ಟಾಸ್ ಗೆದ್ದ ಪಾಕಿಸ್ತಾನ ಬ್ಯಾಟಿಂಗ್ ಆಯ್ಕೆ 
ಕ್ರಿಕೆಟ್

ICC Champions Trophy 2025: ಹೈವೋಲ್ಟೇಜ್ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ, ಬ್ಯಾಟಿಂಗ್ ಆಯ್ಕೆ

ದುಬೈನ ದುಬೈ ಅಂತಾರಾಷ್ಚ್ರೀಯ ಕ್ರಿಕೆಟ್ ಮೈದಾನದಲ್ಲಿ ಈ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಮಹಮದ್ ರಿಜ್ವಾನ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಇಂದಿನ ಹೈವೋಲ್ಟೇಜ್ ಪಂದ್ಯದಲ್ಲಿ ಪಾಕಿಸ್ತಾನ ತಂಡ ಟಾಸ್ ಗೆದ್ದಿದ್ದು, ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ದುಬೈನ ದುಬೈ ಅಂತಾರಾಷ್ಚ್ರೀಯ ಕ್ರಿಕೆಟ್ ಮೈದಾನದಲ್ಲಿ ಈ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಮಹಮದ್ ರಿಜ್ವಾನ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಪಾಕ್ ತಂಡದಲ್ಲಿ ಒಂದು ಬದಲಾವಣೆ

ಟಾಸ್ ಬಳಿಕ ಮಾತನಾಡಿದ ಪಾಕಿಸ್ತಾನ ತಂಡದ ನಾಯಕ ರಿಜ್ವಾನ್, 'ಮೊದಲು ಬ್ಯಾಟಿಂಗ್ ಮಾಡುತ್ತೇವೆ, ಪಿಚ್ ಉತ್ತಮ ಮೇಲ್ಮೈಯಂತೆ ಕಾಣುತ್ತಿದೆ. ಉತ್ತಮ ಗುರಿಯನ್ನು ಹಾಕಲು ಬಯಸುತ್ತೇವೆ. ಐಸಿಸಿ ಈವೆಂಟ್‌ಗಳಲ್ಲಿ ಪ್ರತಿಯೊಂದು ಪಂದ್ಯವೂ ಮುಖ್ಯವಾಗಿದೆ, ನಾವು ವಿಷಯಗಳನ್ನು ಸಾಮಾನ್ಯವಾಗಿರಿಸುತ್ತೇವೆ. ನಮ್ಮ ಆಟಗಾರರು ಈ ಪರಿಸ್ಥಿತಿಗಳೊಂದಿಗೆ ಆಡಿ ಪರಿಚಿತರಾಗಿದ್ದಾರೆ, ನಾವು ಇಲ್ಲಿ ಉತ್ತಮವಾಗಿ ಆಡಿದ್ದೇವೆ ಮತ್ತು ಇಂದು ನಮ್ಮ ಅತ್ಯುತ್ತಮ ಪ್ರದರ್ಶನ ನೀಡಲು ಬಯಸುತ್ತೇವೆ. ನಾವು ನಮ್ಮ ಕೊನೆಯ ಪಂದ್ಯವನ್ನು ಸೋತಿದ್ದೇವೆ. ಈಗ ಉತ್ತಮ ಪಂದ್ಯವನ್ನಾಡಲು ಬಯಸುತ್ತೇವೆ ಎಂದು ಹೇಳಿದರು.

ಅಂತೆಯೇ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಫಖರ್ ಜಮಾನ್ ಬದಲಿಗೆ ಇಮಾಮ್ ಆಡುತ್ತಿದ್ದಾರೆ ಎಂದು ಹೇಳಿದರು.

ಬಳಿಕ ಮಾತನಾಡಿದ ಭಾರತ ತಂಡದ ನಾಯಕ ರೋಹಿತ್ ಶರ್ಮಾ,'ಟಾಸ್ ನಿರ್ಧಾರ ಈಗ ನಿಜಕ್ಕೂ ಅಪ್ರಸ್ತುತ. ಏಕೆಂದರೆ ಅವರು ಟಾಸ್ ಗೆದ್ದರು. ನಾವು ಕೂಡ ಟಾಸ್ ಗೆದಿದ್ದರೆ ಮೊದಲು ಬೌಲಿಂಗ್ ಮಾಡುವ ನಿರ್ಧಾರ ಮಾಡುತ್ತಿದ್ದೆ. ಪಿಚ್ ಕಳೆದ ಪಂದ್ಯದಂತೆಯೇ ಕಾಣುತ್ತದೆ, ಮೇಲ್ಮೈ ನಿಧಾನಗತಿಯಲ್ಲಿದೆ. ನಮ್ಮಲ್ಲಿ ಬ್ಯಾಟಿಂಗ್‌ನಲ್ಲಿ ಅನುಭವಿ ತಂಡವಿದೆ, ಆದ್ದರಿಂದ ಪಿಚ್‌ಗಳು ನಿಧಾನವಾದರೆ ನಾವು ಏನು ಮಾಡಬೇಕೆಂದು ನಮಗೆ ತಿಳಿದಿದೆ. ಬ್ಯಾಟ್ ಮತ್ತು ಚೆಂಡಿನೊಂದಿಗೆ ತಂಡದಿಂದ ಒಟ್ಟಾರೆ ಪ್ರದರ್ಶನ ಬೇಕು. ಕೊನೆಯ ಪಂದ್ಯ ನಮಗೆ ಸುಲಭವಾಗಿರಲಿಲ್ಲ, ಅದು ಯಾವಾಗಲೂ ಒಳ್ಳೆಯದು. ನೀವು ಒತ್ತಡದಲ್ಲಿರಲು ಮತ್ತು ನಿಮ್ಮನ್ನು ಪರೀಕ್ಷಿಸಲು ಬಯಸುತ್ತೀರಿ ಎಂದು ಹೇಳಿದರು.

ಅಂತೆಯೇ ಬಾಂಗ್ಲಾದೇಶ ವಿರುದ್ಧ ಆಡಿದ ತಂಡವನ್ನೇ ಮುಂದುವರೆಸುತ್ತಿರುವುದಾಗಿ ರೋಹಿತ್ ಶರ್ಮಾ ಹೇಳಿದರು.

ತಂಡಗಳು ಇಂತಿವೆ.

ಭಾರತ: ರೋಹಿತ್ ಶರ್ಮಾ(ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್

ಪಾಕಿಸ್ತಾನ: ಇಮಾಮ್-ಉಲ್-ಹಕ್, ಬಾಬರ್ ಅಜಮ್, ಸೌದ್ ಶಕೀಲ್, ಮೊಹಮ್ಮದ್ ರಿಜ್ವಾನ್ (w/c), ಸಲ್ಮಾನ್ ಆಘಾ, ತಯ್ಯಬ್ ತಾಹಿರ್, ಖುಶ್ದಿಲ್ ಶಾ, ಶಾಹೀನ್ ಅಫ್ರಿದಿ, ನಸೀಮ್ ಶಾ, ಹರಿಸ್ ರೌಫ್, ಅಬ್ರಾರ್ ಅಹ್ಮದ್.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT