ಟಾಸ್ ಗೆದ್ದ ಪಾಕಿಸ್ತಾನ ಬ್ಯಾಟಿಂಗ್ ಆಯ್ಕೆ 
ಕ್ರಿಕೆಟ್

ICC Champions Trophy 2025: ಹೈವೋಲ್ಟೇಜ್ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ, ಬ್ಯಾಟಿಂಗ್ ಆಯ್ಕೆ

ದುಬೈನ ದುಬೈ ಅಂತಾರಾಷ್ಚ್ರೀಯ ಕ್ರಿಕೆಟ್ ಮೈದಾನದಲ್ಲಿ ಈ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಮಹಮದ್ ರಿಜ್ವಾನ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಇಂದಿನ ಹೈವೋಲ್ಟೇಜ್ ಪಂದ್ಯದಲ್ಲಿ ಪಾಕಿಸ್ತಾನ ತಂಡ ಟಾಸ್ ಗೆದ್ದಿದ್ದು, ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ದುಬೈನ ದುಬೈ ಅಂತಾರಾಷ್ಚ್ರೀಯ ಕ್ರಿಕೆಟ್ ಮೈದಾನದಲ್ಲಿ ಈ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಮಹಮದ್ ರಿಜ್ವಾನ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಪಾಕ್ ತಂಡದಲ್ಲಿ ಒಂದು ಬದಲಾವಣೆ

ಟಾಸ್ ಬಳಿಕ ಮಾತನಾಡಿದ ಪಾಕಿಸ್ತಾನ ತಂಡದ ನಾಯಕ ರಿಜ್ವಾನ್, 'ಮೊದಲು ಬ್ಯಾಟಿಂಗ್ ಮಾಡುತ್ತೇವೆ, ಪಿಚ್ ಉತ್ತಮ ಮೇಲ್ಮೈಯಂತೆ ಕಾಣುತ್ತಿದೆ. ಉತ್ತಮ ಗುರಿಯನ್ನು ಹಾಕಲು ಬಯಸುತ್ತೇವೆ. ಐಸಿಸಿ ಈವೆಂಟ್‌ಗಳಲ್ಲಿ ಪ್ರತಿಯೊಂದು ಪಂದ್ಯವೂ ಮುಖ್ಯವಾಗಿದೆ, ನಾವು ವಿಷಯಗಳನ್ನು ಸಾಮಾನ್ಯವಾಗಿರಿಸುತ್ತೇವೆ. ನಮ್ಮ ಆಟಗಾರರು ಈ ಪರಿಸ್ಥಿತಿಗಳೊಂದಿಗೆ ಆಡಿ ಪರಿಚಿತರಾಗಿದ್ದಾರೆ, ನಾವು ಇಲ್ಲಿ ಉತ್ತಮವಾಗಿ ಆಡಿದ್ದೇವೆ ಮತ್ತು ಇಂದು ನಮ್ಮ ಅತ್ಯುತ್ತಮ ಪ್ರದರ್ಶನ ನೀಡಲು ಬಯಸುತ್ತೇವೆ. ನಾವು ನಮ್ಮ ಕೊನೆಯ ಪಂದ್ಯವನ್ನು ಸೋತಿದ್ದೇವೆ. ಈಗ ಉತ್ತಮ ಪಂದ್ಯವನ್ನಾಡಲು ಬಯಸುತ್ತೇವೆ ಎಂದು ಹೇಳಿದರು.

ಅಂತೆಯೇ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಫಖರ್ ಜಮಾನ್ ಬದಲಿಗೆ ಇಮಾಮ್ ಆಡುತ್ತಿದ್ದಾರೆ ಎಂದು ಹೇಳಿದರು.

ಬಳಿಕ ಮಾತನಾಡಿದ ಭಾರತ ತಂಡದ ನಾಯಕ ರೋಹಿತ್ ಶರ್ಮಾ,'ಟಾಸ್ ನಿರ್ಧಾರ ಈಗ ನಿಜಕ್ಕೂ ಅಪ್ರಸ್ತುತ. ಏಕೆಂದರೆ ಅವರು ಟಾಸ್ ಗೆದ್ದರು. ನಾವು ಕೂಡ ಟಾಸ್ ಗೆದಿದ್ದರೆ ಮೊದಲು ಬೌಲಿಂಗ್ ಮಾಡುವ ನಿರ್ಧಾರ ಮಾಡುತ್ತಿದ್ದೆ. ಪಿಚ್ ಕಳೆದ ಪಂದ್ಯದಂತೆಯೇ ಕಾಣುತ್ತದೆ, ಮೇಲ್ಮೈ ನಿಧಾನಗತಿಯಲ್ಲಿದೆ. ನಮ್ಮಲ್ಲಿ ಬ್ಯಾಟಿಂಗ್‌ನಲ್ಲಿ ಅನುಭವಿ ತಂಡವಿದೆ, ಆದ್ದರಿಂದ ಪಿಚ್‌ಗಳು ನಿಧಾನವಾದರೆ ನಾವು ಏನು ಮಾಡಬೇಕೆಂದು ನಮಗೆ ತಿಳಿದಿದೆ. ಬ್ಯಾಟ್ ಮತ್ತು ಚೆಂಡಿನೊಂದಿಗೆ ತಂಡದಿಂದ ಒಟ್ಟಾರೆ ಪ್ರದರ್ಶನ ಬೇಕು. ಕೊನೆಯ ಪಂದ್ಯ ನಮಗೆ ಸುಲಭವಾಗಿರಲಿಲ್ಲ, ಅದು ಯಾವಾಗಲೂ ಒಳ್ಳೆಯದು. ನೀವು ಒತ್ತಡದಲ್ಲಿರಲು ಮತ್ತು ನಿಮ್ಮನ್ನು ಪರೀಕ್ಷಿಸಲು ಬಯಸುತ್ತೀರಿ ಎಂದು ಹೇಳಿದರು.

ಅಂತೆಯೇ ಬಾಂಗ್ಲಾದೇಶ ವಿರುದ್ಧ ಆಡಿದ ತಂಡವನ್ನೇ ಮುಂದುವರೆಸುತ್ತಿರುವುದಾಗಿ ರೋಹಿತ್ ಶರ್ಮಾ ಹೇಳಿದರು.

ತಂಡಗಳು ಇಂತಿವೆ.

ಭಾರತ: ರೋಹಿತ್ ಶರ್ಮಾ(ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್

ಪಾಕಿಸ್ತಾನ: ಇಮಾಮ್-ಉಲ್-ಹಕ್, ಬಾಬರ್ ಅಜಮ್, ಸೌದ್ ಶಕೀಲ್, ಮೊಹಮ್ಮದ್ ರಿಜ್ವಾನ್ (w/c), ಸಲ್ಮಾನ್ ಆಘಾ, ತಯ್ಯಬ್ ತಾಹಿರ್, ಖುಶ್ದಿಲ್ ಶಾ, ಶಾಹೀನ್ ಅಫ್ರಿದಿ, ನಸೀಮ್ ಶಾ, ಹರಿಸ್ ರೌಫ್, ಅಬ್ರಾರ್ ಅಹ್ಮದ್.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT