ಭಾರತ ಪಾಕ್ ಪಂದ್ಯ 
ಕ್ರಿಕೆಟ್

ICC Champions Trophy 2025: ಮಂಕಾದ ಪಾಕಿಸ್ತಾನ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು 242 ರನ್ ಗುರಿ!

ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ರ ಇಂದಿನ ಹೈವೋಲ್ಟೇಜ್ ಪಂದ್ಯದಲ್ಲಿ ಪಾಕಿಸ್ತಾನ 241 ರನ್ ಗಳಿಸಿ ಭಾರತಕ್ಕೆ ಗೆಲ್ಲಲು 242 ರನ್ ಗಳ ಗುರಿ ನೀಡಿದೆ.

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ರ ಇಂದಿನ ಹೈವೋಲ್ಟೇಜ್ ಪಂದ್ಯದಲ್ಲಿ ಪಾಕಿಸ್ತಾನ 241 ರನ್ ಗಳಿಸಿ ಭಾರತಕ್ಕೆ ಗೆಲ್ಲಲು 242 ರನ್ ಗಳ ಗುರಿ ನೀಡಿದೆ.

ದುಬೈನ ದುಬೈ ಅಂತಾರಾಷ್ಚ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಮಹಮದ್ ರಿಜ್ವಾನ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು.

ಆರಂಭಿಕರಾಗಿ ಕಣಕ್ಕಿಳಿದ ಬಾಬರ್ ಆಜಂ (23 ರನ್) ಮತ್ತು ಇಮಾಮ್ ಉಲ್ ಹಕ್ (10 ರನ್) ಉತ್ತಮ ಆರಂಭ ನೀಡಿದರಾದರೂ ಇಬ್ಬರೂ ಬೇಗನೆ ಪೆವಿಲಿಯನ್ ಸೇರಿಕೊಂಡರು. ಬಾಬರ್ ಆಜಂರನ್ನು ಹಾರ್ದಿಕ್ ಪಾಂಡ್ಯಾ ಔಟ್ ಮಾಡಿದರೆ, ಇಮಾಮ್ ಉಲ್ ಹಕ್ ರನ್ನು ಅಕ್ಸರ್ ಪಟೇಲ್ ಅದ್ಭುತವಾಗಿ ರನೌಟ್ ಮಾಡಿದರು.

ಆದರೆ ಬಳಿಕ ಕ್ರೀಸ್ ಗೆ ಬಂದ ಸೌದ್ ಶಕೀಲ್ (62 ರನ್) ಮತ್ತು ನಾಯಕ ಮಹಮದ್ ರಿಜ್ವಾನ್ (46 ರನ್) ರಕ್ಷಣಾತ್ಮಕ ಆಟದ ಮೊರೆ ಹೋದರು. ಪರಿಣಾಮ ಈ ಜೋಡಿ 3ನೇ ವಿಕೆಟ್ ಗೆ 104 ರನ್ ಗಳ ಜೊತೆಯಾಟವಾಡಿದರು. ಈ ಪೈಕಿ ಸೌದ್ ಶಕೀಲ್ ಅರ್ಧಶತಕ ಸಿಡಿಸಿದರೆ, ರಿಜ್ವಾನ್ ಅಕ್ಸರ್ ಪಟೇಲ್ ಬೌಲಿಂಗ್ ನಲ್ಲಿ ಬೌಲ್ಡ್ ಆದರು. ಬಳಿಕ ಸೌದ್ ಶಕೀಲ್ ಕೂಡ ಹಾರ್ದಿಕ್ ಪಾಂಡ್ಯಾಗೆ ವಿಕೆಟ್ ಒಪ್ಪಿಸಿದರು.

ಈ ಇಬ್ಬರು ಔಟಾದರ ಬಳಿಕ ಪಾಕಿಸ್ತಾನ ತಂಡದಿಂದ ಅಂತಹ ಪ್ರಭಾವಶಾಲಿ ಬ್ಯಾಟಿಂಗ್ ಮೂಡಿಬರಲಿಲ್ಲ. ಕುಶ್ದಿಲ್ ಶಾ 38 ರನ್ ಗಳಿಸಿ ಪಾಕ್ ಇನ್ನಿಂಗ್ಸ್ ಗೆ ಜೀವ ತುಂಬುವ ಪ್ರಯತ್ನ ಮಾಡಿದರೂ ಅವರಿಗೆ ಇತರೆ ಆಟಗಾರರಿಂದ ಸಾಥ್ ದೊರೆಯಲಿಲ್ಲ. ಅಂತಿಮವಾಗಿ 49.4 ಓವರ್ ನಲ್ಲಿ ಪಾಕಿಸ್ತಾನ 241 ರನ್ ಗಳಿಗೆ ಆಲೌಟ್ ಆಯಿತು.

ಭಾರತದ ಪರ ಕುಲದೀಪ್ ಯಾದವ್ 3, ಹಾರ್ದಿಕ್ ಪಾಂಡ್ಯಾ 2, ಹರ್ಷಿತ್ ರಾಣಾ, ಅಕ್ಸರ್ ಪಟೇಲ್ ಮತ್ತು ರವೀಂದ್ರ ಜಡೇಜಾ ತಲಾ 1 ವಿಕೆಟ್ ಪಡೆದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT