ಲಗ್ಗೆಯಿಟ್ಟ ಕರ್ನಾಟಕ ಬುಲ್ಡೋಜರ್ಸ್!

ಟಾಸ್ ಗೆದ್ದ ಪಂಜಾಬ್ ದಿ ಶೇರ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲ ಇನಿಂಗ್ಸ್‌ನಲ್ಲಿ ನಿಗದಿತ 10 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 121 ರನ್ ಗಳಿಸಿತು.

ಸೂರತ್‌ನಲ್ಲಿ ನಡೆದ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್) 2025ರ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಕಿಚ್ಚ ಸುದೀಪ್ ನಾಯಕತ್ವದ ಕರ್ನಾಟಕ ಬುಲ್ಡೋಜರ್ಸ್ ತಂಡ ಪಂಜಾಬ್ ದಿ ಶೇರ್ ವಿರುದ್ಧ 2 ರನ್‌ಗಳಿಂದ ರೋಚಕ ಸೋಲು ಕಂಡಿದೆ. ಈಗಾಗಲೇ ಮೂರು ಪಂದ್ಯಗಳನ್ನು ಗೆದ್ದಿರುವ ಕರ್ನಾಟಕ ಬುಲ್ಡೋಜರ್ಸ್ ಪಂದ್ಯವು ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದೆ.

ನಾಯಕ ಕಿಚ್ಚ ಸುದೀಪ್ ಅನೂಪ್ ಭಂಡಾರಿಗೆ ವಿಶ್ರಾಂತಿ ನೀಡಿ, ಅರ್ಜುನ್ ಯೋಗಿಯನ್ನು ಕರೆತಂದಿದ್ದರು. ಟಾಸ್ ಗೆದ್ದ ಪಂಜಾಬ್ ದಿ ಶೇರ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲ ಇನಿಂಗ್ಸ್‌ನಲ್ಲಿ ನಿಗದಿತ 10 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 121 ರನ್ ಗಳಿಸಿತು. ಪಂಜಾಬ್ ಪರ, ಬಬ್ಬಲ್ ರೈ 38 ರನ್, ರಾಹುಲ್ ಜೈಟ್ಲಿ 18 ರನ್, ನಿಂಜಾ 17 ರನ್, ಅನುಜ್ ಖುರಾನ 21 ರನ್ ಗಳಿಸಿದರು.

ಬಳಿಕ ಬ್ಯಾಟಿಂಗ್ ಆರಂಭಿಸಿದ ಕರ್ನಾಟಕ ಬುಲ್ಡೋಜರ್ಸ್ ತಂಡ ಮೊದಲ ಇನಿಂಗ್ಸ್‌ನಲ್ಲಿ ನಿಗದಿತ 10 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 91 ರನ್ ಕಲೆಹಾಕಿತು. ಈ ಮೂಲಕ 30 ರನ್‌ಗಳ ಹಿನ್ನಡೆ ಅನುಭವಿಸಿತು.

ಎರಡನೇ ಇನಿಂಗ್ಸ್‌ನಲ್ಲಿ ಪಂಜಾಬ್ ದಿ ಶೇರ್ ತಂಡವನ್ನು ಕರ್ನಾಟಕ ಬುಲ್ಡೋಜರ್ಸ್ ತಂಡದ ಬೌಲರ್‌ಗಳು ಕಡಿಮೆ ರನ್‌ಗಳಿಗೆ ಕಟ್ಟಿಹಾಕಿದರು. ನಿಗದಿತ 10 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ ಪಂಜಾಬ್ ತಂಡ 94 ರನ್ ಕಲೆಹಾಕಿತು. ಪಂಜಾಬ್ ನೀಡಿದ 125 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಕರ್ನಾಟಕ ಬುಲ್ಡೋಜರ್ಸ್ ಎರಡನೇ ಇನಿಂಗ್ಸ್‌ನಲ್ಲಿ ಮೂರು ವಿಕೆಟ್ ನಷ್ಟಕ್ಕೆ 2 ರನ್‌ಗಳಿಂದ ರೋಚಕ ಸೋಲು ಕಂಡಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT